ಸರಗೂರು : ನಾಲೆಯಲ್ಲಿ ಹಸುವಿಗೆ ನೀರು ಕುಡಿಸಲು ಹೋದಾಗ ಯುವಕನೊಬ್ಬ ಕಾಲುಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮೇಗೌಡರ ಹುಂಡಿ ಗ್ರಾಮದಲ್ಲಿ ನಡೆದಿದೆ.
ಇದನ್ನು ಓದಿ: ನಗರಾಭಿವೃದ್ಧಿ ಇಲಾಖೆಯಿಂದ ಯುಜಿಡಿ ನಿರ್ವಹಣೆ ಅಸಾಧ್ಯ : ಸಚಿವ ಬೈರತಿ ಸುರೇಶ್
ಗ್ರಾಮದ ದರ್ಶನ್ (19) ಮೃತಪಟ್ಟ ಯುವಕ. ಈತನು ಗ್ರಾಮದ ಸಮೀಪ ಇರುವ ಕಪಿಲಾ ಬಲದಂಡೆ ನಾಲೆಗೆ ಹಸುವಿಗೆ ನೀರು ಕುಡಿಸಲೆಂದು ಹೋಗಿದ್ದಾಗ, ನೀರು ಕುಡಿಯುವ ವೇಳೆಯಲ್ಲಿ ಹಸು ಹಗ್ಗವನ್ನು ಎಳೆದಾಗ ಹಗ್ಗ ಹಿಡಿದಿದ್ದ ಈತ ಕಾಲುಜಾರಿ ನೀರೊಳಗೆ ಮುಳುಗಿ ಮೃತಪಟ್ಟಿದ್ದಾನೆ.
ಈ ಸಂಬಂಧ ಸರಗೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸರಗೂರು ಪೊಲೀಸ್ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ, ಮೃತದೇಹಕ್ಕಾಗಿ ಶೋಧಿಸುತ್ತಿದ್ದಾರೆ. ಸರಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…