ಮೈಸೂರು: ಲೋಕಸಭಾ ಚುನಾವಣೆ ಎರಡನೇ ಹಂತದ ಮತದಾನ ಪ್ರಕ್ರಿಯೆಯಲ್ಲಿ ರಾಜ್ಯದ 14 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ಇದೇ ಏ.26ರ ಶುಕ್ರವಾರದಂದು ನಡೆಯಲಿದೆ. ಈ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಮೃಗಾಲಯ ಪ್ರಾಧಿಕಾರ ಮಹತ್ವದ ಸುತ್ತೋಲೆಯನ್ನು ಹೊರಡಿಸಲಾಗಿದೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಇದೇ ಏ.26ರ ಶುಕ್ರವಾರದಂದು ಚುನಾವಣೆ ನಡೆಯಲಿದ್ದು, ಆ ದಿನಂದು ಮೈಸೂರಿನ ಪ್ರಸಿದ್ಧ ಸ್ಥಳಗಳಾದ ಮೈಸೂರು ಅರಮನೆ, ಶ್ರೀ ಚಾಮರಾಜೇಂದ್ರ ಮೃಗಾಲಯ(ಮೈಸೂರು ಜೂ), ಕಾರಂಜಿ ಕೆರೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂದ ವಿಧಿಸಲಾಗಿದೆ ಎಂದು ಹೇಳಲಾಗಿದೆ.
ಚುನಾವಣೆಗೆ ಹೆಚ್ಚಿನ ಮನ್ನಣೆ ನೀಡುವ ಉದ್ದೇಶದಿಂದಾಗಿ ಈ ಕಾರ್ಯ ಕೈಗೊಳ್ಳಲಾಗಿದೆ. ಚುನಾವಣೆ ನಂತರದ ದಿನಗಳಾದ ಶನಿವಾರ ಹಾಗೂ ಭಾನುವಾರ ರಜಾ ದಿನಗಳಾಗಿದ್ದು, ಹೆಚ್ಚಿನ ಪ್ರವಾಸಿಗರು ಪ್ರಸಿದ್ಧ ಸ್ಥಳಗಳಿಗೆ ಭೇಟಿ ನೀಡುವ ಹಿನ್ನಲೆಯಲ್ಲಿ ಏ.೩೦ ರ ವಾರದ ರಜೆಯನ್ನು ತೆಗೆದುಹಾಕಲಿದೆ. ಇದರಿಂದ ಬೇಸಿಗೆಯಲ್ಲಿ ಹೆಚ್ಚುತ್ತಿರುವ ಪ್ರವಾಸಿಗರಿಗೆ ಅನುಕೂಲವಾಗಲಿದೆ ಎಂದು ಪ್ರಾಧಿಕಾರ ಅಭಿಪ್ರಾಯಪಟ್ಟಿದೆ ಎಂದು ಹೇಳಲಾಗಿದೆ.
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…
ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…