Categories: ಮೈಸೂರು

ಯುವ ಸಮೂಹ ಸರ್ಕಾರಿ ಸೇವೆಗೆ ಬರಬೇಕು: ಶಿಲ್ಪನಾಗ್‌

ಮೈಸೂರು: ಯುವ ಸಮೂಹ ಸರ್ಕಾರಿ ಸೇವೆಗೆ ಬರಬೇಕು. ಸೇವಾ ಮನೋಭಾವ ಬೆಳೆಸಿಕೊಂಡು ನಾಡು-ನುಡಿಯ ಸೇವೆ ಮಾಡಬೇಕು ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಹೇಳಿದರು.

ಸೋಮವಾರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಸ್ಮರ್ಧತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನಡೆಯುತ್ತಿರುವ 30 ದಿನಗಳ ಕೆಎಎಸ್ ಪರೀಕ್ಷಾ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾರ್ವಜನಿಕ ವಲಯದಲ್ಲಿ ಕೆಲಸ ಮಾಡಲು ನಿಷ್ಠೆ ಇರಬೇಕು. ಅಧಿಕಾರಿಗಳಾದ ಮೇಲೆ ನಿಮ್ಮ ನಿಲುವು ಬದಲಾಗಬಾರದು. ರಾಷ್ಟ್ರೀಯ ಐಕ್ಯತೆ, ಸಮಾನತೆ, ಸಾಮಾಜಿಕ ಕಳಕಳಿಯಲ್ಲಿ ತೊಡಗಿಸಿಕೊಳ್ಳಬೇಕು. ಜನರು ಅಧಿಕಾರಿಗಳ ಮೇಲೆ ವಿಶ್ವಾಸ ಇಟ್ಟಿರುತ್ತಾರೆ. ಜೊತೆಗೆ ನಮಗೆ ಸಹಾಯ ಮಾಡಿದವರಿಗೆ ಕೃತಜ್ಞತೆಯಿಂದ ಇರಬೇಕು ಎಂದರು.

ನಾವೆಲ್ಲರೂ ಕೂಡ ವ್ಯವಸ್ಥೆಯನ್ನು ಟೀಕಿಸುತ್ತಿದ್ದೇವೆ, ಸ್ಥಳೀಯ ಸಂಸ್ಥೆಗಳನ್ನು ನಿಂದಿಸುತ್ತೇವೆ, ರಸ್ತೆ ಸರಿಯಿಲ್ಲವೆಂದರೆ ಸರ್ಕಾರವನ್ನು ಟೀಕಿಸುತ್ತೇವೆ. ಆದರೆ ನಾವು ವ್ಯವಸ್ಥೆಯೊಳಗೆ ಬಂದಾಗ ನಮ್ಮ ಜವಾಬ್ದಾರಿಯನ್ನು ಮರೆಯಬಾರದು ಎಂದರು.

ಉನ್ನತ ಶಿಕ್ಷಣ ವ್ಯವಸ್ಥೆ ತುಂಬಾ ಅಚ್ಚುಕಟ್ಟಾಗಿದೆ. ಪದವಿ ಪಡೆದವರೆಲ್ಲ ಯುಪಿಎಸ್ಸಿ ಕೆಪಿಎಸ್ಸಿ ಪರೀಕ್ಷೆ ಬರೆಯಬಹುದು. ನಿಮ್ಮಂತ ಯುವ ಸಮೂಹ ಸರ್ಕಾರಿ ಕೆಲಸಕ್ಕೆ ಸೇರಬೇಕು ಎಂದ ಅವರು ಪರೀಕ್ಷೆ ಬಗ್ಗೆ ಭಯಬೇಡ. ಸಿದ್ಧತೆ ನಿರಂತರ ಇರಲಿ. ಪ್ರತಿದಿನ ಪತ್ರಿಕೆ ಓದಿ. ಪರೀಕ್ಷಾ ವೇಳೆಯಲ್ಲಿ ಸಮಯ ನಿರ್ವಹಣೆಯ ಬಗ್ಗೆ ಗಮನ ಹರಿಸಿ ಎಂದು ತಿಳಿಸಿದರು.

ಸಮಾಜಕ್ಕೆ ಸೇವೆ ಮಾಡಬೇಕು ಅಂತ ಬಂದಿದ್ದೀರಿ. ಸೇವೆ ಮಾಡಿ. ಸಮಾಜಕ್ಕೆ ಸೇವೆ ಮಾಡುವ ಅವಕಾಶ ಎಲ್ಲರಿಗೂ ಸಿಗಲ್ಲ. ಕಷ್ಟಪಟ್ಟವರಿಗೆ ಮಾತ್ರ ಸಮಾಜ ಸೇವಾ ಮಾಡುವ ಅವಕಾಶ ಸಿಗುವುದು. ಇಂದಿನ ಪರೀಕ್ಷಾರ್ಥಿಗಳು ಒಂದು ಪರೀಕ್ಷೆ ಬರೆದ ಕೂಡಲೇ. ಯಶಸ್ಸು ಬೇಕೆಂದು ಅಪೇಕ್ಷಿಸುತ್ತಾರೆ. ಇಲ್ಲವಾದರೆ ಅಲ್ಲಿಗೆ ಬಿಟ್ಟುಬಿಡುತ್ತಾರೆ. ಪರೀಕ್ಷೆ ಬರೆದ ಮೊದಲೆ ವರ್ಷದಲ್ಲಿ ಎಲ್ಲವೂ ನಿರ್ಧಾರವಾಗುವುದಿಲ್ಲ. ಆಗಾಂತ ಐದು ಹತ್ತು ವರ್ಷವನ್ನೂ ತೆಗೆದುಕೊಳ್ಳಬಾರದು. ನಿಮ್ಮ ಆತ್ಮಗೌರವ ಪರೀಕ್ಷೆಗಳಿಂದ ನಿರ್ಧಾರವಾಗಲ್ಲ ಎಂಬುದನ್ನು ಮೊದಲು ತಿಳಿಯಿರಿ ಎಂದು ಸಲಹೆ ನೀಡಿದರು.

ಪ್ರತಿದಿನ ಓದುತ್ತಾ ಹೋದಂತೆ ನಿಮ್ಮನ್ನು ನೀವು ಭೌದ್ದಿಕವಾಗಿ ರೂಪಿಸಿಕೊಳ್ಳಬೇಕು. ನಿಮ್ಮ ಶಕ್ತಿ ಮತ್ತು ದೌರ್ಬಲ್ಯವನ್ನ ಅರಿಯಿರಿ ಎಂದರು. ಬಳಿಕ ಯುಪಿಎಸ್ಸಿ ಹಾಗೂ ಕೆಪಿಎಸ್ಸಿ ಪರೀಕ್ಷೆಗಳ ಬಗ್ಗೆ ಅಭ್ರ‍್ಥಿಗಳಿಗಿದ್ದ ಗೊಂದಲ ನಿವಾರಿಸಿ, ಕೆಲವು ಸಲಹೆ ನೀಡಿದರು.

ಮೈಸೂರು ಜಿಲ್ಲಾ ಅಪರ ಜಿಲ್ಲಾಧಿಕಾರಿ ಡಾ.ಪಿ ಶಿವರಾಜು ಮಾತನಾಡಿ, ಮನೋಧರ್ಮದಿಂದ ಜೀವನದಲ್ಲಿ ಯಶಸ್ಸು ಸಾಧ್ಯ. ಹೀಗಾಗಿ ಎಲ್ಲರೂ ಮನೋಧರ್ಮ ಬೆಳೆಸಿಕೊಂಡು ಜೀವನ ರೂಪಿಸಿಕೊಳ್ಳಿ, ಐಎಎಸ್ ಹಾಗೂ ಕೆಎಎಸ್ ಅಧಿಕಾರಿಯಾಗಬೇಕಾದರೆ ಅದು ನಮ್ಮಿಂದ ಏನನ್ನೊ ಬಯಸುತ್ತಿದೆ ಎಂಬುದನ್ನು ನಾವು ಮನಗಾಣಬೇಕು. ಜೊತೆಗೆ ಅದನ್ನ ಪೂರ್ಣಗೊಳಿಸುವ ಛಲ ವಿಶ್ವಾಸವಿರಬೇಕು ಎಂದು ಹೇಳಿದರು.

ಅಧಿಕಾರಿಗಳಿಗೆ ತುಂಬಾ ಒತ್ತಡ ಇರುತ್ತದೆ. ಎಲ್ಲಾ ಒತ್ತಡವನ್ನು ನಿವಾರಿಸಿಕೊಂಡು ಸಾರ್ವಜನಿಕ ಸೇವೆ ಮಾಡಬೇಕು. ನಮ್ಮ ದೇಶವೇ ನಮಗೆ ನಾಯಕ. ಇಲ್ಲಿನ ಪರೀಕ್ಷಾ ವ್ಯವಸ್ಥೆ ತುಂಬಾ ಅಚ್ಚುಕಟ್ಟಾಗಿದೆ. ಸರ್ಕಾರಿ ಸೇವೆಗೆ ಬಂದ ಮೇಲೆ ಸೇವಾ ಮನೋಭಾವ ಬೆಳಿಸಿಕೊಳ್ಳಬೇಕು ಎಂದರು.

ನಿಮ್ಮಲ್ಲಿ ವಿಶಿಷ್ಟ ಚೇತನವಿದೆ. ಸೋಲದೆ ಮುನ್ನುಗ್ಗಿ. ಸೋತೆ ಎಂದು ಕೊರಗಬೇಡಿ. ಸೋಲಿಗೆ ಸಾವಿರ ಕಾರಣ ಇರುತ್ತದೆ. ಗೆಲುವಿಗೆ ಯಾವುದೇ ಕಾರಣವಿರಲ್ಲ. ಎಂದು ಹೇಳಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಶರಣಪ್ಪ ಹಲಸೆ ಮಾತನಾಡಿ ಪ್ರತಿಯೊಬ್ಬರ ಯಶಸ್ಸಿಗೆ ಪರಿಶ್ರಮ ಇರಬೇಕು, ಜೊತೆಗೆ ನಿಮ್ಮೆಲ್ಲರ ಗೆಲುವಿಗೆ ನೀವೇ ಹೊಣೆಯಾಗುತ್ತೀರಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕುಲಸಚಿವ ಕೆ.ಬಿ ಪ್ರವೀಣ, ಡೀನ್ ಗಳಾದ ಡಾ. ಎನ್. ಲಕ್ಷ್ಮಿ, ಪ್ರೊ. ರಮಾನಾಥಂನಾಯ್ಡು, ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ, ಸಿಬ್ಬಂದಿಗಳಾದ ಸಿದ್ದೇಶ್ ಹೊನ್ನೂರ್, ಗಣೇಶ್ ಕೆ.ಜಿ.ಕೊಪ್ಪಲ್ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

7 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

7 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

8 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

8 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

8 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

8 hours ago