ಮೈಸೂರು : ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೌಶಲ ಅಭಿವೃದ್ಧಿ ನಿಗಮ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಶುಕ್ರವಾರ ನಡೆದ ಬೃಹತ್ ಉದ್ಯೋಗ ಮೇಳಕ್ಕೆ ಯುವ ಸಮೂಹವೇ ಹರಿದು ಬಂದಿತು.
೨೨೦ಕ್ಕೂ ಹೆಚ್ಚು ಕಂಪಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸುತ್ತಿದ್ದು, ೪೫ ಸಾವಿರಕ್ಕೂ ಹೆಚ್ಚು ಉದ್ಯೋಗಗಳನ್ನು ನೀಡುವ ಆನ್ಲೈನ್ನಲ್ಲಿ ೪೦ ಸಾವಿರ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಮೈಸೂರು ವಿಭಾಗದಲ್ಲಿ ೪೩,೫೭೭ ಯುವನಿಧಿ ಪಲಾನುಭವಿಗಳಿದ್ದು, ಇವರಲ್ಲಿ ೩೧೫೮ ಜನ ನೋಂದಣಿ ಮಾಡಿಕೊಂಡಿದ್ದರು.
ಮೇಳಕ್ಕೆ ಉಚಿತ ಪ್ರವೇಶ ಇದೆ. ಯಾವುದೇ ಕನಿಷ್ಠ ವಿದ್ಯಾರ್ಹತೆ ವಯಸ್ಸಿನ ಮಿತಿ ಇರಲಿಲ್ಲ. ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಕಂಪನಿಗಳು ಸಂದರ್ಶನ ನಡೆದವು. ಉದ್ಯೋಗ ಆಕಾಂಕ್ಷಿಗಳು, ಉದ್ಯೋಗದಾತರ ನೋಂದಣಿಯಿಂದ ಪ್ರಾರಂಭಗೊಂಡು ಸಂದರ್ಶನ, ಅಂತಿಮ ಆಯ್ಕೆ ಪ್ರಕ್ರಿಯೆ ಎಲ್ಲವೂ ಸಂಪೂರ್ಣ ಡಿಜಿಟಲ್ ಪ್ರಕ್ರಿಯೆ ಮೂಲಕವೇ ನಡೆಯಲಿದೆ. ಈ ಡೇಟಾವನ್ನು ಬಳಸಿಕೊಂಡು ಮುಂದೆಯೂ ಯುವ ಜನರಿಗೆ ಉದ್ಯೋಗ ದೊರಕಿಸುವ ಪ್ರಯತ್ನ ನಡೆಯಿತು.
ಇದನ್ನು ಓದಿ: ಉದ್ಯೋಗ ಸೃಷ್ಟಿ ನಮ್ಮ ಆದ್ಯತೆ ; ಪ್ರತೀ ಜಿಲ್ಲೆಯಲ್ಲಿಯೂ ಉದ್ಯೋಗ ಮೇಳ : ಸಿ.ಎಂ
ಈಗಾಗಲೇ ಆನ್ಲೈನ್ ಮೂಲಕ ಕಂಪನಿಗಳು ಸಂದರ್ಶನ ನಡೆಸುತ್ತಿದ್ದು, ತಮ್ಮ ಹುದ್ದೆಗೆ ಬೇಕಾದ ಅಭ್ಯರ್ಥಿಗಳ ಹೊಂದಾಣಿಕೆ ಮಾಡಿಕೊಂಡವು.
ಹುಣಸುರು, ಎಚ್.ಡಿ.ಕೋಟೆ, ನಂಜನಗೂಡು, ಪಿರಿಯಾಪಟ್ಟಣ, ಕೆ.ಆರ್.ನಗರ, ಶ್ರೀರಂಗಪಟ್ಟಣ, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ವಿವಿಧ ತಾಲ್ಲೂಕುಗಳಿಂದ ಬಂದಿದ್ದ ಯುವ ಜನರು ಉದ್ಯೋಗ ಪಡೆದುಕೊಂಡು ಖುಷಿಯನ್ನು ಹಂಚಿಕೊಂಡರು. ಇಲಾಖೆಯಿಂದಲೇ ಎಲ್ಲರಿಗೂ ಉಚಿತ ಊಟದ ವ್ಯವಸ್ಥೆ ಮಾಡಲಾಗಿತ್ತು. ವಿಕಲಚೇತನರಿಗೆ ಸಮಸ್ಯೆಯಾಗದಂತೆ ಪ್ರತ್ಯೇಕ ನೋಂದಣಿ ಕೇಂದ್ರ, ಸಾರಿಗೆ ಮತ್ತು ಶೌಚಾಲಯದ ವ್ಯವಸ್ಥೆ ಕಲ್ಪಿಸಲಾಗಿತ್ತು.
ರಾಜ್ಯ ಸರ್ಕಾರ ನಿರುದ್ಯೋಗಿಗಳ ನೋವನ್ನು ಗಂಭೀರವಾಗಿ ಪರಿಗಣಿಸಿ ಎಲ್ಲ ಉದ್ಯೋಗದಾತರನ್ನು ಒಂದೇ ಸೂರಿನಡಿಯಲ್ಲಿ ಕೂಡಿ ಹಾಕಿ ಕೆಲಸ ನೀಡುತ್ತಿರುವುದು ಹೆಮ್ಮೆಯ ವಿಚಾರ. ರಾಜ್ಯಾದಾದ್ಯಂತ ಈ ರೀತಿಯ ಕಾರ್ಯವಾಗಬೇಕು ನಿರುದ್ಯೋಗಿಗಳು ಸಂಖ್ಯೆ ಕ್ಷೀಣಿಸಲಿದೆ. ಸರ್ಕಾರದ ಆರು ತಿಂಗಳಿಗೊಮ್ಮೆಯಾದರು ಈ ರೀತಿಯ ಮೇಳಗಳನ್ನು ಆಯೋಜಿಸಬೇಕು ಎಂದು ಶುಭಾ ಹೇಳಿದರು.
ನಾನು ಬಿಕಾಂ ಮುಗಿಸಿದ್ದೇನೆ. ಎಲ್ಲ ಕಡೆ ಕೆಲಸ ಹುಡುಕುತ್ತಿದ್ದೆ. ಆದರೆ, ಎಲ್ಲಿಯೂ ಸಿಕ್ಕಿರಲಿಲ್ಲ. ಸರ್ಕಾರದಿಂದ ನಡೆಯುತ್ತಿರುವ ಉದ್ಯೋಗ ಮೇಳದಲ್ಲಾದರೂ ಸಿಗಬಹುದು ಎಂಬ ಆಕಾಂಕ್ಷೆಯಿಂದ ಬಂದಿದ್ದೇನೆ. ಇಂತಹ ಮೇಳಗಳನ್ನು ಆಯೋಜಿಸುವುದು ಒಳ್ಳೆಯದು ಎಂದು ಸ್ಪಂದನಾ ಹೇಳಿದರು.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…