ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ ಬೇವಿನ ಮರಕ್ಕೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಲಿಗ್ರಾಮ ತಾಲ್ಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬೆಟ್ಟಹಳ್ಳಿ ಗ್ರಾಮದ ಲೇಟ್ ಕೃಷ್ಣೇಗೌಡರ ಮಗ ಪ್ರವೀಣ (೪೦)ಆತ್ಮಹತ್ಯೆ ಮಾಡಿಕೊಂಡ ರೈತ.
ಬೆಟ್ಟಹಳ್ಳಿ ಗ್ರಾಮದಲ್ಲಿ ಪ್ರವೀಣ ಅವರಿಗೆ ೪ ಎಕರೆ ಜಮೀನು ಇದ್ದು, ತಂಬಾಕು ಬೆಳೆ ಬೆಳೆಯಲು ಪಕ್ಕದ ಸೋಮನಹಳ್ಳಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ಹಾಗೂ ಇತರೆ ಕಡೆಗಳಲ್ಲಿ ಅಂದಾಜು ೧೩ ಲಕ್ಷ ರೂ. ಕೈಸಾಲ ಮಾಡಿದ್ದು, ತಂಬಾಕು ಬೆಳೆಗೆ ಈ ಬಾರಿ ಉತ್ತಮ ಬೆಲೆ ಸಿಗದೇ ಸಾಲಗಾರರ ಒತ್ತಡ ಹೆಚ್ಚಾಗಿ ಮನನೊಂದು ಮಂಗಳವಾರ ಸಂಜೆ ಜಮೀನಿನಲ್ಲಿರುವ ಬೇವಿನ ಮರಕ್ಕೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಮ ಎಂದು ಅವರ ಸಹೋದರ ಪ್ರದೀಪ ಸಾಲಿಗ್ರಾಮ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…