Mysore
22
scattered clouds

Social Media

ಶನಿವಾರ, 28 ಫೆಬ್ರವರಿ 2026
Light
Dark

ಪ್ರೀತಿ ವಿಚಾರವಾಗಿ ಹಲ್ಲೆ: ಮನನೊಂದು ಯುವಕ ಆತ್ಮಹತ್ಯೆ

ಮೈಸೂರು: ಯುವತಿಯ ಪ್ರೀತಿ ವಿಚಾರವಾಗಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಬಿ.ಸೀಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, 23 ವರ್ಷದ ನಾಗೇಂದ್ರ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ.

ಪ್ರೀತಿ ವಿಷಯ ತಿಳಿದು ನಾಗೇಂದ್ರನ ಮೇಲೆ ಯುವತಿಯ ಸಂಬಂಧಿಕರು ಹಲ್ಲೆ ನಡೆಸಿದ್ದರು. ಯುವತಿಯ ಕುಟುಂಬದ ಜಯಕುಮಾರ್‌, ಮಂಜು ಸೇರಿದಂತೆ ಐವರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಹಲ್ಲೆಯಿಂದ ಅವಮಾನವಾಗಿದೆ ಎಂದು ಮನನೊಂದು ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬನ್ನೂರು ಪೊಲೀಸ್‌ ಠಾಣೆಗೆ ನಾಗೇಂದ್ರ ಪೋಷಕರು ದೂರು ನೀಡಿದ್ದು, ಮಗನ ಸಾವಿಗೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿದ್ದಾರೆ. ಈ ಸಂಬಂಧ ಬನ್ನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!