ಮೈಸೂರು : ಯೋಗ ಮಾಡುವುದರಿಂದ ಮನುಷ್ಯನ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಹೆಚ್ಚಿಸುತ್ತದೆ ಎಂದು ಮೈಸೂರು ಕೊಡಗು ಲೋಕಸಭಾ ಸಂಸದರಾದ ಪ್ರತಾಪ್ ಸಿಂಹ ಅವರು ತಿಳಿಸಿದರು.
ವಿಶ್ವ ಯೋಗ ದಿನಾಚರಣೆ ಅಂಗವಾಗಿ ಅರಮನೆ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಮೈಸೂರು ಅರಮನೆ ಮಂಡಳಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹಾಗೂ ವಿವಿಧ ಯೋಗ ನಿರತ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ 9 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, 2015 ರಲ್ಲಿ ಮಾನ್ಯ ಪ್ರಧಾನ ಮಂತ್ರಿಗಳು ಜೂನ್ 21 ನ್ನು ವಿಶ್ವ ಯೋಗ ದಿನವಾಗಿ ಆಚರಣೆ ಮಾಡಬೇಕು ಎಂದು ವಿಶ್ವ ಸಂಸ್ಥೆಯಲ್ಲಿ ಮಂಡಿಸಿದರು.
ಬಹುತೇಕ ರಾಷ್ಟ್ರಗಳು ಒಪ್ಪಿಗೆ ಸೂಚಿಸಿದವು. ಅಂದಿನಿಂದ ವಿಶ್ವ ಯೋಗ ದಿನಾಚರಣೆ ಮಾಡಲಾಗುತ್ತಿದೆ. ಮೈಸೂರನ್ನು ಸಿಟಿ ಆಫ್ ಯೋಗ ಎಂದು ಕರೆಯಲಾಗುತ್ತದೆ ಎಂದರು.
ವಿಧಾನ ಪರಿಷತ್ ಸದಸ್ಯರಾದ ಸಿ ಎನ್ ಮಂಜೇಗೌಡ ಅವರು ಮಾತನಾಡಿ ನಾವು ಚಿಕ್ಕವರಿದ್ದಾಗ ಡಾ. ರಾಜಕುಮಾರ್ ಅವರ ಯೋಗವನ್ನು ನೋಡುತ್ತಿದ್ದೆ. ಯೋಗ ಮಾಡುವುದರಿಂದ ದೇಹಕ್ಕೆ ತೇಜಸ್ಸನ್ನು ನೀಡುತ್ತದೆ. ಯೋಗ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ. ದಿನವಿಡೀ ಉಲ್ಲಾಸದಿಂದ ಇರಲು ಸಹಕಾರಿಯಾಗುತ್ತದೆ. ದೇಶ ಕಾಯುವ ಸೈನಿಕರಿಗೂ ಯೋಗ ಮಾಡಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ ರಾಜೇಂದ್ರ ಅವರು ಮಾತನಾಡಿ ಯೋಗ ವಿಶ್ವದಲ್ಲಿ ಪ್ರಸಿದ್ದಿ ಪಡೆದಿದೆ. ಯೋಗದ ಮಹತ್ವ ವಿಶ್ವಕ್ಕೆ ತಿಳಿದಿದೆ. ಮೈಸೂರು ಯೋಗಕ್ಕೆ ಪ್ರಸಿದ್ದಿ ಪಡೆದಿದೆ. ಯೋಗದಲ್ಲಿ ಮೈಸೂರು ಗಿನ್ನಿಸ್ ದಾಖಲೆ ಮಾಡಿತ್ತು. ಯೋಗ ಆರೋಗ್ಯಕ್ಕೆ ಉತ್ತಮ ಪ್ರಯೋಜನ ನೀಡುತ್ತದೆ. ಎಲ್ಲಾ ಯೋಗ ಸಂಘ ಸಂಸ್ಥೆಗಳು ಯೋಗ ಬೆಳೆಸುವಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಮತ್ತೊಮ್ಮೆ ಯೋಗದಲ್ಲಿ ಮೈಸೂರು ಗಿನ್ನಿಸ್ ದಾಖಲೆ ಮಾಡಬೇಕು ಎಂದರು.
ಶ್ರೀ ಸೋಮೇಶ್ವರ ಸ್ವಾಮೀಜಿ ಅವರು ಮಾತನಾಡಿ ಯೋಗ ಮನಸ್ಸನ್ನು ಹಿಡಿತದಲ್ಲಿ ಇಡುತ್ತಡೆ. ವಿಶ್ವದ 186 ದೇಶಗಳಲ್ಲಿ ಯೋಗ ಸ್ಥಾನ ಪಡೆದಿದೆ. ಸನಾತನ ಋಷಿಗಳು ಯೋಗವನ್ನು ನೀಡಿದರು ಎಂದು ಮಾಹಿತಿ ನೀಡಿದರು.
ಶಂಕ ನಾದವನ್ನು ಮೊಳಗಿಸುವ ಮೂಲಕ ಯೋಗವನ್ನು ಪ್ರಾರಂಭಿಸಲಾಯಿತು. ವಿವಿಧ ಯೋಗ ಸಂಸ್ಥೆಗಳ ಯೋಗ ಪಟುಗಳು ಭಾಗವಹಿಸಿ ಯೋಗವನ್ನು ಮಾಡಿದರು.
ಕಾರ್ಯಕ್ರಮದಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀವತ್ಸ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಎಂ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಮುಖಂಡರಾದ ತನ್ವೀರ್ ಪಾಷಾ ಸೇರಿದಂತೆ ವಿವಿಧ ಧರ್ಮಗುರುಗಳು ಹಾಗೂ ಯೋಗಪಟುಗಳು ಭಾಗವಹಿಸಿದ್ದರು.
ಶ್ರೀರಂಗಪಟ್ಟಣ : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…
ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…
ಅಮೃತ್ಸರ : ಪಂಜಾಬ್ನ ಅಮೃತ್ಸರ್ ಮತ್ತು ಜಲಂಧರ್ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…
7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ : ವನ್ಯಜೀವಿಗಳ ಸಂಖ್ಯೆ ದಿನದಿಂದ…
ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…
ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…