Mysore
24
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ಮೋದಿ ಕುರಿತು ಹಾಡು ಬರೆದಿದ್ದಕ್ಕೆ ಯುವಕನಿಗೆ ಥಳಿತ: ಪಾಕ್‌ ಪರ ಘೋಷಣೆ ಕೂಗಲು ಒತ್ತಾಯ!

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಕುರಿತು ಹಾಡು ಬರೆದಿದ್ದಕ್ಕೆ ಯುವಕನ ಮೇಲೆ ಮುಸ್ಲಿಂ ಸಮುದಾಯದ ಯುವಕರು ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಅಲ್ಲದೇ ಪಾಕಿಸ್ತಾನ, ಅಲ್ಲಾಹು ಪರ ಘೋಷಣೆ ಕೂಗುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.

ಮೈಸೂರಿನ ರೋಹಿತ್‌ ಹಲ್ಲೆಗೊಳಗಾದ ಯುವಕ. ನಗರದ ಸರ್ಕಾರಿ ಅತಿಥಿ ಗೃಹದ ಬಳಿ ಈ ಘಟನೆ ನಡೆದಿದ್ದು, ಈ ಬಗ್ಗೆ ರೋಹಿತ್‌ ಲಕ್ಷ್ಮೀಪುರಂ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ರೋಹಿತ್‌ ಬಟ್ಟೆ ಹರಿದು ದೈಹಿಕವಾಗಿ ಹಲ್ಲೆ ನಡೆಸಿದ ದುಷ್ಕರ್ಮಿಗಳು ನರೇಂದ್ರ ಮೋದಿ ಹಾಡು ಬರೆದಿದ್ದೀಯಾ ನಿನ್ನ ಸಾಯಿಸುತ್ತೇವೆಂದು ಬೆದರಿಕೆ ಹಾಕಿ ಅಲ್ಲಿಂದ ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ರೋಹಿತ್ ನೇರವಾಗಿ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಬಂದು ಘಟನೆ ಸಂಬಂಧ ದೂರು ನೀಡಿದ್ದು, ಬಳಿಕ ಪೊಲೀಸರೇ ಯುವಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ಘಟನೆ ಸಂಬಂಧ ರೋಹಿತ್ ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

Tags:
error: Content is protected !!