ಜಿಲ್ಲೆಗಳು

ಮೈಸೂರು ದಸರಾ : ಶ್ವಾನ ಪ್ರದರ್ಶನದಲ್ಲಿ ಗಮನ ಸೆಳೆದ ಚಾರ್ಲಿ 777

ಮೈಸೂರ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಮೈಸೂರು ವಿಶ್ವವಿದ್ಯಾಲಯ ಮೈದಾನದಲ್ಲಿ ಇಂದು ಆಯೋಜಿಸಿದ್ದ ಶ್ವಾನ ಪ್ರದರ್ಶನದಲ್ಲಿ ಆಗಮಿಸಿದ್ದ ಶ್ವಾನಗಳನ್ನು ಕಂಡ ಜನರು ಕುತೂಹಲದಿಂದ ವೀಕ್ಷಿಸಿ ಪ್ರಪಂಚದಲ್ಲಿ ಇಂಥ ತಳಿಯ ನಾಯಿಗಳಿವೆಯೇ ಎಂದು ಆಶ್ಚರ್ಯ ಪಟ್ಟರು.

ಶ್ವಾನ ಪ್ರದರ್ಶನಕ್ಕೆ ಬಂದಿದ್ದ ಆಳೆತ್ತರಕ್ಕಿರುವ ಸಿಂಹ, ಹುಲಿಯಂತಿರುವ ಶ್ವಾನಗಳಿಂದ ಹಿಡಿದು ಸಣ್ಣ ಗಾತ್ರದ ನಾಯಿಗಳ ವೀಕ್ಷಣೆ ಮಾಡಿದರು. ಮೇಳದಲ್ಲಿ ಸುಮಾರು 250 ತಳಿಯ 500 ಶ್ವಾನಗಳು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದವು.

ಪರ್ಷಿಯನ್ ಬೆಕ್ಕು ಸೇರಿದಂತೆ ಅನೇಕ ಜಾತಿಯ ಬೆಕ್ಕುಗಳು ಪ್ರದರ್ಶನದಲ್ಲಿ ಭಾಗವಹಿಸಿ ನೋಡುಗರ ಮನ ಸೆಳೆದವು. ಕೆಲ ಶ್ವಾನಗಳು ತಮ್ಮ ತುಂಟಾದ ಮೂಲಕ ಜನರಿಗೆ ಮುದ ನೀಡಿ ನೆರೆದಿದ್ದವರನ್ನು ರಂಜಿಸಿದವು.

ಶ್ವಾನಗಳು ಇತರ ತಳಿಯ ನಾಯಿಗಳನ್ನು ಕಂಡು ಹೊಸ ಸ್ನೇಹಿತನ್ನು ಪರಿಚಯ ಮಾಡಿಕೊಳ್ಳಲು ಹಾಗೂ ಹಳೆ ಸ್ನೇಹಿತರನ್ನು ಭೇಟಿ ಮಾಡಲು ಪ್ರದರ್ಶನ ವೇದಿಕೆಯಾಯಿತು.
ಗಮನ ಸೆಳೆದ ಚಾರ್ಲಿ: ಈ ವಿಶೇಷವಾಗಿ ಚಾರ್ಲಿ 777 ಚಲನಚಿತ್ರದ ಶ್ವಾನ ಭಾಗಿಯಾಗಿ ಎಲ್ಲರ ಗಮನ ಸೆಳೆಯಿತು ಹಾಗೂ ಮೈಸೂರು ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಶ್ವಾನಗಳು ಬಂದಿದೆ ಹಾಗೂ ದೆಹಲಿ, ಮುಂಬೈ,ಕಲ್ಕತ್ತಾ, ಗೋವಾ, ಗುಜರಾತ್ ಭಾಗದಿಂದ ವಿಶೇಷ ಶ್ವಾನಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.

ಪಗ್, ಜರ್ಮನ್ ಶಪರ್ಡ್, ಗ್ರೇಟ್ ಡೇನ್, ಗೋಲ್ಡನ್ ರೆಟ್ರಿವರ್, ಮುಧೋಳ್, ರಾಟ್ ವಿಲ್ಲರ್, ಬಾಕ್ಸರ್, ಬ್ರಿಟಿಷ್ ಬುಲ್ಡಾಗ್, ಪ್ರೆಂಚ್ ಬುಲ್, ಡಾಗ, ಮಲ್ಟಿ ಶ್, ಚೌ ಚೌ, ಪಿಟ್ ಬುಲ್, ಅಮೆರಿಕನ್ ಬುಲ್ಲಿ, ಸೈಬೀರಿಯನ್ ಹಸ್ಕಿ ಹೀಗೆ ವಿವಿಧ ತಳಿಗಳ ಶ್ವಾನಗಳು ಪ್ರದರ್ಶನದಲ್ಲಿ ಪ್ರಮುಖ್ಯ ಆಕರ್ಷಣೆಯಾಗಿದ್ದವು.

andolanait

Recent Posts

ಓದುಗರ ಪತ್ರ | ಬಸವರಾಜ ಬೊಮ್ಮಾಯಿ ನಿರ್ಧಾರ ಸ್ವಾಗತಾರ್ಹ

ಹಾವೇರಿ ವಿಶ್ವವಿದ್ಯಾಲಯವು ತಮಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ…

9 mins ago

ಓದುಗರ ಪತ್ರ | ಅಮಾನವೀಯ ಲಿಫ್ಟ್ ಸಂಸ್ಕೃತಿ ಅಂತ್ಯವಾಗಲಿ

ನಗರಗಳಲ್ಲಿರುವ ಬಹುಮಹಡಿ ಕಟ್ಟಡಗಳಲ್ಲಿರುವ ಶ್ರೀಮಂತರು ಸ್ವಿಗ್ಗಿ, ಜೊಮ್ಯಾಟೋ ಮೊದಲಾದ ಆನ್‌ಲೈನ್ ಮೂಲಕ ಆಹಾರ ವಿತರಿಸುವ ಕಂಪೆನಿಗಳ ಡೆಲಿವರಿ ಬಾಯ್ಸ್‌ಗೆ ಲಿಫ್ಟ್…

17 mins ago

ಓದುಗರ ಪತ್ರ | ಅಂಚೆ ಕಚೇರಿಗಳು ಜನ ಸ್ನೇಹಿಯಾಗಲಿ

ಅಂಚೆ ಕಚೇರಿಯಲ್ಲಿ ಸಾಮಾನ್ಯ ಜನರು ೫ ವರ್ಷಗಳ ಅವಧಿಗೆ, ಸಣ್ಣ ಉಳಿತಾಯ ಪ್ರತಿನಿಧಿಗಳ ಮೂಲಕ ಆರ್‌ಡಿ (ರಿಕರಿಂಗ್ ಡಿಪಾಸಿಟ್), ಮಾಡಿರುತ್ತಾರೆ.…

19 mins ago

ಜಾನಪದ ಸಿರಿ ಅನಾವರಣಗೊಳಿಸಿದ ಗ್ರಾಮೀಣ ಕಲೆಗಳ ಪ್ರದರ್ಶನ

ಬಟಿಗನಹಳ್ಳಿ ಗ್ರಾಮದಲ್ಲಿ ಬಸವೇಶ್ವರ ಓಕುಳಿ ಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮ ಭೇರ್ಯ: ಸಮೀಪದ ಬಟಿಗನಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಓಕುಳಿ…

26 mins ago

ʻಜಗುಲಿಯಿಂದ ಜಗತ್ತಿನೆಡೆಗೆʼ ಕನಸು ಕಂಡ ಬಿ.ರಾಮಕೃಷ್ಣ

ಪ್ರೊ.ಬಿ.ಜಯಪ್ರಕಾಶಗೌಡ ಮಂಡ್ಯ ಜಿಲ್ಲೆಯ ಈ ಹೊತ್ತಿನ ರಾಜಕಾರಣದಲ್ಲಿ ಒಂದು ಪ್ರಮುಖವಾದ ಹೆಸರು ಬಿ.ರಾಮಕೃಷ್ಣ ಅವರದು. ಅವರು ಒಮ್ಮೆ ಸ್ಥಳೀಯ ಸಂಸ್ಥೆಗಳ…

33 mins ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ ; ಜಾನ್ಸಿ ಎಂಬ ತಾಯಿ, ಆಟೋ ಚಾಲಕಿ, ಮಾರ್ಗದರ್ಶಕಿ

ಬದುಕು ಬದಲಿಸಿದ ಪತಿ ವಿನೋದ್‌ ಬಾಬುರ ಸಲಹೆ ಬೆಂಗಳೂರಿನ ಬಿ. ವಿ. ಜಾನ್ಸಿಯವರ ಬಾಲ್ಯ ಬಹುಕಷ್ಟದಲ್ಲಿ ಬನ್ನೇರುಘಟ್ಟದಲ್ಲಿ ಕಳೆದು ಹೋಗಿತ್ತು.…

47 mins ago