ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ನಗರದ ಗೌಸಿಯಾನಗರದ ನಿವಾಸಿ ಶಹಬಾಜ್(26) ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಯುವಕ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೌಸಿಯಾನಗರದ ಜುಬೇರ್ ಹಾಗೂ ಇಬ್ಬರು ಆರೋಪಿಗಳನ್ನು ಉದಯಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಫ್ಯಾಬ್ರಿಕೇಟರ್ ಆಗಿ ಕೆಲಸ ಮಾಡುತ್ತಿದ್ದ ಶಹಬಾಜ್, ಗೌಸಿಯಾ ನಗರದಲ್ಲಿ ರಾತ್ರಿ ವೇಳೆ ಬಾಡಿಗೆ ಪಡೆದು ಆಟೋ ನಿಲ್ಲಿಸುವ ಜಾಗದ ನಿರ್ವಹಣೆ ಮಾಡುತ್ತಿದ್ದ. ಇದರ ಜೊತೆಗೆ ಕೆಲ ಹಣಕಾಸಿಗೆ ಸಂಬಂಧಿಸಿದಂತೆ ವ್ಯವಹಾರ ಕೂಡ ನಡೆಸುತ್ತಿದ್ದ.
ಸೋಮವಾರ ತಡರಾತ್ರಿ ಸುಮಾರು 12.30ರ ಸಮಯದಲ್ಲಿ ನಾಲ್ವರು ಸ್ನೇಹಿತರೊಂದಿಗೆ ಆಟೋದಲ್ಲಿ ಬಂದ ಜುಬೇರ್, ಆಟೋ ನಿಲ್ಲಿಸಲು ನೀಡುವ ಬಾಡಿಗೆ ವಿಚಾರದಲ್ಲಿ ಜಗಳ ಆರಂಭಿಸಿದ. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಕೊಲೆಯಲ್ಲಿ ಅಂತ್ಯವಾಗಿತ್ತು. ಈ ಸಂಬಂಧ ತನಿಖೆ ಆರಂಭಿಸಿದ್ದ ಉದಯಗಿರಿ ಠಾಣೆ ಇನ್ಸ್ಪೆಕ್ಟರ್ ಸುಧಾಕರ್ ಮತ್ತು ಸಿಬ್ಬಂದಿ, ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಉಳಿದವರ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…