ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಧಿಕಾರದ(ಮುಡಾ) ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದ್ದು, ಮುಡಾ ಮಾಜಿ ಅಧ್ಯಕ್ಷ ಒಂದೇ ದಿನದಲ್ಲಿ ಸುಮಾರು 800 ಕ್ಕೂ ಹೆಚ್ಚು ಸೈಟುಗಳಿಗೆ ಕಾನೂನು ಬಾಹಿರವಾಗಿ ಖಾತೆ ಮಾಡಿಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಸದ್ಯ ಈ ವಿಚಾರವಾಗಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಳ್, ಮೂಡ ಅಕ್ರಮ ಬಗೆದಷ್ಟು ಹೊರಬರುತ್ತಿದೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಒಂದೇ ದಿನದಲ್ಲಿ ಸುಮಾರು 800ಕ್ಕೂ ಹೆಚ್ಚು ಸೈಟುಗಳಿಗೆ ಕಾನೂನು ಬಾಹಿರವಾಗಿ ಖಾತೆ ಮಾಡಿರುವುದು ಲೋಕಾಯುಕ್ತ ಪೊಲೀಸರಿಗೆ ಇನ್ನು ಕಿವಿಗೆ ಕೇಳಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.
ಲೋಕಾಯುಕ್ತ ಪೊಲೀಸರು ಕಾಂಗ್ರೆಸ್ ಸರಕಾರದ ಕಾವಲು ಪಡೆಯಂತೆ ವರ್ತಿಸುತ್ತಿರುವುದು ಆಘಾತಕಾರಿ ವಿಷಯವಾಗಿದೆ. ಲೋಕಾಯುಕ್ತ ಪೊಲೀಸರು ಇಂತಹ ಗಂಭೀರ ವಿಷಯಗಳ ತನಿಖೆಯನ್ನು ನಡೆಸಲಾಗದಾಗ, ಲೋಕಾಯುಕ್ತವನ್ನು ವಿಸರ್ಜಿಸುವುದು ಒಳ್ಳೆಯದು ಎಂದು ಕಿಡಿಕಾರಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…