ಮೈಸೂರು: ಯೋಗವನ್ನು ಕೇವಲ ಒಂದು ದಿನ ಮಾತ್ರ ಮಾಡಿದರೆ ಸಾಲದು, ಇದೊಂದು ಜೀವನದ ಅವಿಭಾಜ್ಯ ಅಂಗವಾಗಬೇಕು ಎಂಬುದು ಆಯುಷ್ಯ ಇಲಾಖೆಯ ಮೂಲ ಉದ್ದೇಶ ಎಂದು ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ.ಪುಷ್ಪ ತಿಳಿಸಿದರು.
ಅವರು ಇಂದು(ಜೂ.15) ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ , ಶ್ರೀ ಪತಂಜಲಿ ಯೋಗ ಶಿಕ್ಷಣ ಸಂಸ್ಥೆ, ಎಸ್ಪಿವೈಎಸ್ಎಸ್ ಮೈಸೂರು ಇವರ ಸಹಯೋಗದಲ್ಲಿ ನಡೆದ ಯೋಗೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ 20 ರವರೆಗೆ ಯೋಗೋತ್ಸವ ಕಾರ್ಯಕ್ರಮವನ್ನು ಆಯುಷ್ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದೆ. ಯೋಗದ ಮಹತ್ವವನ್ನು ಮುಂದಿನ ಪೀಳಿಗೆಗೆ ತಿಳಿಸಬೇಕು ಎಂಬ ಉದ್ದೇಶದಿಂದ ವಿವಿಧ ವಿದ್ಯಾರ್ಥಿ ನಿಲಯಗಳಲ್ಲಿ ಹಾಗೂ ಎಲ್ಲಾ ತಾಲೂಕುಗಳಲ್ಲಿ ಯೋಗ ತರಬೇತಿಯನ್ನು ನೀಡಲಾಗುತ್ತಿದೆ ಎಂದರು.
2 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಇಂದು ಎಸ್ಪಿವೈಎಸ್ಎಸ್ ವತಿಯಿಂದ ಯೋಗ ತರಬೇತಿಯನ್ನು ಪಡೆದು ಜೂನ್ 21ರಂದು ನಡೆಯುವ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪಾಲ್ಗೊಂಡು ಯೋಗ ಮಾಡಲಿದ್ದಾರೆ. ಯೋಗದ ಅರಿವನ್ನು ಮೂಡಿಸುವ ಹಿನ್ನೆಲೆಯಲ್ಲಿ ಇಂದು ಯೋಗೋತ್ಸವ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದ್ದೇವೆ ಎಂದು ಹೇಳಿದರು.
ಭಾರತ್ ಸ್ಕೌಟ್ ಮತ್ತು ಗೈಡ್ಸ್ ನ ಜಿಲ್ಲಾ ಮುಖ್ಯ ಆಯುಕ್ತ ವಿಶ್ವನಾಥ್ ಮಾತನಾಡಿ, ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಇಂದು ಪೂರ್ವಭಾವಿ ಯೋಗಭ್ಯಾಸವು ಬಹಳ ಯಶಸ್ವಿಯಾಗಿ ನಡೆದಿದೆ. ಜೂನ್ 21 ಮಹತ್ವ ದಿನ. ಭಾರತದಿಂದ ಆರಂಭವಾದ ಯೋಗವನ್ನು ಇಂದು ಪ್ರಪಂಚಾದ್ಯಂತ ಯೋಗ ದಿನವನ್ನು ಆಚರಣೆ ಮಾಡುತ್ತಿದ್ದಾರೆ. ಯೋಗದಿಂದ ಬಹಳ ಉಪಯೋಗವಿದೆ ಹಾಗಾಗಿ ಎಲ್ಲರೂ ಪ್ರತಿನಿತ್ಯ ಯೋಗಾಭ್ಯಾಸ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಜಂಟಿ ಕಾರ್ಯದರ್ಶಿ ಬಿ.ಕೆ ಬಸವರಾಜು, ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ಜಮೀಲ್, ನಿವೃತ್ತ ಕೆಎಎಸ್ ಅಧಿಕಾರಿ ರವಿಕುಮಾರ್, ಡಾ.ಯತೀಶ್ ಸತ್ಯನಾರಾಯಣ್ ಸೇರಿದಂತೆ ಆಯುಷ್ ಇಲಾಖೆಯ ಅಧಿಕಾರಿಗಳು ಹಾಗೂ ಯೋಗ ತರಬೇತಿದಾರರು ಉಪಸ್ಥಿತರಿದ್ದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…