ಮೈಸೂರು

ಯೋಗ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಹೆಚ್ಚಿಸುತ್ತದೆ : ಪ್ರತಾಪ್ ಸಿಂಹ

ಮೈಸೂರು : ಯೋಗ ಮಾಡುವುದರಿಂದ ಮನುಷ್ಯನ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಹೆಚ್ಚಿಸುತ್ತದೆ ಎಂದು ಮೈಸೂರು ಕೊಡಗು ಲೋಕಸಭಾ ಸಂಸದರಾದ ಪ್ರತಾಪ್ ಸಿಂಹ ಅವರು ತಿಳಿಸಿದರು.

ವಿಶ್ವ ಯೋಗ ದಿನಾಚರಣೆ ಅಂಗವಾಗಿ ಅರಮನೆ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಮೈಸೂರು ಅರಮನೆ ಮಂಡಳಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹಾಗೂ ವಿವಿಧ ಯೋಗ ನಿರತ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ 9 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, 2015 ರಲ್ಲಿ ಮಾನ್ಯ ಪ್ರಧಾನ ಮಂತ್ರಿಗಳು ಜೂನ್ 21 ನ್ನು ವಿಶ್ವ ಯೋಗ ದಿನವಾಗಿ ಆಚರಣೆ ಮಾಡಬೇಕು ಎಂದು ವಿಶ್ವ ಸಂಸ್ಥೆಯಲ್ಲಿ ಮಂಡಿಸಿದರು.

ಬಹುತೇಕ ರಾಷ್ಟ್ರಗಳು ಒಪ್ಪಿಗೆ ಸೂಚಿಸಿದವು. ಅಂದಿನಿಂದ ವಿಶ್ವ ಯೋಗ ದಿನಾಚರಣೆ ಮಾಡಲಾಗುತ್ತಿದೆ. ಮೈಸೂರನ್ನು ಸಿಟಿ ಆಫ್ ಯೋಗ ಎಂದು ಕರೆಯಲಾಗುತ್ತದೆ ಎಂದರು.

ವಿಧಾನ ಪರಿಷತ್ ಸದಸ್ಯರಾದ ಸಿ ಎನ್ ಮಂಜೇಗೌಡ ಅವರು ಮಾತನಾಡಿ ನಾವು ಚಿಕ್ಕವರಿದ್ದಾಗ ಡಾ. ರಾಜಕುಮಾರ್ ಅವರ ಯೋಗವನ್ನು ನೋಡುತ್ತಿದ್ದೆ. ಯೋಗ ಮಾಡುವುದರಿಂದ ದೇಹಕ್ಕೆ ತೇಜಸ್ಸನ್ನು ನೀಡುತ್ತದೆ. ಯೋಗ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ. ದಿನವಿಡೀ ಉಲ್ಲಾಸದಿಂದ ಇರಲು ಸಹಕಾರಿಯಾಗುತ್ತದೆ. ದೇಶ ಕಾಯುವ ಸೈನಿಕರಿಗೂ ಯೋಗ ಮಾಡಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ ರಾಜೇಂದ್ರ ಅವರು ಮಾತನಾಡಿ ಯೋಗ ವಿಶ್ವದಲ್ಲಿ ಪ್ರಸಿದ್ದಿ ಪಡೆದಿದೆ. ಯೋಗದ ಮಹತ್ವ ವಿಶ್ವಕ್ಕೆ ತಿಳಿದಿದೆ. ಮೈಸೂರು ಯೋಗಕ್ಕೆ ಪ್ರಸಿದ್ದಿ ಪಡೆದಿದೆ. ಯೋಗದಲ್ಲಿ ಮೈಸೂರು ಗಿನ್ನಿಸ್ ದಾಖಲೆ ಮಾಡಿತ್ತು. ಯೋಗ ಆರೋಗ್ಯಕ್ಕೆ ಉತ್ತಮ ಪ್ರಯೋಜನ ನೀಡುತ್ತದೆ. ಎಲ್ಲಾ ಯೋಗ ಸಂಘ ಸಂಸ್ಥೆಗಳು ಯೋಗ ಬೆಳೆಸುವಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಮತ್ತೊಮ್ಮೆ ಯೋಗದಲ್ಲಿ ಮೈಸೂರು ಗಿನ್ನಿಸ್ ದಾಖಲೆ ಮಾಡಬೇಕು ಎಂದರು.

ಶ್ರೀ ಸೋಮೇಶ್ವರ ಸ್ವಾಮೀಜಿ ಅವರು ಮಾತನಾಡಿ ಯೋಗ ಮನಸ್ಸನ್ನು ಹಿಡಿತದಲ್ಲಿ ಇಡುತ್ತಡೆ. ವಿಶ್ವದ 186 ದೇಶಗಳಲ್ಲಿ ಯೋಗ ಸ್ಥಾನ ಪಡೆದಿದೆ. ಸನಾತನ ಋಷಿಗಳು ಯೋಗವನ್ನು ನೀಡಿದರು ಎಂದು ಮಾಹಿತಿ ನೀಡಿದರು.

ಶಂಕ ನಾದವನ್ನು ಮೊಳಗಿಸುವ ಮೂಲಕ ಯೋಗವನ್ನು ಪ್ರಾರಂಭಿಸಲಾಯಿತು. ವಿವಿಧ ಯೋಗ ಸಂಸ್ಥೆಗಳ ಯೋಗ ಪಟುಗಳು ಭಾಗವಹಿಸಿ ಯೋಗವನ್ನು ಮಾಡಿದರು.

ಕಾರ್ಯಕ್ರಮದಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀವತ್ಸ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಎಂ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಮುಖಂಡರಾದ ತನ್ವೀರ್ ಪಾಷಾ ಸೇರಿದಂತೆ ವಿವಿಧ ಧರ್ಮಗುರುಗಳು ಹಾಗೂ ಯೋಗಪಟುಗಳು ಭಾಗವಹಿಸಿದ್ದರು.

lokesh

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

6 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

7 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

7 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

8 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

8 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

9 hours ago