ಮೈಸೂರು

ಮೃಗಾಲಯ, ಕಾರಂಜಿಕೆರೆ ಟಿಕೆಟ್‌ ದರ ಹೆಚ್ಚಳ ; ಆಗಸ್ಟ್‌ 1ರಿಂದಲೇ ಪ್ರವೇಶ ದರ ಜಾರಿಗೆ

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆ ಪ್ರಕೃತಿ ಉದ್ಯಾನವನದ ಪ್ರವೇಶ ಶುಲ್ಕ ದರವನ್ನು ಹೆಚ್ಚಳ ಮಾಡಲಾಗಿದ್ದು, ಆಗಸ್ಟ್‌ 1 ರಿಂದ ಹೊಸ ದರ ಜಾರಿಯಾಗಲಿದೆ.

ಪ್ರಾಣಿಗಳ ನಿರ್ವಹಣಾ ವೆಚ್ಚವು ಹೆಚ್ಚಾಗಿದ್ದು, ಮೃಗಾಲಯ, ಕಾರಂಜಿಕೆರೆಯ ಪ್ರವೇಶ ದರಗಳನ್ನು ಪರಿಷ್ಕರಣೆ ಮಾಡುವಂತೆ ಪ್ರಸ್ತಾಪಿಸಿ, ಶೇ.20ರಷ್ಟು ಹೆಚ್ಚಳ ಮಾಡಿ ದರಗಳನ್ನು ಹೆಚ್ಚಿಸಲು ಅನುಮೋದನೆ ನೀಡುವಂತೆ ಕೋರಲಾಗಿತ್ತು. ಅದರಂತೆ, ಜುಲೈ 10 ಮತ್ತು 24 ರಂದು ನಡೆದ ಕರ್ನಾಟಕ ಮೃಗಾಲಯ ಪ್ರಾಽಕಾರದ 159ನೇ ಆಡಳಿತ ಮಂಡಳಿ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿದ ಬಳಿಕ ದರ ಪರಿಷ್ಕರಣೆಗೆ ಒಪ್ಪಿಗೆ ಸೂಚಿಸಲಾಗಿದೆ.

ಆಡಳಿತ ಮಂಡಳಿಯ ಸಭೆಯ ನಿರ್ಣಯದಂತೆ ಶೇ.20ರಷ್ಟು ದರ ಪರಿಷ್ಕರಣೆ ಮಾಡಲು ಒಪ್ಪಿಗೆ ಸೂಚಿಸಿದ್ದರಿಂದ ಚಿಲ್ಲರೆ ಅಭಾವವನ್ನು ಸರಿದೂಗಿಸಲು ಮತ್ತು ಪ್ರವಾಸಿಗರಿಗೆ ಅನುಕೂಲವಾಗುವಂತೆ ಸಣ್ಣಪುಟ್ಟ ದರದ ವ್ಯತ್ಯಾಸವನ್ನು ಕೈಬಿಟ್ಟು ದರ ಪರಿಷ್ಕರಿಸಲಾಗಿದೆ ಎಂದು ಚಾಮರಾಜೇಂದ್ರ ಮೃಗಾಲಯದ ಕಾರ್ಯ ನಿರ್ವಾಹಕ ನಿರ್ದೇಶಕ ರಂಗಸ್ವಾಮಿ ಹೇಳಿದ್ದಾರೆ.

ಹೊಸ ದರ ಪಟ್ಟಿ ಹೀಗಿದೆ…

ಮೃಗಾಲಯ
ವಯಸ್ಕರಿಗೆ – 120 ರೂ.
ಮಕ್ಕಳಿಗೆ (5-12ವರ್ಷ) -60 ರೂ.

ಕಾರಂಜಿಕೆರೆ
ವಯಸ್ಕರಿಗೆ -60ರೂ
ಮಕ್ಕಳಿಗೆ (5-12ವರ್ಷ) -30 ರೂ.

ಮೃಗಾಲಯ-ಕಾರಂಜಿ ಕಾಂಬೋ
ವಯಸ್ಕರಿಗೆ- 150 ರೂ.
ಮಕ್ಕಳಿಗೆ-80 ರೂ.

ವಿದ್ಯಾರ್ಥಿಗಳಿಗೆ ರಿಯಾಯಿತಿ

ಎಲ್‌ಕೆಜೆಯಿಂದ ಯುಕೆಜಿ ವಿದ್ಯಾರ್ಥಿಗಳಿಗೆ-ಉಚಿತ
1-7ನೇ ತರಗತಿ -40 ರೂ.
8-12ನೇ ತರಗತಿ – 50 ರೂ.

ಬ್ಯಾಟರಿ ಚಾಲಿತ ವಾಹನದ ಟಿಕೆಟ್
ವಯಸ್ಕರಿಗೆ-240 ರೂ.
ಮಕ್ಕಳಿಗೆ (5-12ವರ್ಷ) ಹಿರಿಯ ನಾಗರಿಕರಿಗೆ-180 ರೂ.

ಆಂದೋಲನ ಡೆಸ್ಕ್

Recent Posts

SSLC RESULTS : ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ ; ಇಲ್ಲಿದೆ ಮಾಹಿತಿ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಶಿಕ್ಷಣ…

2 mins ago

SSLC RESULTS | ಶೇ.94.10ರಷ್ಟು ಫಲಿತಾಂಶ,7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ

ಬೆಂಗಳೂರು : ಇಂದು 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಇದೇ ಮೊದಲ ಬಾರಿಗೆ ಶೇ.94.10ರಷ್ಟು ಫಲಿತಾಂಶ ಪ್ರಕಟವಾಗಿದೆ.…

42 mins ago

SSLC RESULTS | ಈ ಬಾರಿಯೂ ಬಾಲಕಿಯರೇ ಮೇಲುಗೈ, ಶೇ.96.18 ವಿದ್ಯಾರ್ಥಿನಿಯರ್‌ ಪಾಸ್‌

ಬೆಂಗಳೂರು : 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಫಲಿತಾಂಶ ಬಂದಿದೆ. ಶಿಕ್ಷಣ ಸಚಿವ…

1 hour ago

SSLC RESULTS | ದಕ್ಷಿಣ ಕನ್ನಡ ರಾಜ್ಯಕ್ಕೆ ಪ್ರಥಮ, ಕಲಬುರಗಿಗೆ ಕೊನೆ ಸ್ಥಾನ

ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ ಫಲಿತಾಂಶದಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬಂದಿದೆ.…

1 hour ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಬೆಂಗಳೂರು : 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶವನ್ನು ಬುಧವಾರ (ಏಪ್ರಿಲ್ 23) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ…

2 hours ago

ಬರಿದಾಗುತ್ತಿರುವ ಕಪಿಲೆಯ ಒಡಲಿಗೆ ಕೊಳಚೆ ನೀರು

ಕೈಗಾರಿಕೆಗಳ ತ್ಯಾಜ್ಯ, ಒಳಚರಂಡಿ ನೀರು ಸೇರಿ ಸ್ನಾನಘಟ್ಟದ ನೀರು ಕಲ್ಮಶ, ಸ್ನಾನ ಮಾಡುವ ಭಕ್ತರಿಗೆ ರೋಗದ ಭೀತಿ ಎಸ್.ಎಸ್.ಭಟ್ ನಂಜನಗೂಡು…

2 hours ago