ಮೈಸೂರು

ಯುವ ಮತದಾರರು ತಪ್ಪದೇ ಮತ ಚಲಾಯಿಸಿ : ಕುಮುದಾ ಶರತ್ !

ಮೈಸೂರು : ಯುವ ಮತದಾರರ ಮುಕ್ತ ಹಾಗೂ ನ್ಯಾಯೋಚಿತವಾದ ಚುನಾವಣೆಯನ್ನು ಬೆಂಬಲಿಸಬೇಕು. ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಮತ ಚಲಾಯಿಸಬೇಕು ಎಂದು ಸಹಾಯಕ ಚುನಾವಣಾಧಿಕಾರಿಗಳಾದ ಕುಮುದಾ ಶರತ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಹೆಚ್.ಡಿ.ಕೋಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆ – 2024 ರ ಹಿನ್ನೆಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಯುವ ಮತದಾರರ ಮತದಾನ ಜಾಗೃತಿ ಹಾಗೂ ಹಸ್ತಾಕ್ಷರ ಸಂಗ್ರಹ ಅಭಿಯಾನವನ್ನು ಉದ್ಘಾಟಿಸಿದರು.

ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಧರಣೇಶ್ ಎಸ್.ಪಿ ಅವರು ಮಾತನಾಡಿ, ಯಾವುದೇ ಆಸೆ ಆಮಿಷಗಳಿಗೆ ಯುವ ಮತದಾರರ ಒಳಗಾಗದೆ ಪ್ರಜಾ ಪ್ರಜಾಪ್ರಭುತ್ವವನ್ನು ಬಲಪಡಿಸಲು ತಪ್ಪದೇ ಮತದಾನ ಮಾಡಬೇಕು. ಜೊತೆಗೆ ತಮ್ಮ ಕುಟುಂಬದವರು, ನೆರೆಹೊರೆಯವರು, ಸಂಬಂಧಿಕರು ಹಾಗೂ ಮತದಾನದ ಬಗ್ಗೆ ಅಸಡ್ಡೆ ತೋರುವವರನ್ನು ಪ್ರೇರೇಪಿಸಿ ಮತಗಟ್ಟೆಗೆ ಕರೆದುಕೊಂಡು ಹೋಗಿ ಮತದಾನ ಮಾಡಿಸಬೇಕು.

ಮತದಾನ ಮಾಡುವ ಪ್ರತಿಯೊಬ್ಬ ಯುವಕರಿಗೆ ಮೊದಲು ಮತದಾನ ಮಾಡುವ ದಿನದ ಬಗ್ಗೆ ಅರಿವು ಇರಬೇಕು. ಜೊತೆಗೆ VHA ( ವೋಟರ್ ಹೆಲ್ಫ್ ಲೈನ್ ಆಪ್) ನಲ್ಲಿ ನಿಮ್ಮ ಮತಗಟ್ಟೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಬಹುದು ಎಂದು ತಿಳಿಸಿದರು.

ವಿದ್ಯಾರ್ಥಿಗಳೇ ಭಾರತದ ಮುಂದಿನ ಭವಿಷ್ಯದ ಪ್ರಜೆಗಳು” “ವಿದ್ಯಾರ್ಥಿಗಳ ನಡೆ – ಮತಗಟ್ಟೆಯ ಕಡೆ” ಇರಬೇಕು. ಆದ್ದರಿಂದ ಎಲ್ಲಾರೂ ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಾಂವಿಧಾನಿಕ ಹಕ್ಕನ್ನು ನಿರ್ಭೀತಿಯಿಂದ ಚಲಾಯಿಸಬೇಕು ಕಿವಿಮಾತು ಹೇಳಿದರು.

ಮೊದಲ ಬಾರಿಗೆ ಮತದಾನ ಮಾಡುವ ವಿದ್ಯಾರ್ಥಿನಿ ಶಿಲ್ಪಾ ಅವರು, ಮೊದಲ ಬಾರಿಗೆ ಮತದಾನ ಮಾಡಲು ತುಂಬಾ ಉತ್ಸುಕಳಾಗಿದ್ದೇನೆ ಹಾಗೂ ಸಂತೋಷವಾಗುತ್ತಿದೆ.

ಹಿಂದೆ ಹೆಣ್ಣು ಮಕ್ಕಳಿಗೆ ಮತದಾನ ಮಾಡುವ ಹಕ್ಕು ಇರಲಿಲ್ಲ, ಕೇವಲ ಶ್ರೀಮಂತರು, ಪದವಿಧರರಿಗೆ ಮಾತ್ರ ಇತ್ತು, ಡಾ.ಬಿ.ಆರ್.ಅಂಬೇಡ್ಕರ್ ಹೆಣ್ಣು ಮಕ್ಕಳಿಗೂ ಮತದಾನದ ಹಕ್ಕನ್ನು ಕೊಡಿಸಿದ್ದಾರೆ ಇದರಿಂದ ನಮ್ಮ ನಾಯಕರನ್ನು ನಾವೇ ಆಯ್ಕೆ ಮಾಡಿಕೊಳ್ಳಲು ಸಹಕಾರಿಯಾಗಿದೆ ಎಂದು ಅಭಿಪ್ರಾಯವನ್ನು ಹಂಚಿಕೊಂಡರು.

ಇದೇ ವೇಳೆ ಯುವ ಮತದಾರರಿಂದ ಹಸ್ತಾಕ್ಷರ ಸಂಗ್ರಹ ಹಾಗೂ ಮಾನವ ಸರಪಳಿ ನಿರ್ಮಿಸಿ ಮತದಾನ ಪ್ರತಿಜ್ಞಾ ವಿಧಿ ಬೋಧಿಸಿ ಕಡ್ಡಾಯವಾಗಿ ಮತದಾನ ಮಾಡುವಂತೆ ಪ್ರೇರೇಪಿಸಲಾಯಿತು.

ಈ ವೇಳೆ ತಾಲ್ಲೂಕು ಯೋಜನಾಧಿಕಾರಿಗಳಾದ ಕೆ.ರಂಗಸ್ವಾಮಿ, ಕಾಲೇಜಿನ ಪ್ರಾಂಶುಪಾಲರಾದ ಅರುಣ್, ಕಾಲೇಜು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

6 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

7 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

8 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

9 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

9 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

13 hours ago