ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದ ಸಾಕಾನೆ ಜೂನಿಯರ್ ಅಭಿ(೨೧) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಕೂಂಬಿಂಗ್ನಲ್ಲಿ ಚಾಣಾಕ್ಷನಾಗಿದ್ದ ಅಭಿಯನ್ನು ಕಾಡಾನೆ ಸೆರೆ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗುತ್ತಿತ್ತು. ೮ ತಿಂಗಳ ಹಿಂದೆ ಮೇಯಲು ಬಿಟ್ಟಿದ್ದ ವೇಳೆ ಕಾಡಿನಲ್ಲಿ ಗುಂಡಿಗೆ ಕಾಲು ಹಾಕಿ ಮಂಡಿ ನೋವು ಮಾಡಿಕೊಂಡಿತ್ತು.
ಅಂದಿನಿಂದ ಸಾಕಾನೆ ಶಿಬಿರದಲ್ಲಿ ಪಶುವೈದ್ಯ ಡಾ.ರಮೇಶ್ ಚಿಕಿತ್ಸೆ ನೀಡುತ್ತಿದ್ದರು. ಸ್ವಲ್ಪಮಟ್ಟಿಗೆ ಚೇತರಿಸಿಕೊಂಡು ಕುಂಟುತ್ತಲೇ ಶಿಬಿರದಲ್ಲಿ ಅತ್ತಿಂದಿತ್ತ ಓಡಾಡಿಕೊಂಡಿದ್ದ ಅಭಿಗೆ ಕೆಲ ದಿನಗಳಿಂದ ನಡೆಯಲಾಗದೆ ಮಲಗಿದ್ದಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಸಾವನ್ನಪ್ಪಿದೆ. ವಿಷಯ ತಿಳಿದು ಡಿಸಿಎಫ್ ಸೀಮಾ, ಎಸಿಎಫ್ಲ ಕ್ಷ್ಮೀಕಾಂತ್, ಆರ್ಎಫ್ಒ ದೇವರಾಜ್ ಭೇಟಿ ನೀಡಿ ಪರಿಶೀಲಿಸಿದರು. ಪಶುವೈದ್ಯ ಡಾ.ರಮೇಶ್ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಆನೆಯ ಕಳೇಬರವನ್ನು ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು.
ಲಕ್ಷ್ಮೀಕಾಂತ್ ಕೋಮಾರಪ್ಪ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಆಯೋಜನೆ; ೮ ತಂಡಗಳು ಭಾಗಿ ಸೋಮವಾರಪೇಟೆ: ಹಲವು ಸಮಾಜಮುಖಿ ಕಾರ್ಯಗಳಿಂದ…
ಮಹಾದೇಶ್ ಎಂ.ಗೌಡ ಮಳೆ ಹಿನ್ನೆಲೆಯಲ್ಲಿ ಹನೂರು ಶೈಕ್ಷಣಿಕ ವಲಯದ ಹಲವು ಶಾಲೆಗಳ ಪೋಷಕರು, ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತಂಕ ಹನೂರು: ಹನೂರು…
ಕೆ.ಎಂ.ಅನುಚೇತನ್ ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆಗೆ ಕನ್ನಡಿ ನಿರ್ಬಂಧ ಮೈಸೂರು: ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡಿ ನಗರದ ಸ್ವಚ್ಛತೆಗೆ ಸವಾಲಾಗಿದ್ದವರಿಗೆ…
ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ನಗರದ ಶೈಕ್ಷಣಿಕ ಪರಂಪರೆಯ ಭಾಗವಾಗಿರುವ ಮಹಾರಾಜ ಕಾಲೇಜು ವಿದ್ಯಾರ್ಥಿನಿಲಯ ಕಟ್ಟಡ ಈಗ ಆತಂಕದ ಕೇಂದ್ರವಾಗಿದೆ.…
ಶ್ರೀರಂಗಪಟ್ಟಣ : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…