ಮೈಸೂರು : ನಗರದ ಮೈಸೂರು ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣ ಕೇಂದ್ರದ ವತಿಯಿಂದ ಕೇಂದ್ರದ ಸಭಾಂಗಣದಲ್ಲಿ ಇಂದು ‘೬೬ನೇ ಧಮ್ಮದೀಕ್ಷಾ ದಿನಾಚರಣೆ’ ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಉದ್ಘಾಟಿಸಿದರು.

ಕಾರ್ಯಕ್ರಮವು ಮೈಸೂರು ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣ ಕೇಂದ್ರದ ವತಿಯಿಂದ ನಡೆಯಿತು.

ಕಾರ್ಯಕ್ರಮದಲ್ಲಿಬೈಲುಕುಪ್ಪೆಯ ಸೆರಾಜೆ ಮೊನಾಸ್ಟಿಕ್ ವಿಶ್ವವಿದ್ಯಾನಿಲಯದ ನಿರ್ದೇಶಕ ಬಿಕ್ಕು ಲೋಬ್ ಸಂಗ್ ದೋರ್ಜಿ ಪಾಲ್ ಜೋರ್, ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣ ಕೇಂದ್ರದ ನಿರ್ದೇಶಕ ಡಾ.ಎಸ್.ನರೇಂದ್ರಕುಮಾರ್, ಪ್ರಾಧ್ಯಾಪಕರಾದ ಜೆ.ಸೋಮಶೇಖರ್, ಪ್ರೊ.ಇಂದಿರಾ, ಪ್ರೊ.ಜಯಶಂಕರ್, ಪ್ರೊ.ತಿಮ್ಮರಾಯಪ್ಪ, ಪ್ರೊ.ಬಸವರಾಜು, ಪ್ರೊ.ಪುಟ್ಟಮಾದಯ್ಯ ಇತರರು ಹಾಜರಿದ್ದರು.





