ಮೈಸೂರು: ಯುವ ದಸರಾದ ನಾಲ್ಕನೇ ದಿನವಾದ ಬುಧವಾರ ರಾತ್ರಿ ವೇದಿಕೆಯಲ್ಲಿ ಹಾಡು-ಅದ್ದೂರಿ ಬ್ಯಾಂಡ್ ತಂಡಗಳು ಮೇಳೈಸಿದವು. ಖ್ಯಾತ ಸಂಗೀತ ಸಂಯೋಜಕ ಎ.ಆರ್ ರೆಹಮಾನ್, ಖ್ಯಾತ ಗಾಯಕ ವಿಜಯ್ ಪ್ರಕಾಶ್ ಹಾಡುಗಳು ಯುವಜನರ ಸಂಭ್ರಮಕ್ಕೆ ಕಿಚ್ಚು ಹಚ್ಚಿದವು.
ಮೊದಲಿಗೆ ʻಜೈಹೋ ಜೈಹೋʼ ಎನ್ನುತ್ತಾ ವೇದಿಕೆ ಪ್ರವೇಶಿಸಿದ ಸಂಗೀತ ನಿರ್ದೇಶಕ ಮತ್ತು ಸಂಯೋಜಕ ಎ ಆರ್ ರೆಹಮಾನ್ ಕಂಠ ಸಿರಿಯೂ ಜನರ ಮನಗೆದ್ದಿತು. ಖ್ಯಾತ ಡ್ರಮ್ಮರ್ ಶಿವಮಣಿ ತಮ್ಮ ಪ್ರತಿಭೆಯ ಮೂಲಕ ಸಂಗೀತ ಲೋಕವನ್ನೇ ಸೃಷ್ಟಿಸಿದರು.
ʻಮುಕ್ಕಾಲಾ ಮುಕ್ಕಾಬುಲಾ ಲೈಲಾʼ ಹಾಡಿಗೆ ನೆರದಿದ್ದವೂ ದನಿಗೂಡಿಸಿದರು. ಗೀತೆಯ ಜೊತೆಗೆ ಯುವ ಮನಸ್ಸುಗಳು ಹೆಜ್ಜೆಗೆ ತಾಳ ಹಾಕಿದರು.
ಕನ್ನಡದ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರನ್ನು ರೆಹಮಾನ್ ವೇದಿಕೆಗೆ ಕರೆಯುತ್ತಿದ್ದಂತೆ ಪ್ರೇಕ್ಷಕರ ಶಿಳ್ಳೆ, ಚಪ್ಪಾಳೆಗಳು ಸಹ ದನಿಗೂಡಿಸಿದವು.
ʻರಾಮ ನಿನ್ನ ಮನದಲ್ಲಿ, ರಾಮ ನನ್ನ ಮನದಲ್ಲಿʻ ಎನುವ ಮೂಲಕ ತಮ್ಮ ಸುಮಧುರ ಕಂಠದಿಂದ ತಮ್ಮೂರಿನ ಜನರ ಮನಸೆಳೆದ ವಿಜಯ್ ಪ್ರಕಾಶ್ ಬಳಿಕ ಭಾವುಕರಾದರು.
ʻಎನ್ನ ಸೋ ನಾ ಕ್ಯೂ ರಬ್ನೇ ಬನಾಯʼ ʻಮಾಸಕ್ಕಲಿ.. ಮಸಕ್ಕಲಿʼ ಹೀಗೆ ಮೊದಲಾದ ಹಾಡುಗಳು ಸಂಗೀತ ಪ್ರೇಮಿಗಳ ಮನಸೊರೆಗೊಂಡವು.
ಪ್ರಖ್ಯಾತ ಡ್ರಾಂ ಬಿಟ್ಟರ್ ಶಿವಮಣಿ ತಮ್ಮ ಬ್ಯಾಂಡ್ ಮೂಲಕ ಯುವ ದಸರೆಗೆ ಮೆರುಗು ತಂದರು. ಸತತ 20 ನಿಮಿಷಗಳು ಯುವಕರಿಗೆ ಕೊರತೆಯಾಗದಂತೆ ಬ್ಯಾಂಡ್ ಬಾರಿಸುತ್ತಾ ಕೇಳುಗರ ಕಿವಿ ದಿಂ ಏನುವಂತೆ ಮಾಡಿದರು. ಪ್ರತಿಯೊಂದು ಬಿಟ್ಟ್ ಗಳಿಗೂ ಯುವ ಸಮೂಹ ಕುಣಿಯಲಾರಂಭಿಸಿತ್ತು, ಬಿಟ್ಸ್ ಗೆ ತಕ್ಕಂತೆ ಹೆಜ್ಜೆ ಜೊತೆಗೆ ಚಪ್ಪಾಳೆ ಶಿಳ್ಳೆ ಕೇಕೆ ಹಾಕುತ್ತಾ ರಿದಂ ಎಂಜಾಯ್ ಮಾಡಿದರು.
ಸಾಗರೋಪದಿಯಲ್ಲಿ ಹಾರಿದು ಬಂದ ಜನ ಸಾಗರ
ಯುವ ದಸರಾ ಕಾರ್ಯಕ್ರಮ ಆರಂಭವಾಗಿ 3 ದಿನ ಕಳೆದಿದೆ ಆದರೆ ಯುವ ದಸರಾದ ನಾಲ್ಕನೇ ದಿನದ ಕಾರ್ಯಕ್ರಮದಲ್ಲಿ ಕಂಡಂತಹ ಜನಸಾಗರ ಇಂದೆಂದು ನೋಡಿರದ ರೀತಿಯಲ್ಲಿ ಜನಸ್ಥೋಮವು ಹರಿದು ಬಂದಿದ್ದು ಸಾರ್ವಜನಿಕರನ್ನು ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆಗೆ ಕಷ್ಟ ಸಾಧ್ಯವಾಗಿದೆ. ಸಂಜೆ 5 ಗಂಟೆಯಿಂದಲ್ಲೇ ಹೊರವಲಯ ರಸ್ತೆಯ ತುಂಬಾ ಜನ ಸಾಗರ ತುಂಬಿ ತುಳುಕುತ್ತಿತ್ತು ರಸ್ತೆಯಲ್ಲಿ ಸುಮಾರು ಒಂದು ಕಿಲೋಮೀಟರ್ ವರೆಗೂ ಕೂಡ ವಾಹನಗಳು ನಿಧಾನಗತಿಯಲ್ಲಿ ಸಾಗಿದವು.
ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…
ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…
ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…
ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…
ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…