ಮೈಸೂರು

ಮೈಸೂರು| ಹಾಡಿ ಪ್ರದೇಶಕ್ಕೆ ಜಿಪಂ ಸಿಇಓ ಭೇಟಿ: ಅಹವಾಲು ಸ್ವೀಕಾರ

ಮೈಸೂರು: ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್.ಯುಕೇಶ್ ಕುಮಾರ್ ಅವರಿಂದು ಮೈಸೂರು ತಾಲ್ಲೂಕಿನ ದೊಡ್ಡ ಹೆಜ್ಜೂರು, ಕಿರಂಗೂರು ಹಾಗೂ ಉಮ್ಮತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಹಾಡಿ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ನಿವಾಸಿಗಳ ಸಮಸ್ಯೆ ಆಲಿಸಿದರು.

ಮೊದಲಿಗೆ ದೊಡ್ಡ ಹೆಜ್ಜೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಅವರು, ಇಂದಿಗೂ ಘನ ತ್ಯಾಜ್ಯ ವಿಲೇವಾರಿ ಘಟಕ ಕಾರ್ಯ‌ನಿರ್ವಹಿಸದ ಬಗ್ಗೆ ಪ್ರಶ್ನೆ ಮಾಡಿದರು. ಜೊತೆಗೆ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಬೇಡಿಕೆ ಮತ್ತು ವಸೂಲಾತಿ ಸಂಬಂಧಿಸಿದಂತೆ ಮಾಹಿತಿ ಪಡೆದುಕೊಂಡರು.

ಬಳಿಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ 15ನೇ ಹಣಕಾಸು ಯೋಜನೆಯಡಿ ನಿರ್ಮಾಣಗೊಂಡಿರುವ ಶೌಚಾಲಯ ಕಾಮಗಾರಿ ಪರಿಶೀಲನೆ ಮಾಡಿದರು. ಜೊತೆಗೆ ಶಾಲೆಯಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಕಲ್ಪಿಸಿರುವುದರ ಕುರಿತು ಮಾಹಿತಿ ಪಡೆದರು.

ಬಳಿಕ ಕಿರಂಗೂರಿನ‌ ಶಂಕರಪುರ ಹಾಡಿಗೆ ತೆರಳಿ ಅಲ್ಲಿನ ಜನರ ಸಮಸ್ಯೆಯನ್ನು ಆಲಿಸಿದರು. ಈ ವೇಳೆ ಅಲ್ಲಿನ‌ ಸ್ಥಳೀಯರು ವಸತಿ ಕುರಿತು ಬೇಡಿಕೆ ಸಲ್ಲಿಸಿದ್ದು, ಒಂದೇ ಮನೆಯಲ್ಲಿ ಒಂದೆರಡು ಕುಟುಂಬಗಳು ಹೆಚ್ಚಾಗಿ ವಾಸವಿದ್ದು, ನಿವೇಶನ ವಂಚಿತರಾದವರಿಗೆ ಸೂಕ್ತ‌ ವಸತಿ ಕಲ್ಪಿಸುವಂತೆ‌ ಮನವಿ ಸಲ್ಲಿಸಿದರು.

ಬಳಿಕ ಉಮ್ಮತ್ತೂರು ಗ್ರಾಮ ಪಂಚಾಯಿತಿಯ ನಲ್ಲೂರು ಪಾಲ ಆಶ್ರಮ ಶಾಲೆ‌ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ಮಾಡಿದ್ದು, ಇಲ್ಲಿನ ಹಂಗಾಮಿ ಶಿಕ್ಷಕರಿಗೆ ನಿಗಧಿತ‌ ಸಮಯಕ್ಕೆ ವೇತನ ಪಾವತಿಯಾಗದಿರುವ ಕುರಿತ ಸಮಸ್ಯೆ ಆಲಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

2 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

2 hours ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

2 hours ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

2 hours ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

2 hours ago