ಮೈಸೂರು: ಮಾಟ ಮಂತ್ರ ಮಾಡಿಸಿದ್ದಾರೆ ಎಂದು ಮಾನಸಿಕವಾಗಿ ನೊಂದಿದ್ದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಗೋಕುಲಂ ಬಡಾವಣೆಯಲ್ಲಿ ಜರುಗಿದ್ದು, ಈ ಸಂಬಂಧ ವಿವಿಪುರಂ ಠಾಣೆಯಲ್ಲಿ ದೂರು ದಾಖಲಾಗಿದೆ.
ಅರ್ಚಕ ಮುರಳೀಧರ್ ಮಗ ಮಧುಕರ್(22) ಎಂಬಾತ ಮೃತ ದುರ್ದೈವಿ. ಮುರಳೀಧರ್ ಪತ್ನಿ ವಿಚ್ಛೇಧನ ಪಡೆದ ಕಾರಣ ಮಗ ಮಧುಕರ್ ತಂದೆಯ ಜೊತೆ ವಾಸವಾಗಿದ್ದರು.
ಕೆಲದಿನಗಳಿಂದ ಯಾರೋ ಮಾಟ ಮಂತ್ರ ಮಾಡಿಸಿದ್ದಾರೆ ಎಂದು ಮೃತನು ದಿನರಾತ್ರಿ ಭಯದ ಭೀತಿಯಲ್ಲಿದ್ದನಂತೆ. ಡಿಪ್ಲೋಮಾದಲ್ಲಿ ಅನುತ್ತೀರ್ಣಗೊಂಡ ಮಧುಕರ್ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ. ಹೊರಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದವನು ಸಂಜೆ ಮನೆಗೆ ಬಂದಾಗ ಕೊಠಡಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿದ್ದನು. ವಾಮಾಚಾರದ ಭೀತಿಯಿಂದ ಮಧುಕರ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಮೃತನ ತಂದೆ ಮುರಳೀಧರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…
ಮಡಿಕೇರಿ: ಮಾರ್ಚ್ನಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…
ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…
ಕೊಚ್ಚಿ: ಖ್ಯಾತ ಮಲಯಾಳಂ ನಟ ಹಾಗೂ ನಿರ್ದೇಶಕ ಶ್ರೀನಿವಾಸ್ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ವಿವಿಧ…
ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…
ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…