ಮೈಸೂರು

ಮೈಸೂರಿನಲ್ಲಿ ಯಶಸ್ವಿಯಾಗಿ ಜರುಗಿದ ಯೋಗ ಧನುಷ್‌ ಕಾರ್ಯಕ್ರಮ

ಮೈಸೂರು: ಸಾಂಸ್ಕತಿಕ ನಗರಿ ಮೈಸೂರಿನಲ್ಲಿ ಯೋಗ ಧನುಷ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು.

11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಆಯುಷ್ ಇಲಾಖೆ ಹಾಗೂ ಮೈಸೂರು ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಲಲಿತ ಮಹಲ್ ಅರಮನೆ ಮುಂಭಾಗ ಏರ್ಪಡಿಸಿದ್ದ ಯೋಗ ಧನುಷ್ ಕಾರ್ಯಕ್ರಮಕ್ಕೆ ನೂರಾರು ಯೋಗಪಟುಗಳು ಯೋಗಾಸನ ಮಾಡುವ ಮುಖಾಂತರ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ಪೂರ್ವಭಾವಿಯಾಗಿ ಯೋಗ ಧನುಷ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮುಂದಿನ ದಿನಗಳಲ್ಲಿ ಮತ್ತಷ್ಟು ಪೂರ್ವಭಾವಿ ಯೋಗ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸುವುದೇ ಈ ಕಾರ್ಯಕ್ರಮಗಳ ಮೂಲ ಉದ್ದೇಶವಾಗಿದೆ. ಈ ಕಾರ್ಯಕ್ರಮಕ್ಕೆ ಯೋಗ ಸಂಸ್ಥೆಗಳ ನೆರವಿನಿಂದ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ ತಿಳಿಸಿದರು.

ಮೈಸೂರಿನವರಿಗೆ ಇದೊಂದು ಹಬ್ಬವಾಗಿದೆ. ಕೇಂದ್ರ ಯೋಗ ಆಯುಷ್ ಇಲಾಖೆ ನೀಡುವ ನಿಯಮಗಳನ್ನು ಎಲ್ಲರೂ ಪಾಲಿಸಿ ಯೋಗಾಸನ ಮಾಡಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಲು ಮುಂದಾಗಿದ್ದೇವೆ ಎಂದು ಮೈಸೂರು ಯೋಗ ಸಂಸ್ಥೆಯ ಉಪಾಧ್ಯಕ್ಷ ಪಶುಪತಿ ಹೇಳಿದರು.

ಯೋಗ ಮಾಡುವುದರಿಂದ ದೇಹ ಹಾಗೂ ಮನಸ್ಸು ಸಮತೋಲನದಲ್ಲಿ ಇಟ್ಟುಕೊಳ್ಳಲು ಸಾಧ್ಯ ಹಾಗೂ ಎಲ್ಲಾ ನರ ನಾಡಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿ ಆರೋಗ್ಯವಂತ ಜೀವನ ನಡೆಸಲು ಸಾಧ್ಯವಿದೆ ಎಂದು ಯೋಗ ಶಿಕ್ಷಕಿ ರಜನಿ ತಿಳಿಸಿದರು.

ಪತಂಜಲಿ ಯೋಗ ಸಂಸ್ಥೆಯು ಕಳೆದ 45 ವರ್ಷಗಳಿಂದ ಉಚಿತವಾಗಿ ಯೋಗ ಕಲಿಸುತ್ತಿದೆ. ಯೋಗದಿಂದ ಉತ್ತಮ ಆರೋಗ್ಯದ ಬಗ್ಗೆ ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯ. ಎಲ್ಲರೂ ಯೋಗವನ್ನು ಅಳವಡಿಸಿಕೊಂಡರೆ ರೋಗದಿಂದ ದೂರವಿದ್ದು ಸಮತೋಲನದ ಜೀವ ನಡೆಸಲು ಸಾಧ್ಯ ಎಂದು ಯೋಗ ಶಿಕ್ಷಕ ಶ್ರೀಶೈಲ ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾರ್ಥಕ ಬದುಕಿನ ಸಾಧಕ!

ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…

1 hour ago

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

1 hour ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

1 hour ago

ಮೀಸಲಾತಿ ವಿರೋಧಿ ದನಿಗೆ ಮೋದಿ ಮಣಿಯುವರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…

1 hour ago

ಕುಕ್ಕರಿನ ಸೀಟಿ ಕೂಗಲು ಶುರುವಾಗಿದೆ!

ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…

1 hour ago

ಕೆಲವಷ್ಟು ಭರವಸೆಗಳು ಮತ್ತು ಹಲವಷ್ಟು ಆತಂಕಗಳು

ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…

1 hour ago