ಮೈಸೂರು: ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್.ಯುಕೇಶ್ ಕುಮಾರ್ ಅವರಿಂದು ಮೈಸೂರು ತಾಲ್ಲೂಕಿನ ದೊಡ್ಡ ಹೆಜ್ಜೂರು, ಕಿರಂಗೂರು ಹಾಗೂ ಉಮ್ಮತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಹಾಡಿ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ನಿವಾಸಿಗಳ ಸಮಸ್ಯೆ ಆಲಿಸಿದರು.
ಮೊದಲಿಗೆ ದೊಡ್ಡ ಹೆಜ್ಜೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಅವರು, ಇಂದಿಗೂ ಘನ ತ್ಯಾಜ್ಯ ವಿಲೇವಾರಿ ಘಟಕ ಕಾರ್ಯನಿರ್ವಹಿಸದ ಬಗ್ಗೆ ಪ್ರಶ್ನೆ ಮಾಡಿದರು. ಜೊತೆಗೆ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಬೇಡಿಕೆ ಮತ್ತು ವಸೂಲಾತಿ ಸಂಬಂಧಿಸಿದಂತೆ ಮಾಹಿತಿ ಪಡೆದುಕೊಂಡರು.
ಬಳಿಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ 15ನೇ ಹಣಕಾಸು ಯೋಜನೆಯಡಿ ನಿರ್ಮಾಣಗೊಂಡಿರುವ ಶೌಚಾಲಯ ಕಾಮಗಾರಿ ಪರಿಶೀಲನೆ ಮಾಡಿದರು. ಜೊತೆಗೆ ಶಾಲೆಯಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಕಲ್ಪಿಸಿರುವುದರ ಕುರಿತು ಮಾಹಿತಿ ಪಡೆದರು.
ಬಳಿಕ ಕಿರಂಗೂರಿನ ಶಂಕರಪುರ ಹಾಡಿಗೆ ತೆರಳಿ ಅಲ್ಲಿನ ಜನರ ಸಮಸ್ಯೆಯನ್ನು ಆಲಿಸಿದರು. ಈ ವೇಳೆ ಅಲ್ಲಿನ ಸ್ಥಳೀಯರು ವಸತಿ ಕುರಿತು ಬೇಡಿಕೆ ಸಲ್ಲಿಸಿದ್ದು, ಒಂದೇ ಮನೆಯಲ್ಲಿ ಒಂದೆರಡು ಕುಟುಂಬಗಳು ಹೆಚ್ಚಾಗಿ ವಾಸವಿದ್ದು, ನಿವೇಶನ ವಂಚಿತರಾದವರಿಗೆ ಸೂಕ್ತ ವಸತಿ ಕಲ್ಪಿಸುವಂತೆ ಮನವಿ ಸಲ್ಲಿಸಿದರು.
ಬಳಿಕ ಉಮ್ಮತ್ತೂರು ಗ್ರಾಮ ಪಂಚಾಯಿತಿಯ ನಲ್ಲೂರು ಪಾಲ ಆಶ್ರಮ ಶಾಲೆ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ಮಾಡಿದ್ದು, ಇಲ್ಲಿನ ಹಂಗಾಮಿ ಶಿಕ್ಷಕರಿಗೆ ನಿಗಧಿತ ಸಮಯಕ್ಕೆ ವೇತನ ಪಾವತಿಯಾಗದಿರುವ ಕುರಿತ ಸಮಸ್ಯೆ ಆಲಿಸಿದರು.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…