ಮೈಸೂರು: ಕ್ರಿಕೆಟ್ ಆಡಲು ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ವಡ್ಡರಗುಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ದಿವ್ಯಾ ಕುಮಾರ್ ಎಂಬಾತನೇ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ. ಕಳೆದ ಫೆಬ್ರವರಿ.24ರಂದು ಬೀಚನಹಳ್ಳಿಯಲ್ಲಿ ನೇರಳೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜನೆ ಮಾಡಲಾಗಿತ್ತು.
ಫೈನಲ್ ಪಂದ್ಯದಲ್ಲಿ ದಿವ್ಯಾ ಕುಮಾರ್ ಸಿಕ್ಸ್ ಹೊಡೆದು ತಮ್ಮ ತಂಡವನ್ನು ಗೆಲ್ಲಿಸಿದ್ದನು. ಗೆದ್ದ ಬಳಿಕ ಪಾರ್ಟಿ ಕೂಡ ಮಾಡಲಾಗಿತ್ತು. ಪಾರ್ಟಿ ಮುಗಿಸಿ ಮನೆಗೆ ಬರುತ್ತಿದ್ದ ದಿವ್ಯಾ ಕುಮಾರ್ ನಡು ರಸ್ತೆಯಲ್ಲೇ ಬಿದ್ದಿದ್ದನು. ಈ ವೇಳೆ ಆತನನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿತ್ತು.
ಕಳೆದ 9 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಿವ್ಯಾ ಕುಮಾರ್ ನಿನ್ನೆ ಸಾವನ್ನಪ್ಪಿದ್ದು, ಸಾವಿನ ಸುತ್ತ ಅನುಮಾನ ಹುತ್ತ ಹುಟ್ಟಿಕೊಂಡಿದೆ.
ಈ ಬಗ್ಗೆ ಮಾತನಾಡಿರುವ ಕುಟುಂಬ ಸದಸ್ಯರು, ಮೊದಲು ದಿವ್ಯಾಕುಮಾರ್ಗೆ ಅಪಘಾತವಾಗಿದೆ ಅಂದುಕೊಂಡಿದ್ದೆವು. ಆದರೆ ಅವನ ಬೈಕ್ಗೆ ಏನೂ ಡ್ಯಾಮೇಜ್ ಆಗಿಲ್ಲ. ಯಾರೋ ಅವನನ್ನು ಕೊಲೆ ಮಾಡಿದ್ದಾರೆ. ಹೀಗಾಗಿ ದಿವ್ಯಾ ಕುಮಾರ್ ಸಾವಿಗೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…
ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…