ಮೈಸೂರು: ಇಂದು (ಮೇ 11) ನಗರದಲ್ಲಿ ನಡೆದ ʼಸ್ವಾಭಿಮಾನಿಗೆ ಸಾವಿರ ನುಡಿ ನಮನʼ ವಿ.ಶ್ರೀನಿವಾಸ್ ಪ್ರಸಾದ್ ಶ್ರದ್ಧಾಂಜಲಿ ಕಾರ್ಯಕ್ರಮ ಕಾಂಗ್ರೆಸ್-ಬಿಜೆಪಿ ನಾಯಕರ ಸಮಾಗಮಕ್ಕೆ ವೇದಿಕೆಯಾಯಿತು.
ಡಾ.ಬಿ.ಆರ್. ಅಂಬೇಡ್ಕರ್ ಶಿಕ್ಷಣ ಹಾಗೂ ಸಾಂಸ್ಕೃತಿಕ ಟ್ರಸ್ಟ್, ಸಮಾನತೆ ಸ್ವಾಭಿಮಾನ-ಸ್ವಾವಲಂಬನೆ ಪ್ರತಿಷ್ಠಾನ ಮತ್ತು ಸಮಾನತೆ ಪ್ರಕಾಶನದ ಸಹಯೋಗದಲ್ಲಿ ಮಾನಂದವಾಡಿ ರಸ್ತೆಯ ರೇಷ್ಮೆ ಕಾರ್ಖಾನೆ ಎದುರು ಆಯೋಜಿಸಿದ್ದ ʻಸ್ವಾಭಿಮಾನಿಗೆ ಸಾವಿರ ನುಡಿನಮನ-ವಿ.ಶ್ರೀನಿವಾಸ್ ಪ್ರಸಾದ್ ಶ್ರದ್ಧಾಂಜಲಿʼ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ ಅವರು ವೇದಿಕೆ ಹಂಚಿಕೊಂಡರು.
ಉಭಯ ನಾಯಕರು ಕುಶಲೋಪರಿ ವಿಚಾರಿಸಿ, ಅಕ್ಕಪಕ್ಕದ ಕುರ್ಚಿಯಲ್ಲಿ ಕುಳಿತಿದ್ದರು. ಈ ವೇಳೆ ಬಿ.ಎಸ್ ಯಡಿಯೂರಪ್ಪ ಅವರು ಸಿ.ಎಂ ಸಿದ್ದರಾಮಯ್ಯ ಅವರಿಗೆ ಒಂದು ಚೀಟಿಯನ್ನು ನೀಡಿದರು. ಆ ಚೀಟಿಯನ್ನು ಮುಖ್ಯಮಂತ್ರಿ ತಮ್ಮ ಶರ್ಟ್ ಜೇಬಿಗೆ ಇಟ್ಟುಕೊಂಡರು. ಬಳಿಕ ಚೀಟಿಯಲ್ಲಿರುವ ವಿಚಾರದ ಬಗ್ಗೆ ಕೆಲಕಾಲ ಪರಸ್ಪರ ಮಾತುಕತೆ ನಡೆಸಿದರು.
ಜಿಲ್ಲಾ ಉಸ್ತುವಾರಿ ಸಚಿವ. ಡಾ.ಹೆಚ್.ಸಿ ಮಹದೇವಪ್ಪ, ಸಂಸದ ಪ್ರತಾಪ ಸಿಂಹ, ಶಾಸಕರಾದ ಟಿ.ಎಸ್. ಶ್ರೀವತ್ಸ, ಎ.ಆರ್ ಕೃಷ್ಣಮೂರ್ತಿ, ದರ್ಶನ ಧ್ರುವರಾರಾಯಣ, ಶ್ರೀನಿವಾಸ ಪ್ರಸಾದ್ ಪತ್ನಿ, ಭಾಗ್ಯಲಕ್ಷ್ಮಿ, ಸಿ.ಎಸ್ ದ್ವಾರಕನಾಥ್, ಪ್ರಸಾದ್ ಅವರ ಮೂವರು ಪುತ್ರಿಯರು ಹಾಗೂ ಅಳಿಯಂದಿರು ಇದ್ದರು.
ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…
ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ…
ಟೆಹರಾನ್: ಇರಾನ್-ಇಸ್ರೇಲ್ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್ನ್ಯೂಸ್ ಮತ್ತೊಂದು ಗುಡ್ನ್ಯೂಸ್ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ…
ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…
ಚಾಮರಾಜನಗರ: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್ ಮೀಡಿಯಾದಲ್ಲಿ ಪೆಟ್ರೋಲ್, ಡೀಸೆಲ್…
ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ…