ಮೈಸೂರು

ಯೋಗ ಜೀವನದ ಅವಿಭಾಜ್ಯ ಅಂಗವಾಗಬೇಕು : ಡಾ.ಪುಷ್ಪ

ಮೈಸೂರು: ಯೋಗವನ್ನು ಕೇವಲ ಒಂದು ದಿನ ಮಾತ್ರ ಮಾಡಿದರೆ ಸಾಲದು, ಇದೊಂದು ಜೀವನದ ಅವಿಭಾಜ್ಯ ಅಂಗವಾಗಬೇಕು ಎಂಬುದು ಆಯುಷ್ಯ ಇಲಾಖೆಯ ಮೂಲ ಉದ್ದೇಶ ಎಂದು ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ.ಪುಷ್ಪ ತಿಳಿಸಿದರು.

ಅವರು ಇಂದು(ಜೂ.15) ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ , ಶ್ರೀ ಪತಂಜಲಿ ಯೋಗ ಶಿಕ್ಷಣ ಸಂಸ್ಥೆ, ಎಸ್ಪಿವೈಎಸ್ಎಸ್ ಮೈಸೂರು ಇವರ ಸಹಯೋಗದಲ್ಲಿ ನಡೆದ ಯೋಗೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ 20 ರವರೆಗೆ ಯೋಗೋತ್ಸವ ಕಾರ್ಯಕ್ರಮವನ್ನು ಆಯುಷ್ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದೆ. ಯೋಗದ ಮಹತ್ವವನ್ನು ಮುಂದಿನ ಪೀಳಿಗೆಗೆ ತಿಳಿಸಬೇಕು ಎಂಬ ಉದ್ದೇಶದಿಂದ ವಿವಿಧ ವಿದ್ಯಾರ್ಥಿ ನಿಲಯಗಳಲ್ಲಿ ಹಾಗೂ ಎಲ್ಲಾ ತಾಲೂಕುಗಳಲ್ಲಿ ಯೋಗ ತರಬೇತಿಯನ್ನು ನೀಡಲಾಗುತ್ತಿದೆ ಎಂದರು.

2 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಇಂದು ಎಸ್ಪಿವೈಎಸ್ಎಸ್ ವತಿಯಿಂದ ಯೋಗ ತರಬೇತಿಯನ್ನು ಪಡೆದು ಜೂನ್ 21ರಂದು ನಡೆಯುವ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪಾಲ್ಗೊಂಡು ಯೋಗ ಮಾಡಲಿದ್ದಾರೆ. ಯೋಗದ ಅರಿವನ್ನು ಮೂಡಿಸುವ ಹಿನ್ನೆಲೆಯಲ್ಲಿ ಇಂದು ಯೋಗೋತ್ಸವ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದ್ದೇವೆ ಎಂದು ಹೇಳಿದರು.

ಭಾರತ್ ಸ್ಕೌಟ್ ಮತ್ತು ಗೈಡ್ಸ್ ನ ಜಿಲ್ಲಾ ಮುಖ್ಯ ಆಯುಕ್ತ ವಿಶ್ವನಾಥ್  ಮಾತನಾಡಿ, ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಇಂದು ಪೂರ್ವಭಾವಿ ಯೋಗಭ್ಯಾಸವು ಬಹಳ ಯಶಸ್ವಿಯಾಗಿ ನಡೆದಿದೆ. ಜೂನ್ 21 ಮಹತ್ವ ದಿನ. ಭಾರತದಿಂದ ಆರಂಭವಾದ ಯೋಗವನ್ನು ಇಂದು ಪ್ರಪಂಚಾದ್ಯಂತ ಯೋಗ ದಿನವನ್ನು ಆಚರಣೆ ಮಾಡುತ್ತಿದ್ದಾರೆ. ಯೋಗದಿಂದ ಬಹಳ ಉಪಯೋಗವಿದೆ ಹಾಗಾಗಿ ಎಲ್ಲರೂ ಪ್ರತಿನಿತ್ಯ ಯೋಗಾಭ್ಯಾಸ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಜಂಟಿ ಕಾರ್ಯದರ್ಶಿ ಬಿ.ಕೆ ಬಸವರಾಜು, ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ಜಮೀಲ್, ನಿವೃತ್ತ ಕೆಎಎಸ್ ಅಧಿಕಾರಿ ರವಿಕುಮಾರ್, ಡಾ.ಯತೀಶ್ ಸತ್ಯನಾರಾಯಣ್ ಸೇರಿದಂತೆ ಆಯುಷ್ ಇಲಾಖೆಯ ಅಧಿಕಾರಿಗಳು ಹಾಗೂ ಯೋಗ ತರಬೇತಿದಾರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಪೌರ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ

ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…

4 hours ago

ಓದುಗರ ಪತ್ರ: ಪರೀಕ್ಷೆ ವೇಳೆ ಆರೋಗ್ಯ ಏರುಪೇರಾದರೆ ಬದಲಿ ವ್ಯವಸ್ಥೆ ಕಲ್ಪಿಸಿ

ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…

4 hours ago

ಓದುಗರ ಪತ್ರ: ಅಂಚೆ ಕಚೇರಿ ಚಲನ್‌ಗಳು ಕನ್ನಡದಲ್ಲಿರಲಿ

ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರ ಸವಾರಿಗೆ ಬೇಕಿದೆ ಕಡಿವಾಣ

ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…

4 hours ago

ಮೂಗಿನ ನೇರಕ್ಕೆ ಇತಿಹಾಸವನ್ನು ತಿರುಚುವುದಿದೆಯಲ್ಲಾ….

‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…

4 hours ago

ಸಂವಿಧಾನ ನಮ್ಮ ಬಳಿ ಇದೆ, ಆದರೆ ಅದರ ಧ್ವನಿ ಎಲ್ಲಿದೆ?

ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ…

4 hours ago