ಮೈಸೂರು

ಯುವ ದಸರಾ: ರಂಜಿಸಿದ ರೆಹಮಾನ್, ವಿಜಯ್ ಪ್ರಕಾಶ್ ಜೋಡಿ

  • ಎ.ಆರ್ ರೆಹಮಾನ್ ಗಾಯನಕ್ಕೆ ಕುಣಿದು ಕುಪ್ಪಳಿಸಿದ ಯುವ ಸಮೂಹ….
  • ಇಂಟರ್ ನ್ಯಾಷನಲ್ ಕಾನ್ಸರ್ಟ್ ನಂತೆ ಮೂಡಿ ಬಂದ ಯುವ ದಸರಾ….
  • ಭೋರ್ಗರೆದು ಸೇರಿದ ಜನ ಸಾಗರ….

ಮೈಸೂರು: ಯುವ ದಸರಾದ ನಾಲ್ಕನೇ ದಿನವಾದ ಬುಧವಾರ ರಾತ್ರಿ ವೇದಿಕೆಯಲ್ಲಿ ಹಾಡು-ಅದ್ದೂರಿ ಬ್ಯಾಂಡ್‌ ತಂಡಗಳು ಮೇಳೈಸಿದವು. ಖ್ಯಾತ ಸಂಗೀತ ಸಂಯೋಜಕ ಎ.ಆರ್‌ ರೆಹಮಾನ್‌, ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಹಾಡುಗಳು ಯುವಜನರ ಸಂಭ್ರಮಕ್ಕೆ ಕಿಚ್ಚು ಹಚ್ಚಿದವು.

ಮೊದಲಿಗೆ ʻಜೈಹೋ ಜೈಹೋʼ ಎನ್ನುತ್ತಾ ವೇದಿಕೆ ಪ್ರವೇಶಿಸಿದ ಸಂಗೀತ ನಿರ್ದೇಶಕ ಮತ್ತು ಸಂಯೋಜಕ ಎ ಆರ್ ರೆಹಮಾನ್ ಕಂಠ ಸಿರಿಯೂ ಜನರ ಮನಗೆದ್ದಿತು. ಖ್ಯಾತ ಡ್ರಮ್ಮರ್‌ ಶಿವಮಣಿ ತಮ್ಮ ಪ್ರತಿಭೆಯ ಮೂಲಕ ಸಂಗೀತ ಲೋಕವನ್ನೇ ಸೃಷ್ಟಿಸಿದರು.

ʻಮುಕ್ಕಾಲಾ ಮುಕ್ಕಾಬುಲಾ ಲೈಲಾʼ ಹಾಡಿಗೆ ನೆರದಿದ್ದವೂ ದನಿಗೂಡಿಸಿದರು. ಗೀತೆಯ ಜೊತೆಗೆ ಯುವ ಮನಸ್ಸುಗಳು ಹೆಜ್ಜೆಗೆ ತಾಳ ಹಾಕಿದರು.

ಕನ್ನಡದ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರನ್ನು ರೆಹಮಾನ್‌ ವೇದಿಕೆಗೆ ಕರೆಯುತ್ತಿದ್ದಂತೆ ಪ್ರೇಕ್ಷಕರ ಶಿಳ್ಳೆ, ಚಪ್ಪಾಳೆಗಳು ಸಹ ದನಿಗೂಡಿಸಿದವು.

ʻರಾಮ ನಿನ್ನ ಮನದಲ್ಲಿ, ರಾಮ ನನ್ನ ಮನದಲ್ಲಿʻ ಎನುವ ಮೂಲಕ ತಮ್ಮ ಸುಮಧುರ ಕಂಠದಿಂದ ತಮ್ಮೂರಿನ ಜನರ ಮನಸೆಳೆದ ವಿಜಯ್‌ ಪ್ರಕಾಶ್‌ ಬಳಿಕ ಭಾವುಕರಾದರು.

ʻಎನ್ನ ಸೋ ನಾ ಕ್ಯೂ ರಬ್ನೇ ಬನಾಯʼ ʻಮಾಸಕ್ಕಲಿ.. ಮಸಕ್ಕಲಿʼ ಹೀಗೆ ಮೊದಲಾದ ಹಾಡುಗಳು ಸಂಗೀತ ಪ್ರೇಮಿಗಳ ಮನಸೊರೆಗೊಂಡವು.

ಪ್ರಖ್ಯಾತ ಡ್ರಾಂ ಬಿಟ್ಟರ್ ಶಿವಮಣಿ ತಮ್ಮ ಬ್ಯಾಂಡ್ ಮೂಲಕ ಯುವ ದಸರೆಗೆ ಮೆರುಗು ತಂದರು. ಸತತ 20 ನಿಮಿಷಗಳು ಯುವಕರಿಗೆ ಕೊರತೆಯಾಗದಂತೆ ಬ್ಯಾಂಡ್ ಬಾರಿಸುತ್ತಾ ಕೇಳುಗರ ಕಿವಿ ದಿಂ ಏನುವಂತೆ ಮಾಡಿದರು. ಪ್ರತಿಯೊಂದು ಬಿಟ್ಟ್ ಗಳಿಗೂ ಯುವ ಸಮೂಹ ಕುಣಿಯಲಾರಂಭಿಸಿತ್ತು, ಬಿಟ್ಸ್ ಗೆ ತಕ್ಕಂತೆ ಹೆಜ್ಜೆ ಜೊತೆಗೆ ಚಪ್ಪಾಳೆ ಶಿಳ್ಳೆ ಕೇಕೆ ಹಾಕುತ್ತಾ ರಿದಂ ಎಂಜಾಯ್ ಮಾಡಿದರು.

ಸಾಗರೋಪದಿಯಲ್ಲಿ ಹಾರಿದು ಬಂದ ಜನ ಸಾಗರ
ಯುವ ದಸರಾ ಕಾರ್ಯಕ್ರಮ ಆರಂಭವಾಗಿ 3 ದಿನ ಕಳೆದಿದೆ ಆದರೆ ಯುವ ದಸರಾದ ನಾಲ್ಕನೇ ದಿನದ ಕಾರ್ಯಕ್ರಮದಲ್ಲಿ ಕಂಡಂತಹ ಜನಸಾಗರ ಇಂದೆಂದು ನೋಡಿರದ ರೀತಿಯಲ್ಲಿ ಜನಸ್ಥೋಮವು ಹರಿದು ಬಂದಿದ್ದು ಸಾರ್ವಜನಿಕರನ್ನು ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆಗೆ ಕಷ್ಟ ಸಾಧ್ಯವಾಗಿದೆ. ಸಂಜೆ 5 ಗಂಟೆಯಿಂದಲ್ಲೇ ಹೊರವಲಯ ರಸ್ತೆಯ ತುಂಬಾ ಜನ ಸಾಗರ ತುಂಬಿ ತುಳುಕುತ್ತಿತ್ತು ರಸ್ತೆಯಲ್ಲಿ ಸುಮಾರು ಒಂದು ಕಿಲೋಮೀಟರ್ ವರೆಗೂ ಕೂಡ ವಾಹನಗಳು ನಿಧಾನಗತಿಯಲ್ಲಿ ಸಾಗಿದವು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

9 mins ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

28 mins ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

50 mins ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

2 hours ago

ಓದುಗರ ಪತ್ರ: ಮಹಿಳಾ ಅಧಿಕಾರಿಗಳಿಗೆ ಅಭಿನಂದನೆಗಳು

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ…

3 hours ago

ಓದುಗರ ಪತ್ರ: ರತನ್‌ ಟಾಟಾರಿಗೆ ಭಾರತರತ್ನ ನೀಡಿ

ಕೆಲ ಗಣ್ಯರು ನಿಧನರಾದಾಗ ದುಃಖವಾಗುತ್ತದೆ. ಇನ್ನೂ ಕೆಲ ಗಣ್ಯರನ್ನು ಕಳೆದುಕೊಂಡಾಗ ದುಃಖದ ಕೋಡಿಯೇ ಹರಿಯುತ್ತದೆ; ದೇಶಾದ್ಯಂತ ಮೌನ ಹೆಪ್ಪುಗಟ್ಟುತ್ತದೆ. ಹೀಗೆ…

3 hours ago