ಮೈಸೂರು

ಕಾಂಗ್ರೆಸ್‌ಗೆ ಯುವ ಕಾರ್ಯಕರ್ತರೆ ಬಲ : ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌

ಉಡುಪಿ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಲು ಯುವ ಕಾರ್ಯಕರ್ತರ ಶ್ರಮ ಸಾಕಷ್ಟಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.

ಉಡುಪಿಯ ಬೈಂದೂರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಪಕ್ಷ ಬಡವರ ಪಕ್ಷ. ಸದಾ ಬಡವರ ಬಗ್ಗೆ ಯೋಚಿಸುವ ಪಕ್ಷ ಎಂದು ಹೇಳಿದರು.

ದೇಶಕ್ಕಾಗಿ ಗಾಂಧಿ ಕುಟುಂಬದ ಕೊಡುಗೆ ಅಪಾರ. ಗಾಂಧಿ ಕುಟುಂಬದಿಂದ ಪ್ರಧಾನಿಯಾದ ಮೂವರಲ್ಲಿ ಇಬ್ಬರು‌ ಈ‌ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ. ರಾಹುಲ್ ಗಾಂಧಿ ಮನಸ್ಸು ಮಾಡಿದ್ದರೆ 2004ರಲ್ಲೆ ಅಧಿಕಾರ ಹಿಡಿಯಬಹುದಿತ್ತು. ಜವಹರಲಾಲ್ ನೆಹರು ಅವರು ಅಗರ್ಭ ಶ್ರೀಮಂತ ಮನೆತನದಲ್ಲಿ ಹುಟ್ಟಿದರೂ ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟರು ಎಂದು ಹೇಳಿದರು.

ಯುವ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ‌ ಸಂಘಟನೆಯಲ್ಲಿ ತೊಡಗಬೇಕು, ನಾನು‌ ಕೂಡ ಬೂತ್ ಏಜೆಂಟ್, ‌ಕೌಟಿಂಗ್ ಏಜೆಂಟ್ ಆಗಿ ಕೆಲಸ ಮಾಡಿರುವೆ. ಪಕ್ಷಕ್ಕಾಗಿ ಕೆಲಸ ಮಾಡಿದ್ದನ್ನು ಗುರುತಿಸಿ ಟಿಕೆಟ್ ನೀಡಲಾಯಿತು. ಇದೀಗ ರಾಜ್ಯ ಸಚಿವ ಸಂಪುಟದಲ್ಲಿ ಒಬ್ಬಳೇ ಮಹಿಳಾ ಮಂತ್ರಿಯಾಗಿರುವೆ. ನನಗೆ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷ ಅವಕಾಶ ಮಾಡಿಕೊಟ್ಟಿದೆ ಎಂದು ಹೇಳಿದರು.

ಮಾಜಿ ಶಾಸಕ ಗೋಪಾಲ್ ಪೂಜಾರಿ ಅವರು‌ ಕಳೆದ‌ ಚುನಾವಣೆಯಲ್ಲಿ ಸೋತರೂ‌ ಕಾರ್ಯಕರ್ತರ, ಕ್ಷೇತ್ರದ ಒಡನಾಟ ಬಿಟ್ಟಿಲ್ಲ. ಜನರ ಕಷ್ಟ ಸುಖದ ಬಗ್ಗೆ ಸದಾ ಯೋಚನೆ ಮಾಡುತ್ತಾರೆ ಎಂದರು.

ನಿಕಟ ಪೂರ್ವ ಅಧ್ಯಕ್ಷ ಶೇಖರ್ ಪೂಜಾರಿ ಅವರು ನೂತನ ಅಧ್ಯಕ್ಷರಾದ ‌ಭರತ್ ದೇವಾಡಿಗ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಮಾಜಿ ಶಾಸಕ ಗೋಪಾಲ್ ಪೂಜಾರಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಅಧ್ಯಕ್ಷ ಅಶೋಕ್ ಕೊಡವೂರು, ಉದಯ್ ಕುಮಾರ್ ಶೆಟ್ಟಿ, ಮುಖಂಡರಾದ ರಾಜು ಪೂಜಾರಿ, ಕಿಶನ್ ಹೆಗ್ಡೆ, ರಘುರಾಮ್ ಶೆಟ್ಟಿ, ಅರವಿಂದ್ ಪೂಜಾರಿ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

26 mins ago

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

52 mins ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

55 mins ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

1 hour ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

1 hour ago

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

4 hours ago