ಜಿಲ್ಲೆಗಳು

ವಲಸೆ ವ್ಯಾಪಾರಿಗಳಿಗೆ ಬೆಳಕಾದ ದಸರಾ

ನಗರದಲ್ಲಿ ಸಂಸಾರ ಸಮೇತ ಬಿಡಾರ ಹೂಡಿರುವ ವಲಸೆ ವ್ಯಾಪಾರಿಗಳು

-ಆಕಾಶ್‌ ಆರ್‌.ಎಸ್‌

ಮೈಸೂರು: ಕೊರೊನಾ ಕಾರಣದಿಂದ ಎರಡು ವರ್ಷದಿಂದ ಅದ್ಧೂರಿ ದಸರಾ ಆಚರಣೆ ಇಲ್ಲದೇ ವ್ಯಾಪಾರ, ವ್ಯವಹಾರ ಮಂಗಾಗಿತ್ತು. ಅದರಲ್ಲಿಯೂ ಬೀದಿ ಬದಿಗಳಲ್ಲಿ ವ್ಯಾಪಾರ ಮಾಡುವ ವಲಸೆ ವ್ಯಾಪಾರಿಗಳ ಮುಖದಲ್ಲಿ ನಿರಾಸೆ ತುಂಬಿತ್ತು. ಆದರೆ ಈ ಬಾರಿಯ ಅದ್ಧೂರಿ ದಸರಾ ಇವರ ಬಾಳಲ್ಲಿ ಬೆಳಕು ಚೆಲ್ಲಿದೆ.

ದಸರಾ ಉತ್ಸವದ ಹಿನ್ನೆಲೆಯಲ್ಲಿ ಇಡೀ ನಗರವೇ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಎಲ್ಲಿ ನೋಡಿದರೂ ದೀಪಾಲಂಕಾರ, ಜನಜಂಗುಳಿ, ಪ್ರವಾಸಿಗರಲ್ಲಿ ಹರ್ಷೋದ್ಗಾರ ಮನೆ ಮಾಡಿದೆ. ವಿಭೃಂಜಣೆಯಿಂದ ನಡೆಯುತ್ತಿರುವ ಉತ್ಸವದಲ್ಲಿ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಗಳು, ವೇದಿಕೆ ಕಾರ್ಯಕ್ರಮಗಳೂ ಸಾಗುತ್ತಿವೆ. ಇದನ್ನು ಕಣ್ತುಂಬಿಕೊಳ್ಳಲು ಜನ ಸಾಗರವೇ ಸೇರುತ್ತಿದೆ. ಈ ವೇಳೆಯಲ್ಲಿ ರಸ್ತೆ ಬದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳು ಹಾಗೂ ವಲಸೆ ವ್ಯಾಪಾರಿಗಳು ಒಂದಷ್ಟು ಕಾಸು ಸಂಪಾದನೆ ಮಾಡಲು ಸಹಾಯವಾಗುತ್ತಿದೆ.

ನಗರದ ಹಾರ್ಡಿಂಗ್ ಸರ್ಕಲ್, ಅರಮನೆಯ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗ, ದೇವರಾಜ ಅರಸು ರಸ್ತೆ, ಚಿಕ್ಕ ಗಡಿಯಾರ ಸರ್ಕಲ್, ಗನ್ ಹೌಸ್ ಸರ್ಕಲ್, ಸಿಟಿ ಬಸ್ ನಿಲ್ದಾಣ, ಅಗ್ರಹಾರ, ಸಯ್ಯಾಜಿರಾವ್ ರಸ್ತೆ, ದೊಡ್ಡ ಕೆರೆ ಮೈದಾನ ಸೇರಿ ಎಲ್ಲ ಕಡೆಗಳಲ್ಲಿಯೂ ಪಳಪಳ ಮಿನುಗುವ ಬಲೂನ್‌ಗಳು, ಪ್ಲಾಸ್ಟಿಕ್ ಬೊಂಬೆಗಳು, ಪ್ರಾಣಿಗಳ ಮುಖವಾಡ, ಬಣ್ಣ ಬಣ್ಣ ಆಟಿಕೆಗಳು, ಪೀಪಿಗಳು ಸದ್ದು ಮಾಡುತ್ತಿವೆ.

ದಸರಾ ಕೇವಲ ಸಂಭ್ರಮದ ಗೂಡಾಗದೆ ಉತ್ತರ ಪ್ರದೇಶ, ಮಧ್ಯಪ್ರದೇಶ, ಅಸ್ಸಾಂ, ಬಿಹಾರ, ತಮಿಳುನಾಡು ಸೇರಿ ವಿವಿಧ ರಾಜ್ಯಗಳಿಂದ ಆಗಮಿಸಿರುವ ವಲಸೆ ವ್ಯಾಪಾರಿಗಳಿಗೆ ಆಸರೆಯ ಆಚರಣೆಯಾಗಿದೆ. ವಲಸೆಗಾರರು ಸ್ವತಃ ಸ್ವಂತ ಊರಿನ ಜಾತ್ರೆಗೆ ಬರುವಂತೆ ಇಡೀ ಸಂಸಾರದ ಸಮೇತವಾಗಿ ಮೈಸೂರಿಗೆ ಬಂದು ಬಿಡಾರ ಹೂಡಿದ್ದಾರೆ. ರಸ್ತೆ ಬದಿಯಲ್ಲೆ ಹಾಸಿಗೆ ಹಾಕಿಕೊಂಡು ಮಕ್ಕಳನ್ನು ಪಾಲನೆ ಪೋಷಣೆ ಮಾಡುತ್ತಾ, ಅಲ್ಲೇ ಊಟೋಪಚಾರವನ್ನೂ ನಡೆಸುತ್ತಿದ್ದಾರೆ. ಇವರಲ್ಲಿ ಮಹಿಳಾ ವ್ಯಾಪಾರಿಗಳೇ ಹೆಚ್ಚಾಗಿದ್ದು, ಪ್ರವಾಸಿಗರ ಮನವೊಲಿಸಿ ವ್ಯಾಪಾರ ಮಾಡುತ್ತಿರುವ ದೃಶ್ಯ ನಗರದ ಹೃದಯ ಭಾಗದಲ್ಲಿ ಸಾಮಾನ್ಯವಾಗಿದೆ.

 

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

4 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

12 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

12 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

12 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

15 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

15 hours ago