Yediyurappa Extends Support to Municipal Workers’ Strike
ಮೈಸೂರು : ನಗರ ಪಾಲಿಕೆ ನೌಕರರ ನ್ಯಾಯಯುತ ಬೇಡಿಕೆಯನ್ನು ಕೂಡಲೇ ರಾಜ್ಯ ಸರ್ಕಾರ ಸ್ಪಂದಿಸುವ ಕಾರ್ಯ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಆಷಾಡ ಶುಕ್ರವಾರದ ಪ್ರಯುಕ್ತ ಕುಟುಂಬಸ್ಥರೊಂದಿಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದರ್ಶನ ಪಡೆದು ನಂತರ ಮೈಸೂರು ಮಹಾನಗರ ಪಾಲಿಕೆ ಆವರಣದಲ್ಲಿ ನಡೆಯುತ್ತಿರುವ ನಗರ ಪಾಲಿಕೆ ನೌಕರರ ಮುಷ್ಕರದಲ್ಲಿ ಪಾಲ್ಗೊಂಡು, ನೌಕರರ ವಿವಿಧ ಬೇಡಿಕೆಗಳ ಮನವಿ ಸ್ವೀಕರಿಸಿ ನಂತರ ಮಾತನಾಡಿದ ಅವರು, ರಾಜ್ಯಾಧ್ಯಂತ ನಗರ ಪಾಲಿಕೆ ಹಾಗೂ ಮಹಾನಗರ ಪಾಲಿಕೆ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕಳೆದ ನಾಲ್ಕು ದಿನಗಳಿಂದ ಮುಷ್ಕರ ನಡೆಸುತ್ತಿದ್ದರು ಸರ್ಕಾರ ಮಾತ್ರ ಸ್ಪಂದಿಸುವ ಕಾರ್ಯ ಮಾಡುತ್ತಿಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ತಮ್ಮ ತವರು ನಗರದಲ್ಲೇ ನೌಕರರು ಪ್ರತಿಭಟನೆ ನಡೆಸುತ್ತಿದ್ದರು ಕುಂಭ ಕರ್ಣ ನಿದ್ರೆಗೆ ಜಾರಿ ನೌಕರರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಮುಂದಿನ ದಿನಗಳಲ್ಲಾದರೂ ಇವರ ಬೇಡಿಕೆಗಳಿಗೆ ಸ್ಪಂದಿಸುವ ಕಾರ್ಯ ಮಾಡಬೇಕು, ನೌಕರರ ನ್ಯಾಯಯುತ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂದು ತಿಳಿಸಿದರು.
ಇದೆ ವೇಳೆ ಸಂಸದರಾದ ವಿ.ವೈ ರಾಘವೇಂದ್ರ, ಶಾಸಕ ಟಿ.ಎಸ್ ಶ್ರೀವತ್ಸ, ಮಾಜಿ ಶಾಸಕ ಎಲ್.ನಾಗೇಂದ್ರ, ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಸುಬ್ಬಣ್ಣ, ಮಾಜಿ ಮೇಯರ್ ಶಿವಕುಮಾರ್ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…