ಮೈಸೂರು

ಯುವ ದಸರಾ: ರಂಜಿಸಿದ ರೆಹಮಾನ್, ವಿಜಯ್ ಪ್ರಕಾಶ್ ಜೋಡಿ

  • ಎ.ಆರ್ ರೆಹಮಾನ್ ಗಾಯನಕ್ಕೆ ಕುಣಿದು ಕುಪ್ಪಳಿಸಿದ ಯುವ ಸಮೂಹ….
  • ಇಂಟರ್ ನ್ಯಾಷನಲ್ ಕಾನ್ಸರ್ಟ್ ನಂತೆ ಮೂಡಿ ಬಂದ ಯುವ ದಸರಾ….
  • ಭೋರ್ಗರೆದು ಸೇರಿದ ಜನ ಸಾಗರ….

ಮೈಸೂರು: ಯುವ ದಸರಾದ ನಾಲ್ಕನೇ ದಿನವಾದ ಬುಧವಾರ ರಾತ್ರಿ ವೇದಿಕೆಯಲ್ಲಿ ಹಾಡು-ಅದ್ದೂರಿ ಬ್ಯಾಂಡ್‌ ತಂಡಗಳು ಮೇಳೈಸಿದವು. ಖ್ಯಾತ ಸಂಗೀತ ಸಂಯೋಜಕ ಎ.ಆರ್‌ ರೆಹಮಾನ್‌, ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಹಾಡುಗಳು ಯುವಜನರ ಸಂಭ್ರಮಕ್ಕೆ ಕಿಚ್ಚು ಹಚ್ಚಿದವು.

ಮೊದಲಿಗೆ ʻಜೈಹೋ ಜೈಹೋʼ ಎನ್ನುತ್ತಾ ವೇದಿಕೆ ಪ್ರವೇಶಿಸಿದ ಸಂಗೀತ ನಿರ್ದೇಶಕ ಮತ್ತು ಸಂಯೋಜಕ ಎ ಆರ್ ರೆಹಮಾನ್ ಕಂಠ ಸಿರಿಯೂ ಜನರ ಮನಗೆದ್ದಿತು. ಖ್ಯಾತ ಡ್ರಮ್ಮರ್‌ ಶಿವಮಣಿ ತಮ್ಮ ಪ್ರತಿಭೆಯ ಮೂಲಕ ಸಂಗೀತ ಲೋಕವನ್ನೇ ಸೃಷ್ಟಿಸಿದರು.

ʻಮುಕ್ಕಾಲಾ ಮುಕ್ಕಾಬುಲಾ ಲೈಲಾʼ ಹಾಡಿಗೆ ನೆರದಿದ್ದವೂ ದನಿಗೂಡಿಸಿದರು. ಗೀತೆಯ ಜೊತೆಗೆ ಯುವ ಮನಸ್ಸುಗಳು ಹೆಜ್ಜೆಗೆ ತಾಳ ಹಾಕಿದರು.

ಕನ್ನಡದ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರನ್ನು ರೆಹಮಾನ್‌ ವೇದಿಕೆಗೆ ಕರೆಯುತ್ತಿದ್ದಂತೆ ಪ್ರೇಕ್ಷಕರ ಶಿಳ್ಳೆ, ಚಪ್ಪಾಳೆಗಳು ಸಹ ದನಿಗೂಡಿಸಿದವು.

ʻರಾಮ ನಿನ್ನ ಮನದಲ್ಲಿ, ರಾಮ ನನ್ನ ಮನದಲ್ಲಿʻ ಎನುವ ಮೂಲಕ ತಮ್ಮ ಸುಮಧುರ ಕಂಠದಿಂದ ತಮ್ಮೂರಿನ ಜನರ ಮನಸೆಳೆದ ವಿಜಯ್‌ ಪ್ರಕಾಶ್‌ ಬಳಿಕ ಭಾವುಕರಾದರು.

ʻಎನ್ನ ಸೋ ನಾ ಕ್ಯೂ ರಬ್ನೇ ಬನಾಯʼ ʻಮಾಸಕ್ಕಲಿ.. ಮಸಕ್ಕಲಿʼ ಹೀಗೆ ಮೊದಲಾದ ಹಾಡುಗಳು ಸಂಗೀತ ಪ್ರೇಮಿಗಳ ಮನಸೊರೆಗೊಂಡವು.

ಪ್ರಖ್ಯಾತ ಡ್ರಾಂ ಬಿಟ್ಟರ್ ಶಿವಮಣಿ ತಮ್ಮ ಬ್ಯಾಂಡ್ ಮೂಲಕ ಯುವ ದಸರೆಗೆ ಮೆರುಗು ತಂದರು. ಸತತ 20 ನಿಮಿಷಗಳು ಯುವಕರಿಗೆ ಕೊರತೆಯಾಗದಂತೆ ಬ್ಯಾಂಡ್ ಬಾರಿಸುತ್ತಾ ಕೇಳುಗರ ಕಿವಿ ದಿಂ ಏನುವಂತೆ ಮಾಡಿದರು. ಪ್ರತಿಯೊಂದು ಬಿಟ್ಟ್ ಗಳಿಗೂ ಯುವ ಸಮೂಹ ಕುಣಿಯಲಾರಂಭಿಸಿತ್ತು, ಬಿಟ್ಸ್ ಗೆ ತಕ್ಕಂತೆ ಹೆಜ್ಜೆ ಜೊತೆಗೆ ಚಪ್ಪಾಳೆ ಶಿಳ್ಳೆ ಕೇಕೆ ಹಾಕುತ್ತಾ ರಿದಂ ಎಂಜಾಯ್ ಮಾಡಿದರು.

ಸಾಗರೋಪದಿಯಲ್ಲಿ ಹಾರಿದು ಬಂದ ಜನ ಸಾಗರ
ಯುವ ದಸರಾ ಕಾರ್ಯಕ್ರಮ ಆರಂಭವಾಗಿ 3 ದಿನ ಕಳೆದಿದೆ ಆದರೆ ಯುವ ದಸರಾದ ನಾಲ್ಕನೇ ದಿನದ ಕಾರ್ಯಕ್ರಮದಲ್ಲಿ ಕಂಡಂತಹ ಜನಸಾಗರ ಇಂದೆಂದು ನೋಡಿರದ ರೀತಿಯಲ್ಲಿ ಜನಸ್ಥೋಮವು ಹರಿದು ಬಂದಿದ್ದು ಸಾರ್ವಜನಿಕರನ್ನು ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆಗೆ ಕಷ್ಟ ಸಾಧ್ಯವಾಗಿದೆ. ಸಂಜೆ 5 ಗಂಟೆಯಿಂದಲ್ಲೇ ಹೊರವಲಯ ರಸ್ತೆಯ ತುಂಬಾ ಜನ ಸಾಗರ ತುಂಬಿ ತುಳುಕುತ್ತಿತ್ತು ರಸ್ತೆಯಲ್ಲಿ ಸುಮಾರು ಒಂದು ಕಿಲೋಮೀಟರ್ ವರೆಗೂ ಕೂಡ ವಾಹನಗಳು ನಿಧಾನಗತಿಯಲ್ಲಿ ಸಾಗಿದವು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

6 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

7 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

8 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

9 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

13 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

13 hours ago