Mysore
28
overcast clouds

Social Media

ಭಾನುವಾರ, 09 ಆಗಸ್ಟ್ 2026
Light
Dark

ಮೃಗಾಲಯದ ಆನೆ ಅಭಿ ಮತ್ತಿಗೋಡಿನಲ್ಲಿ ಕೊನೆಯುಸಿರು

ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.‌

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದ ಸಾಕಾನೆ ಜೂನಿಯರ್ ಅಭಿ(೨೧) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಕೂಂಬಿಂಗ್‌ನಲ್ಲಿ ಚಾಣಾಕ್ಷನಾಗಿದ್ದ ಅಭಿಯನ್ನು ಕಾಡಾನೆ ಸೆರೆ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗುತ್ತಿತ್ತು. ೮ ತಿಂಗಳ ಹಿಂದೆ ಮೇಯಲು ಬಿಟ್ಟಿದ್ದ ವೇಳೆ ಕಾಡಿನಲ್ಲಿ ಗುಂಡಿಗೆ ಕಾಲು ಹಾಕಿ ಮಂಡಿ ನೋವು ಮಾಡಿಕೊಂಡಿತ್ತು.

ಅಂದಿನಿಂದ ಸಾಕಾನೆ ಶಿಬಿರದಲ್ಲಿ ಪಶುವೈದ್ಯ ಡಾ.ರಮೇಶ್ ಚಿಕಿತ್ಸೆ ನೀಡುತ್ತಿದ್ದರು. ಸ್ವಲ್ಪಮಟ್ಟಿಗೆ ಚೇತರಿಸಿಕೊಂಡು ಕುಂಟುತ್ತಲೇ ಶಿಬಿರದಲ್ಲಿ ಅತ್ತಿಂದಿತ್ತ ಓಡಾಡಿಕೊಂಡಿದ್ದ ಅಭಿಗೆ ಕೆಲ ದಿನಗಳಿಂದ ನಡೆಯಲಾಗದೆ ಮಲಗಿದ್ದಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಸಾವನ್ನಪ್ಪಿದೆ. ವಿಷಯ ತಿಳಿದು ಡಿಸಿಎಫ್ ಸೀಮಾ, ಎಸಿಎಫ್ಲ ಕ್ಷ್ಮೀಕಾಂತ್, ಆರ್‌ಎಫ್‌ಒ ದೇವರಾಜ್ ಭೇಟಿ ನೀಡಿ ಪರಿಶೀಲಿಸಿದರು. ಪಶುವೈದ್ಯ ಡಾ.ರಮೇಶ್ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಆನೆಯ ಕಳೇಬರವನ್ನು ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು.

Tags:
error: Content is protected !!