ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧಿಕೃತವಾಗಿ ಚಾಲನೆ ನೀಡಿದರು.
ಇಂದು ಬೆಳಿಗ್ಗೆ 9:00 ಗಂಟೆಗೆ ನಗರದ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯದ ಪರವಾಗಿ ಬರ ಮಾಡಿಕೊಳ್ಳಲಾಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ಕೈಗಳಿಂದ ಮುಗಿದು ಸ್ವಾಗತಿಸಿದರು.