ಜಿಲ್ಲೆಗಳು

ಮೈಸೂರು ದಸರಾ : ಶ್ವಾನ ಪ್ರದರ್ಶನದಲ್ಲಿ ಗಮನ ಸೆಳೆದ ಚಾರ್ಲಿ 777

ಮೈಸೂರ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಮೈಸೂರು ವಿಶ್ವವಿದ್ಯಾಲಯ ಮೈದಾನದಲ್ಲಿ ಇಂದು ಆಯೋಜಿಸಿದ್ದ ಶ್ವಾನ ಪ್ರದರ್ಶನದಲ್ಲಿ ಆಗಮಿಸಿದ್ದ ಶ್ವಾನಗಳನ್ನು ಕಂಡ ಜನರು ಕುತೂಹಲದಿಂದ ವೀಕ್ಷಿಸಿ ಪ್ರಪಂಚದಲ್ಲಿ ಇಂಥ ತಳಿಯ ನಾಯಿಗಳಿವೆಯೇ ಎಂದು ಆಶ್ಚರ್ಯ ಪಟ್ಟರು.

ಶ್ವಾನ ಪ್ರದರ್ಶನಕ್ಕೆ ಬಂದಿದ್ದ ಆಳೆತ್ತರಕ್ಕಿರುವ ಸಿಂಹ, ಹುಲಿಯಂತಿರುವ ಶ್ವಾನಗಳಿಂದ ಹಿಡಿದು ಸಣ್ಣ ಗಾತ್ರದ ನಾಯಿಗಳ ವೀಕ್ಷಣೆ ಮಾಡಿದರು. ಮೇಳದಲ್ಲಿ ಸುಮಾರು 250 ತಳಿಯ 500 ಶ್ವಾನಗಳು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದವು.

ಪರ್ಷಿಯನ್ ಬೆಕ್ಕು ಸೇರಿದಂತೆ ಅನೇಕ ಜಾತಿಯ ಬೆಕ್ಕುಗಳು ಪ್ರದರ್ಶನದಲ್ಲಿ ಭಾಗವಹಿಸಿ ನೋಡುಗರ ಮನ ಸೆಳೆದವು. ಕೆಲ ಶ್ವಾನಗಳು ತಮ್ಮ ತುಂಟಾದ ಮೂಲಕ ಜನರಿಗೆ ಮುದ ನೀಡಿ ನೆರೆದಿದ್ದವರನ್ನು ರಂಜಿಸಿದವು.

ಶ್ವಾನಗಳು ಇತರ ತಳಿಯ ನಾಯಿಗಳನ್ನು ಕಂಡು ಹೊಸ ಸ್ನೇಹಿತನ್ನು ಪರಿಚಯ ಮಾಡಿಕೊಳ್ಳಲು ಹಾಗೂ ಹಳೆ ಸ್ನೇಹಿತರನ್ನು ಭೇಟಿ ಮಾಡಲು ಪ್ರದರ್ಶನ ವೇದಿಕೆಯಾಯಿತು.
ಗಮನ ಸೆಳೆದ ಚಾರ್ಲಿ: ಈ ವಿಶೇಷವಾಗಿ ಚಾರ್ಲಿ 777 ಚಲನಚಿತ್ರದ ಶ್ವಾನ ಭಾಗಿಯಾಗಿ ಎಲ್ಲರ ಗಮನ ಸೆಳೆಯಿತು ಹಾಗೂ ಮೈಸೂರು ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಶ್ವಾನಗಳು ಬಂದಿದೆ ಹಾಗೂ ದೆಹಲಿ, ಮುಂಬೈ,ಕಲ್ಕತ್ತಾ, ಗೋವಾ, ಗುಜರಾತ್ ಭಾಗದಿಂದ ವಿಶೇಷ ಶ್ವಾನಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.

ಪಗ್, ಜರ್ಮನ್ ಶಪರ್ಡ್, ಗ್ರೇಟ್ ಡೇನ್, ಗೋಲ್ಡನ್ ರೆಟ್ರಿವರ್, ಮುಧೋಳ್, ರಾಟ್ ವಿಲ್ಲರ್, ಬಾಕ್ಸರ್, ಬ್ರಿಟಿಷ್ ಬುಲ್ಡಾಗ್, ಪ್ರೆಂಚ್ ಬುಲ್, ಡಾಗ, ಮಲ್ಟಿ ಶ್, ಚೌ ಚೌ, ಪಿಟ್ ಬುಲ್, ಅಮೆರಿಕನ್ ಬುಲ್ಲಿ, ಸೈಬೀರಿಯನ್ ಹಸ್ಕಿ ಹೀಗೆ ವಿವಿಧ ತಳಿಗಳ ಶ್ವಾನಗಳು ಪ್ರದರ್ಶನದಲ್ಲಿ ಪ್ರಮುಖ್ಯ ಆಕರ್ಷಣೆಯಾಗಿದ್ದವು.

andolanait

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

5 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

7 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

8 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

9 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

9 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

9 hours ago