ಮೈಸೂರು

ವೇದಿಕೆ ಮೇಲೆ ಸಿಎಂಗೆ ಚೀಟಿ ಕೊಟ್ಟ ಯಡಿಯೂರಪ್ಪ

ಮೈಸೂರು: ಇಂದು (ಮೇ 11) ನಗರದಲ್ಲಿ ನಡೆದ ʼಸ್ವಾಭಿಮಾನಿಗೆ ಸಾವಿರ ನುಡಿ ನಮನʼ ವಿ.ಶ್ರೀನಿವಾಸ್‌ ಪ್ರಸಾದ್‌ ಶ್ರದ್ಧಾಂಜಲಿ ಕಾರ್ಯಕ್ರಮ ಕಾಂಗ್ರೆಸ್‌-ಬಿಜೆಪಿ ನಾಯಕರ ಸಮಾಗಮಕ್ಕೆ ವೇದಿಕೆಯಾಯಿತು.

ಡಾ.ಬಿ.ಆರ್.‌ ಅಂಬೇಡ್ಕರ್‌ ಶಿಕ್ಷಣ ಹಾಗೂ ಸಾಂಸ್ಕೃತಿಕ ಟ್ರಸ್ಟ್‌, ಸಮಾನತೆ ಸ್ವಾಭಿಮಾನ-ಸ್ವಾವಲಂಬನೆ ಪ್ರತಿಷ್ಠಾನ ಮತ್ತು ಸಮಾನತೆ ಪ್ರಕಾಶನದ ಸಹಯೋಗದಲ್ಲಿ ಮಾನಂದವಾಡಿ ರಸ್ತೆಯ ರೇಷ್ಮೆ ಕಾರ್ಖಾನೆ ಎದುರು ಆಯೋಜಿಸಿದ್ದ ʻಸ್ವಾಭಿಮಾನಿಗೆ ಸಾವಿರ ನುಡಿನಮನ-ವಿ.ಶ್ರೀನಿವಾಸ್‌ ಪ್ರಸಾದ್‌ ಶ್ರದ್ಧಾಂಜಲಿʼ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌ ಯಡಿಯೂರಪ್ಪ ಅವರು ವೇದಿಕೆ ಹಂಚಿಕೊಂಡರು.

ಉಭಯ ನಾಯಕರು ಕುಶಲೋಪರಿ ವಿಚಾರಿಸಿ, ಅಕ್ಕಪಕ್ಕದ ಕುರ್ಚಿಯಲ್ಲಿ ಕುಳಿತಿದ್ದರು. ಈ ವೇಳೆ ಬಿ.ಎಸ್‌ ಯಡಿಯೂರಪ್ಪ ಅವರು ಸಿ.ಎಂ ಸಿದ್ದರಾಮಯ್ಯ ಅವರಿಗೆ ಒಂದು ಚೀಟಿಯನ್ನು ನೀಡಿದರು. ಆ ಚೀಟಿಯನ್ನು ಮುಖ್ಯಮಂತ್ರಿ ತಮ್ಮ ಶರ್ಟ್‌ ಜೇಬಿಗೆ ಇಟ್ಟುಕೊಂಡರು. ಬಳಿಕ ಚೀಟಿಯಲ್ಲಿರುವ ವಿಚಾರದ ಬಗ್ಗೆ ಕೆಲಕಾಲ ಪರಸ್ಪರ ಮಾತುಕತೆ ನಡೆಸಿದರು.

ಜಿಲ್ಲಾ ಉಸ್ತುವಾರಿ ಸಚಿವ. ಡಾ.ಹೆಚ್.ಸಿ ಮಹದೇವಪ್ಪ, ಸಂಸದ ಪ್ರತಾಪ ಸಿಂಹ, ಶಾಸಕರಾದ ಟಿ.ಎಸ್.‌ ಶ್ರೀವತ್ಸ, ಎ.ಆರ್‌ ಕೃಷ್ಣಮೂರ್ತಿ, ದರ್ಶನ ಧ್ರುವರಾರಾಯಣ, ಶ್ರೀನಿವಾಸ ಪ್ರಸಾದ್‌ ಪತ್ನಿ, ಭಾಗ್ಯಲಕ್ಷ್ಮಿ, ಸಿ.ಎಸ್‌ ದ್ವಾರಕನಾಥ್‌, ಪ್ರಸಾದ್‌ ಅವರ ಮೂವರು ಪುತ್ರಿಯರು ಹಾಗೂ ಅಳಿಯಂದಿರು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

6 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

7 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

8 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

9 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

9 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

13 hours ago