ಜಿಲ್ಲೆಗಳು

ಮೈಸೂರು ದಸರಾ : ಶ್ವಾನ ಪ್ರದರ್ಶನದಲ್ಲಿ ಗಮನ ಸೆಳೆದ ಚಾರ್ಲಿ 777

ಮೈಸೂರ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಮೈಸೂರು ವಿಶ್ವವಿದ್ಯಾಲಯ ಮೈದಾನದಲ್ಲಿ ಇಂದು ಆಯೋಜಿಸಿದ್ದ ಶ್ವಾನ ಪ್ರದರ್ಶನದಲ್ಲಿ ಆಗಮಿಸಿದ್ದ ಶ್ವಾನಗಳನ್ನು ಕಂಡ ಜನರು ಕುತೂಹಲದಿಂದ ವೀಕ್ಷಿಸಿ ಪ್ರಪಂಚದಲ್ಲಿ ಇಂಥ ತಳಿಯ ನಾಯಿಗಳಿವೆಯೇ ಎಂದು ಆಶ್ಚರ್ಯ ಪಟ್ಟರು.

ಶ್ವಾನ ಪ್ರದರ್ಶನಕ್ಕೆ ಬಂದಿದ್ದ ಆಳೆತ್ತರಕ್ಕಿರುವ ಸಿಂಹ, ಹುಲಿಯಂತಿರುವ ಶ್ವಾನಗಳಿಂದ ಹಿಡಿದು ಸಣ್ಣ ಗಾತ್ರದ ನಾಯಿಗಳ ವೀಕ್ಷಣೆ ಮಾಡಿದರು. ಮೇಳದಲ್ಲಿ ಸುಮಾರು 250 ತಳಿಯ 500 ಶ್ವಾನಗಳು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದವು.

ಪರ್ಷಿಯನ್ ಬೆಕ್ಕು ಸೇರಿದಂತೆ ಅನೇಕ ಜಾತಿಯ ಬೆಕ್ಕುಗಳು ಪ್ರದರ್ಶನದಲ್ಲಿ ಭಾಗವಹಿಸಿ ನೋಡುಗರ ಮನ ಸೆಳೆದವು. ಕೆಲ ಶ್ವಾನಗಳು ತಮ್ಮ ತುಂಟಾದ ಮೂಲಕ ಜನರಿಗೆ ಮುದ ನೀಡಿ ನೆರೆದಿದ್ದವರನ್ನು ರಂಜಿಸಿದವು.

ಶ್ವಾನಗಳು ಇತರ ತಳಿಯ ನಾಯಿಗಳನ್ನು ಕಂಡು ಹೊಸ ಸ್ನೇಹಿತನ್ನು ಪರಿಚಯ ಮಾಡಿಕೊಳ್ಳಲು ಹಾಗೂ ಹಳೆ ಸ್ನೇಹಿತರನ್ನು ಭೇಟಿ ಮಾಡಲು ಪ್ರದರ್ಶನ ವೇದಿಕೆಯಾಯಿತು.
ಗಮನ ಸೆಳೆದ ಚಾರ್ಲಿ: ಈ ವಿಶೇಷವಾಗಿ ಚಾರ್ಲಿ 777 ಚಲನಚಿತ್ರದ ಶ್ವಾನ ಭಾಗಿಯಾಗಿ ಎಲ್ಲರ ಗಮನ ಸೆಳೆಯಿತು ಹಾಗೂ ಮೈಸೂರು ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಶ್ವಾನಗಳು ಬಂದಿದೆ ಹಾಗೂ ದೆಹಲಿ, ಮುಂಬೈ,ಕಲ್ಕತ್ತಾ, ಗೋವಾ, ಗುಜರಾತ್ ಭಾಗದಿಂದ ವಿಶೇಷ ಶ್ವಾನಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.

ಪಗ್, ಜರ್ಮನ್ ಶಪರ್ಡ್, ಗ್ರೇಟ್ ಡೇನ್, ಗೋಲ್ಡನ್ ರೆಟ್ರಿವರ್, ಮುಧೋಳ್, ರಾಟ್ ವಿಲ್ಲರ್, ಬಾಕ್ಸರ್, ಬ್ರಿಟಿಷ್ ಬುಲ್ಡಾಗ್, ಪ್ರೆಂಚ್ ಬುಲ್, ಡಾಗ, ಮಲ್ಟಿ ಶ್, ಚೌ ಚೌ, ಪಿಟ್ ಬುಲ್, ಅಮೆರಿಕನ್ ಬುಲ್ಲಿ, ಸೈಬೀರಿಯನ್ ಹಸ್ಕಿ ಹೀಗೆ ವಿವಿಧ ತಳಿಗಳ ಶ್ವಾನಗಳು ಪ್ರದರ್ಶನದಲ್ಲಿ ಪ್ರಮುಖ್ಯ ಆಕರ್ಷಣೆಯಾಗಿದ್ದವು.

andolanait

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

1 hour ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

4 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

6 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

6 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

6 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

6 hours ago