ಮೈಸೂರು

ಮೋದಿ ಕುರಿತು ಹಾಡು ಬರೆದಿದ್ದಕ್ಕೆ ಯುವಕನಿಗೆ ಥಳಿತ: ಪಾಕ್‌ ಪರ ಘೋಷಣೆ ಕೂಗಲು ಒತ್ತಾಯ!

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಕುರಿತು ಹಾಡು ಬರೆದಿದ್ದಕ್ಕೆ ಯುವಕನ ಮೇಲೆ ಮುಸ್ಲಿಂ ಸಮುದಾಯದ ಯುವಕರು ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಅಲ್ಲದೇ ಪಾಕಿಸ್ತಾನ, ಅಲ್ಲಾಹು ಪರ ಘೋಷಣೆ ಕೂಗುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.

ಮೈಸೂರಿನ ರೋಹಿತ್‌ ಹಲ್ಲೆಗೊಳಗಾದ ಯುವಕ. ನಗರದ ಸರ್ಕಾರಿ ಅತಿಥಿ ಗೃಹದ ಬಳಿ ಈ ಘಟನೆ ನಡೆದಿದ್ದು, ಈ ಬಗ್ಗೆ ರೋಹಿತ್‌ ಲಕ್ಷ್ಮೀಪುರಂ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ರೋಹಿತ್‌ ಬಟ್ಟೆ ಹರಿದು ದೈಹಿಕವಾಗಿ ಹಲ್ಲೆ ನಡೆಸಿದ ದುಷ್ಕರ್ಮಿಗಳು ನರೇಂದ್ರ ಮೋದಿ ಹಾಡು ಬರೆದಿದ್ದೀಯಾ ನಿನ್ನ ಸಾಯಿಸುತ್ತೇವೆಂದು ಬೆದರಿಕೆ ಹಾಕಿ ಅಲ್ಲಿಂದ ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ರೋಹಿತ್ ನೇರವಾಗಿ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಬಂದು ಘಟನೆ ಸಂಬಂಧ ದೂರು ನೀಡಿದ್ದು, ಬಳಿಕ ಪೊಲೀಸರೇ ಯುವಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ಘಟನೆ ಸಂಬಂಧ ರೋಹಿತ್ ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಚಿರತೆಗಳು ಕಾಣಿಸಿಕೊಳ್ಳುವಿಕೆ: ಮೈಸೂರಿನ ಅಭಿವೃದ್ಧಿಯ ಮತ್ತೊಂದು ಮುಖ

ಮೈಸೂರು ನಗರವು ತನ್ನ ಸಾಂಸ್ಕೃತಿಕ ಪರಂಪರೆ, ಹಸಿರು ಪರಿಸರ ಮತ್ತು ಸುಸ್ಥಿರ ಜೀವನಶೈಲಿಗಾಗಿ ಬಹಳ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ…

31 mins ago

ಮಾನವ ಹಕ್ಕುಗಳನ್ನು ಪೋಷಿಸುವ ಸಾಮಾಜಿಕ ನ್ಯಾಯದ ಪರಿಕಲ್ಪನೆ

ಯಾವುದೋ ಒಂದು ಹಕ್ಕು ಹೆಚ್ಚಿನ ಆದ್ಯತೆ ಹೊಂದಲು ಸಾಧ್ಯವೇ? ಕೆಲವು ಹಕ್ಕುಗಳು ಹೆಚ್ಚು ಮುಖ್ಯವಾಗುವವೇ? ಒಂದು ರೀತಿಯ ಹಕ್ಕಿನಿಂದ ಇನ್ನೊಂದು…

56 mins ago

ಅವೈಜ್ಞಾನಿಕ ಚರಂಡಿ ಕಾಮಗಾರಿಯಿಂದ ಕಿರಿಕಿರಿ

ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…

1 hour ago

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

4 hours ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

4 hours ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

4 hours ago