ನಗರದಲ್ಲಿ ಸಂಸಾರ ಸಮೇತ ಬಿಡಾರ ಹೂಡಿರುವ ವಲಸೆ ವ್ಯಾಪಾರಿಗಳು
-ಆಕಾಶ್ ಆರ್.ಎಸ್
ಮೈಸೂರು: ಕೊರೊನಾ ಕಾರಣದಿಂದ ಎರಡು ವರ್ಷದಿಂದ ಅದ್ಧೂರಿ ದಸರಾ ಆಚರಣೆ ಇಲ್ಲದೇ ವ್ಯಾಪಾರ, ವ್ಯವಹಾರ ಮಂಗಾಗಿತ್ತು. ಅದರಲ್ಲಿಯೂ ಬೀದಿ ಬದಿಗಳಲ್ಲಿ ವ್ಯಾಪಾರ ಮಾಡುವ ವಲಸೆ ವ್ಯಾಪಾರಿಗಳ ಮುಖದಲ್ಲಿ ನಿರಾಸೆ ತುಂಬಿತ್ತು. ಆದರೆ ಈ ಬಾರಿಯ ಅದ್ಧೂರಿ ದಸರಾ ಇವರ ಬಾಳಲ್ಲಿ ಬೆಳಕು ಚೆಲ್ಲಿದೆ.
ದಸರಾ ಉತ್ಸವದ ಹಿನ್ನೆಲೆಯಲ್ಲಿ ಇಡೀ ನಗರವೇ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಎಲ್ಲಿ ನೋಡಿದರೂ ದೀಪಾಲಂಕಾರ, ಜನಜಂಗುಳಿ, ಪ್ರವಾಸಿಗರಲ್ಲಿ ಹರ್ಷೋದ್ಗಾರ ಮನೆ ಮಾಡಿದೆ. ವಿಭೃಂಜಣೆಯಿಂದ ನಡೆಯುತ್ತಿರುವ ಉತ್ಸವದಲ್ಲಿ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಗಳು, ವೇದಿಕೆ ಕಾರ್ಯಕ್ರಮಗಳೂ ಸಾಗುತ್ತಿವೆ. ಇದನ್ನು ಕಣ್ತುಂಬಿಕೊಳ್ಳಲು ಜನ ಸಾಗರವೇ ಸೇರುತ್ತಿದೆ. ಈ ವೇಳೆಯಲ್ಲಿ ರಸ್ತೆ ಬದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳು ಹಾಗೂ ವಲಸೆ ವ್ಯಾಪಾರಿಗಳು ಒಂದಷ್ಟು ಕಾಸು ಸಂಪಾದನೆ ಮಾಡಲು ಸಹಾಯವಾಗುತ್ತಿದೆ.
ನಗರದ ಹಾರ್ಡಿಂಗ್ ಸರ್ಕಲ್, ಅರಮನೆಯ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗ, ದೇವರಾಜ ಅರಸು ರಸ್ತೆ, ಚಿಕ್ಕ ಗಡಿಯಾರ ಸರ್ಕಲ್, ಗನ್ ಹೌಸ್ ಸರ್ಕಲ್, ಸಿಟಿ ಬಸ್ ನಿಲ್ದಾಣ, ಅಗ್ರಹಾರ, ಸಯ್ಯಾಜಿರಾವ್ ರಸ್ತೆ, ದೊಡ್ಡ ಕೆರೆ ಮೈದಾನ ಸೇರಿ ಎಲ್ಲ ಕಡೆಗಳಲ್ಲಿಯೂ ಪಳಪಳ ಮಿನುಗುವ ಬಲೂನ್ಗಳು, ಪ್ಲಾಸ್ಟಿಕ್ ಬೊಂಬೆಗಳು, ಪ್ರಾಣಿಗಳ ಮುಖವಾಡ, ಬಣ್ಣ ಬಣ್ಣ ಆಟಿಕೆಗಳು, ಪೀಪಿಗಳು ಸದ್ದು ಮಾಡುತ್ತಿವೆ.
ದಸರಾ ಕೇವಲ ಸಂಭ್ರಮದ ಗೂಡಾಗದೆ ಉತ್ತರ ಪ್ರದೇಶ, ಮಧ್ಯಪ್ರದೇಶ, ಅಸ್ಸಾಂ, ಬಿಹಾರ, ತಮಿಳುನಾಡು ಸೇರಿ ವಿವಿಧ ರಾಜ್ಯಗಳಿಂದ ಆಗಮಿಸಿರುವ ವಲಸೆ ವ್ಯಾಪಾರಿಗಳಿಗೆ ಆಸರೆಯ ಆಚರಣೆಯಾಗಿದೆ. ವಲಸೆಗಾರರು ಸ್ವತಃ ಸ್ವಂತ ಊರಿನ ಜಾತ್ರೆಗೆ ಬರುವಂತೆ ಇಡೀ ಸಂಸಾರದ ಸಮೇತವಾಗಿ ಮೈಸೂರಿಗೆ ಬಂದು ಬಿಡಾರ ಹೂಡಿದ್ದಾರೆ. ರಸ್ತೆ ಬದಿಯಲ್ಲೆ ಹಾಸಿಗೆ ಹಾಕಿಕೊಂಡು ಮಕ್ಕಳನ್ನು ಪಾಲನೆ ಪೋಷಣೆ ಮಾಡುತ್ತಾ, ಅಲ್ಲೇ ಊಟೋಪಚಾರವನ್ನೂ ನಡೆಸುತ್ತಿದ್ದಾರೆ. ಇವರಲ್ಲಿ ಮಹಿಳಾ ವ್ಯಾಪಾರಿಗಳೇ ಹೆಚ್ಚಾಗಿದ್ದು, ಪ್ರವಾಸಿಗರ ಮನವೊಲಿಸಿ ವ್ಯಾಪಾರ ಮಾಡುತ್ತಿರುವ ದೃಶ್ಯ ನಗರದ ಹೃದಯ ಭಾಗದಲ್ಲಿ ಸಾಮಾನ್ಯವಾಗಿದೆ.
ದೆಹಲಿ ಕಣ್ಣೋಟ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಕಳೆದ ಒಂದೂವರೆ ತಿಂಗಳಿಂದ ನಡೆಸುತ್ತಿರುವ ಯುದ್ಧದಿಂದ ಉಂಟಾಗಿರುವ ಇಂಧನ ಮತ್ತು ಅನಿಲ…
ಕನ್ನಡದ ನಾಲ್ವರು ಖ್ಯಾತ ಕವಿಗಳು ತಮ್ಮ ಮೊದಲ ಕವಿತೆಯ ನೆನಪಲ್ಲಿ ಹೇಗೆ ಕಳೆದು ಹೋಗಿದ್ದಾರೆ ನೋಡಿ. ಬಹುಶಃ, ಮೊದಲ ಕವಿತೆ…
ಬೆಂಗಳೂರು : ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್…
ಇಸ್ಲಾಮಾಬಾದ್ : ಪಶ್ಚಿಮ ಏಷ್ಯಾ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ 21…
ಮಂಡ್ಯ : ತಾಲ್ಲೂಕಿನ ಹೊಳಲು ಗ್ರಾಮದಲ್ಲಿ ಶುಕ್ರವಾರ ಸಂಜೆ ಸುರಿದ ಭಾರೀ ಬಿರುಗಾಳಿ ಸಹಿತ ಮಳೆಯಿಂದ ಹೊಳಲು ಗ್ರಾಮದ ವೃತ್ತದಲ್ಲಿ…
ಕೊಡಗಿನಲ್ಲಿ ಕಾಡುಪಾಲಾಗಿದ್ದ ಕೇರಳದ ಶರಣ್ಯ ಅನುಭವ ಕಥನ ನಾನು ಶರಣ್ಯ. ಕೇರಳದ ಕೋಝಿಕೋಡ್ ಜಿಲ್ಲೆಯ ನಾದಾಪುರಂನ ಯುವತಿ. ಕೊಚ್ಚಿಯಲ್ಲಿ ಐಟಿ…