ಮೈಸೂರು

ಯುವ ದಸರಾ: ರಂಜಿಸಿದ ರೆಹಮಾನ್, ವಿಜಯ್ ಪ್ರಕಾಶ್ ಜೋಡಿ

  • ಎ.ಆರ್ ರೆಹಮಾನ್ ಗಾಯನಕ್ಕೆ ಕುಣಿದು ಕುಪ್ಪಳಿಸಿದ ಯುವ ಸಮೂಹ….
  • ಇಂಟರ್ ನ್ಯಾಷನಲ್ ಕಾನ್ಸರ್ಟ್ ನಂತೆ ಮೂಡಿ ಬಂದ ಯುವ ದಸರಾ….
  • ಭೋರ್ಗರೆದು ಸೇರಿದ ಜನ ಸಾಗರ….

ಮೈಸೂರು: ಯುವ ದಸರಾದ ನಾಲ್ಕನೇ ದಿನವಾದ ಬುಧವಾರ ರಾತ್ರಿ ವೇದಿಕೆಯಲ್ಲಿ ಹಾಡು-ಅದ್ದೂರಿ ಬ್ಯಾಂಡ್‌ ತಂಡಗಳು ಮೇಳೈಸಿದವು. ಖ್ಯಾತ ಸಂಗೀತ ಸಂಯೋಜಕ ಎ.ಆರ್‌ ರೆಹಮಾನ್‌, ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಹಾಡುಗಳು ಯುವಜನರ ಸಂಭ್ರಮಕ್ಕೆ ಕಿಚ್ಚು ಹಚ್ಚಿದವು.

ಮೊದಲಿಗೆ ʻಜೈಹೋ ಜೈಹೋʼ ಎನ್ನುತ್ತಾ ವೇದಿಕೆ ಪ್ರವೇಶಿಸಿದ ಸಂಗೀತ ನಿರ್ದೇಶಕ ಮತ್ತು ಸಂಯೋಜಕ ಎ ಆರ್ ರೆಹಮಾನ್ ಕಂಠ ಸಿರಿಯೂ ಜನರ ಮನಗೆದ್ದಿತು. ಖ್ಯಾತ ಡ್ರಮ್ಮರ್‌ ಶಿವಮಣಿ ತಮ್ಮ ಪ್ರತಿಭೆಯ ಮೂಲಕ ಸಂಗೀತ ಲೋಕವನ್ನೇ ಸೃಷ್ಟಿಸಿದರು.

ʻಮುಕ್ಕಾಲಾ ಮುಕ್ಕಾಬುಲಾ ಲೈಲಾʼ ಹಾಡಿಗೆ ನೆರದಿದ್ದವೂ ದನಿಗೂಡಿಸಿದರು. ಗೀತೆಯ ಜೊತೆಗೆ ಯುವ ಮನಸ್ಸುಗಳು ಹೆಜ್ಜೆಗೆ ತಾಳ ಹಾಕಿದರು.

ಕನ್ನಡದ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರನ್ನು ರೆಹಮಾನ್‌ ವೇದಿಕೆಗೆ ಕರೆಯುತ್ತಿದ್ದಂತೆ ಪ್ರೇಕ್ಷಕರ ಶಿಳ್ಳೆ, ಚಪ್ಪಾಳೆಗಳು ಸಹ ದನಿಗೂಡಿಸಿದವು.

ʻರಾಮ ನಿನ್ನ ಮನದಲ್ಲಿ, ರಾಮ ನನ್ನ ಮನದಲ್ಲಿʻ ಎನುವ ಮೂಲಕ ತಮ್ಮ ಸುಮಧುರ ಕಂಠದಿಂದ ತಮ್ಮೂರಿನ ಜನರ ಮನಸೆಳೆದ ವಿಜಯ್‌ ಪ್ರಕಾಶ್‌ ಬಳಿಕ ಭಾವುಕರಾದರು.

ʻಎನ್ನ ಸೋ ನಾ ಕ್ಯೂ ರಬ್ನೇ ಬನಾಯʼ ʻಮಾಸಕ್ಕಲಿ.. ಮಸಕ್ಕಲಿʼ ಹೀಗೆ ಮೊದಲಾದ ಹಾಡುಗಳು ಸಂಗೀತ ಪ್ರೇಮಿಗಳ ಮನಸೊರೆಗೊಂಡವು.

ಪ್ರಖ್ಯಾತ ಡ್ರಾಂ ಬಿಟ್ಟರ್ ಶಿವಮಣಿ ತಮ್ಮ ಬ್ಯಾಂಡ್ ಮೂಲಕ ಯುವ ದಸರೆಗೆ ಮೆರುಗು ತಂದರು. ಸತತ 20 ನಿಮಿಷಗಳು ಯುವಕರಿಗೆ ಕೊರತೆಯಾಗದಂತೆ ಬ್ಯಾಂಡ್ ಬಾರಿಸುತ್ತಾ ಕೇಳುಗರ ಕಿವಿ ದಿಂ ಏನುವಂತೆ ಮಾಡಿದರು. ಪ್ರತಿಯೊಂದು ಬಿಟ್ಟ್ ಗಳಿಗೂ ಯುವ ಸಮೂಹ ಕುಣಿಯಲಾರಂಭಿಸಿತ್ತು, ಬಿಟ್ಸ್ ಗೆ ತಕ್ಕಂತೆ ಹೆಜ್ಜೆ ಜೊತೆಗೆ ಚಪ್ಪಾಳೆ ಶಿಳ್ಳೆ ಕೇಕೆ ಹಾಕುತ್ತಾ ರಿದಂ ಎಂಜಾಯ್ ಮಾಡಿದರು.

ಸಾಗರೋಪದಿಯಲ್ಲಿ ಹಾರಿದು ಬಂದ ಜನ ಸಾಗರ
ಯುವ ದಸರಾ ಕಾರ್ಯಕ್ರಮ ಆರಂಭವಾಗಿ 3 ದಿನ ಕಳೆದಿದೆ ಆದರೆ ಯುವ ದಸರಾದ ನಾಲ್ಕನೇ ದಿನದ ಕಾರ್ಯಕ್ರಮದಲ್ಲಿ ಕಂಡಂತಹ ಜನಸಾಗರ ಇಂದೆಂದು ನೋಡಿರದ ರೀತಿಯಲ್ಲಿ ಜನಸ್ಥೋಮವು ಹರಿದು ಬಂದಿದ್ದು ಸಾರ್ವಜನಿಕರನ್ನು ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆಗೆ ಕಷ್ಟ ಸಾಧ್ಯವಾಗಿದೆ. ಸಂಜೆ 5 ಗಂಟೆಯಿಂದಲ್ಲೇ ಹೊರವಲಯ ರಸ್ತೆಯ ತುಂಬಾ ಜನ ಸಾಗರ ತುಂಬಿ ತುಳುಕುತ್ತಿತ್ತು ರಸ್ತೆಯಲ್ಲಿ ಸುಮಾರು ಒಂದು ಕಿಲೋಮೀಟರ್ ವರೆಗೂ ಕೂಡ ವಾಹನಗಳು ನಿಧಾನಗತಿಯಲ್ಲಿ ಸಾಗಿದವು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವರ್ತನೆ ತಪ್ಪಿದರೆ ದಾಳಿ ನಿಶ್ಚಿತ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

11 hours ago

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…

11 hours ago

ಬೆಟ್ಟದಪುರ | ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶ ; ಬಾಲಕ ಸಾವು

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…

13 hours ago

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

14 hours ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

15 hours ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

17 hours ago