ಮೈಸೂರು

ಮೈಸೂರಿನಲ್ಲಿ ಯಶಸ್ವಿಯಾಗಿ ಜರುಗಿದ ಯೋಗ ಧನುಷ್‌ ಕಾರ್ಯಕ್ರಮ

ಮೈಸೂರು: ಸಾಂಸ್ಕತಿಕ ನಗರಿ ಮೈಸೂರಿನಲ್ಲಿ ಯೋಗ ಧನುಷ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು.

11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಆಯುಷ್ ಇಲಾಖೆ ಹಾಗೂ ಮೈಸೂರು ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಲಲಿತ ಮಹಲ್ ಅರಮನೆ ಮುಂಭಾಗ ಏರ್ಪಡಿಸಿದ್ದ ಯೋಗ ಧನುಷ್ ಕಾರ್ಯಕ್ರಮಕ್ಕೆ ನೂರಾರು ಯೋಗಪಟುಗಳು ಯೋಗಾಸನ ಮಾಡುವ ಮುಖಾಂತರ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ಪೂರ್ವಭಾವಿಯಾಗಿ ಯೋಗ ಧನುಷ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮುಂದಿನ ದಿನಗಳಲ್ಲಿ ಮತ್ತಷ್ಟು ಪೂರ್ವಭಾವಿ ಯೋಗ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸುವುದೇ ಈ ಕಾರ್ಯಕ್ರಮಗಳ ಮೂಲ ಉದ್ದೇಶವಾಗಿದೆ. ಈ ಕಾರ್ಯಕ್ರಮಕ್ಕೆ ಯೋಗ ಸಂಸ್ಥೆಗಳ ನೆರವಿನಿಂದ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ ತಿಳಿಸಿದರು.

ಮೈಸೂರಿನವರಿಗೆ ಇದೊಂದು ಹಬ್ಬವಾಗಿದೆ. ಕೇಂದ್ರ ಯೋಗ ಆಯುಷ್ ಇಲಾಖೆ ನೀಡುವ ನಿಯಮಗಳನ್ನು ಎಲ್ಲರೂ ಪಾಲಿಸಿ ಯೋಗಾಸನ ಮಾಡಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಲು ಮುಂದಾಗಿದ್ದೇವೆ ಎಂದು ಮೈಸೂರು ಯೋಗ ಸಂಸ್ಥೆಯ ಉಪಾಧ್ಯಕ್ಷ ಪಶುಪತಿ ಹೇಳಿದರು.

ಯೋಗ ಮಾಡುವುದರಿಂದ ದೇಹ ಹಾಗೂ ಮನಸ್ಸು ಸಮತೋಲನದಲ್ಲಿ ಇಟ್ಟುಕೊಳ್ಳಲು ಸಾಧ್ಯ ಹಾಗೂ ಎಲ್ಲಾ ನರ ನಾಡಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿ ಆರೋಗ್ಯವಂತ ಜೀವನ ನಡೆಸಲು ಸಾಧ್ಯವಿದೆ ಎಂದು ಯೋಗ ಶಿಕ್ಷಕಿ ರಜನಿ ತಿಳಿಸಿದರು.

ಪತಂಜಲಿ ಯೋಗ ಸಂಸ್ಥೆಯು ಕಳೆದ 45 ವರ್ಷಗಳಿಂದ ಉಚಿತವಾಗಿ ಯೋಗ ಕಲಿಸುತ್ತಿದೆ. ಯೋಗದಿಂದ ಉತ್ತಮ ಆರೋಗ್ಯದ ಬಗ್ಗೆ ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯ. ಎಲ್ಲರೂ ಯೋಗವನ್ನು ಅಳವಡಿಸಿಕೊಂಡರೆ ರೋಗದಿಂದ ದೂರವಿದ್ದು ಸಮತೋಲನದ ಜೀವ ನಡೆಸಲು ಸಾಧ್ಯ ಎಂದು ಯೋಗ ಶಿಕ್ಷಕ ಶ್ರೀಶೈಲ ಹೇಳಿದರು.

ಆಂದೋಲನ ಡೆಸ್ಕ್

Recent Posts

ಕೋಲಾರದಲ್ಲಿ ದೇಶದ ಮೊದಲ ಹೆಲಿಕಾಪ್ಟರ್‌ ತಯಾರಕ ಘಟಕ : ನಾಳೆ ಮೋದಿ-ಮ್ಯಾಕ್ರಾಂ ಚಾಲನೆ

ಕೋಲಾರ : ಜಿಲ್ಲೆಯ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಭಾರತದ ಮೊದಲ ಖಾಸಗಿ ವಲಯದ ಹೆಲಿಕಾಪ್ಟರ್ ಫೈನಲ್ ಅಸೆಂಬ್ಲಿ ಲೈನ್ (FAL)…

21 mins ago

ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಅವಶ್ಯ : ರೇಡಿಯೋ ಕಿಶಾನ್‌ ಕಾರ್ಯಕ್ರಮದಲ್ಲಿ ಹರಿಣಿಕುಮಾರ್‌

ಮೈಸೂರು : ಕೃಷಿಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಅಳವಡಿಕೊಳ್ಳುವ ಮೂಲಕ ಕೃಷಿಯನ್ನು ಉಜ್ವಲಗೊಳಿಸಬಹುದು ಎಂದು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ…

49 mins ago

ಹಂಪಿ | ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ : ಮೂವರಿಗೆ ಮರಣದಂಡನೆ

ಹಂಪಿ : ಇಲ್ಲಿಗೆ ಸಮೀಪದ ಸಾಣಾಪುರ ಕೆರೆ ಬಳಿ ಕಳೆದ ವರ್ಷ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಂಗಾವತಿಯ…

1 hour ago

ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಬೆಂಕಿ : 7 ಕಾರ್ಮಿಕರು ಸಜೀವ ದಹನ, ಹಲವರು ಸಿಲುಕಿರುವ ಶಂಕೆ

ಜೈಪುರ : ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ…

2 hours ago

ಜೆಡಿಎಸ್‌ : ಪಕ್ಷ ಸಂಘಟನೆಗೆ ಫೆ.18 ರಿಂದ ʻಜನರೊಂದಿಗೆ ಜನತಾದಳʻ ಕಾರ್ಯಕ್ರಮ

ಮೈಸೂರು : ಪಕ್ಷ ಸಂಘಟನೆಗಾಗಿ ಯುವ ಜಾ.ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಫೆ.18 ರಿಂದ ಫೆ.24ರ ವರೆಗೆ ಮೈಸೂರು…

2 hours ago

ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಗೊಂದಲಗಳಿಲ್ಲ: ಸಚಿವ ಎಚ್.ಸಿ.ಮಹದೇವಪ್ಪ

ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್‌ ಹೈಕಮಾಂಡ್‌ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು ಹಾಗೂ…

4 hours ago