ಜಿಲ್ಲೆಗಳು

ಮೈಸೂರು ದಸರಾ : ಶ್ವಾನ ಪ್ರದರ್ಶನದಲ್ಲಿ ಗಮನ ಸೆಳೆದ ಚಾರ್ಲಿ 777

ಮೈಸೂರ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಮೈಸೂರು ವಿಶ್ವವಿದ್ಯಾಲಯ ಮೈದಾನದಲ್ಲಿ ಇಂದು ಆಯೋಜಿಸಿದ್ದ ಶ್ವಾನ ಪ್ರದರ್ಶನದಲ್ಲಿ ಆಗಮಿಸಿದ್ದ ಶ್ವಾನಗಳನ್ನು ಕಂಡ ಜನರು ಕುತೂಹಲದಿಂದ ವೀಕ್ಷಿಸಿ ಪ್ರಪಂಚದಲ್ಲಿ ಇಂಥ ತಳಿಯ ನಾಯಿಗಳಿವೆಯೇ ಎಂದು ಆಶ್ಚರ್ಯ ಪಟ್ಟರು.

ಶ್ವಾನ ಪ್ರದರ್ಶನಕ್ಕೆ ಬಂದಿದ್ದ ಆಳೆತ್ತರಕ್ಕಿರುವ ಸಿಂಹ, ಹುಲಿಯಂತಿರುವ ಶ್ವಾನಗಳಿಂದ ಹಿಡಿದು ಸಣ್ಣ ಗಾತ್ರದ ನಾಯಿಗಳ ವೀಕ್ಷಣೆ ಮಾಡಿದರು. ಮೇಳದಲ್ಲಿ ಸುಮಾರು 250 ತಳಿಯ 500 ಶ್ವಾನಗಳು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದವು.

ಪರ್ಷಿಯನ್ ಬೆಕ್ಕು ಸೇರಿದಂತೆ ಅನೇಕ ಜಾತಿಯ ಬೆಕ್ಕುಗಳು ಪ್ರದರ್ಶನದಲ್ಲಿ ಭಾಗವಹಿಸಿ ನೋಡುಗರ ಮನ ಸೆಳೆದವು. ಕೆಲ ಶ್ವಾನಗಳು ತಮ್ಮ ತುಂಟಾದ ಮೂಲಕ ಜನರಿಗೆ ಮುದ ನೀಡಿ ನೆರೆದಿದ್ದವರನ್ನು ರಂಜಿಸಿದವು.

ಶ್ವಾನಗಳು ಇತರ ತಳಿಯ ನಾಯಿಗಳನ್ನು ಕಂಡು ಹೊಸ ಸ್ನೇಹಿತನ್ನು ಪರಿಚಯ ಮಾಡಿಕೊಳ್ಳಲು ಹಾಗೂ ಹಳೆ ಸ್ನೇಹಿತರನ್ನು ಭೇಟಿ ಮಾಡಲು ಪ್ರದರ್ಶನ ವೇದಿಕೆಯಾಯಿತು.
ಗಮನ ಸೆಳೆದ ಚಾರ್ಲಿ: ಈ ವಿಶೇಷವಾಗಿ ಚಾರ್ಲಿ 777 ಚಲನಚಿತ್ರದ ಶ್ವಾನ ಭಾಗಿಯಾಗಿ ಎಲ್ಲರ ಗಮನ ಸೆಳೆಯಿತು ಹಾಗೂ ಮೈಸೂರು ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಶ್ವಾನಗಳು ಬಂದಿದೆ ಹಾಗೂ ದೆಹಲಿ, ಮುಂಬೈ,ಕಲ್ಕತ್ತಾ, ಗೋವಾ, ಗುಜರಾತ್ ಭಾಗದಿಂದ ವಿಶೇಷ ಶ್ವಾನಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.

ಪಗ್, ಜರ್ಮನ್ ಶಪರ್ಡ್, ಗ್ರೇಟ್ ಡೇನ್, ಗೋಲ್ಡನ್ ರೆಟ್ರಿವರ್, ಮುಧೋಳ್, ರಾಟ್ ವಿಲ್ಲರ್, ಬಾಕ್ಸರ್, ಬ್ರಿಟಿಷ್ ಬುಲ್ಡಾಗ್, ಪ್ರೆಂಚ್ ಬುಲ್, ಡಾಗ, ಮಲ್ಟಿ ಶ್, ಚೌ ಚೌ, ಪಿಟ್ ಬುಲ್, ಅಮೆರಿಕನ್ ಬುಲ್ಲಿ, ಸೈಬೀರಿಯನ್ ಹಸ್ಕಿ ಹೀಗೆ ವಿವಿಧ ತಳಿಗಳ ಶ್ವಾನಗಳು ಪ್ರದರ್ಶನದಲ್ಲಿ ಪ್ರಮುಖ್ಯ ಆಕರ್ಷಣೆಯಾಗಿದ್ದವು.

andolanait

Recent Posts

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…

9 hours ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

9 hours ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

9 hours ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

10 hours ago