ಮೈಸೂರ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಮೈಸೂರು ವಿಶ್ವವಿದ್ಯಾಲಯ ಮೈದಾನದಲ್ಲಿ ಇಂದು ಆಯೋಜಿಸಿದ್ದ ಶ್ವಾನ ಪ್ರದರ್ಶನದಲ್ಲಿ ಆಗಮಿಸಿದ್ದ ಶ್ವಾನಗಳನ್ನು ಕಂಡ ಜನರು ಕುತೂಹಲದಿಂದ ವೀಕ್ಷಿಸಿ ಪ್ರಪಂಚದಲ್ಲಿ ಇಂಥ ತಳಿಯ ನಾಯಿಗಳಿವೆಯೇ ಎಂದು ಆಶ್ಚರ್ಯ ಪಟ್ಟರು.
ಶ್ವಾನ ಪ್ರದರ್ಶನಕ್ಕೆ ಬಂದಿದ್ದ ಆಳೆತ್ತರಕ್ಕಿರುವ ಸಿಂಹ, ಹುಲಿಯಂತಿರುವ ಶ್ವಾನಗಳಿಂದ ಹಿಡಿದು ಸಣ್ಣ ಗಾತ್ರದ ನಾಯಿಗಳ ವೀಕ್ಷಣೆ ಮಾಡಿದರು. ಮೇಳದಲ್ಲಿ ಸುಮಾರು 250 ತಳಿಯ 500 ಶ್ವಾನಗಳು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದವು.
ಪರ್ಷಿಯನ್ ಬೆಕ್ಕು ಸೇರಿದಂತೆ ಅನೇಕ ಜಾತಿಯ ಬೆಕ್ಕುಗಳು ಪ್ರದರ್ಶನದಲ್ಲಿ ಭಾಗವಹಿಸಿ ನೋಡುಗರ ಮನ ಸೆಳೆದವು. ಕೆಲ ಶ್ವಾನಗಳು ತಮ್ಮ ತುಂಟಾದ ಮೂಲಕ ಜನರಿಗೆ ಮುದ ನೀಡಿ ನೆರೆದಿದ್ದವರನ್ನು ರಂಜಿಸಿದವು.
ಶ್ವಾನಗಳು ಇತರ ತಳಿಯ ನಾಯಿಗಳನ್ನು ಕಂಡು ಹೊಸ ಸ್ನೇಹಿತನ್ನು ಪರಿಚಯ ಮಾಡಿಕೊಳ್ಳಲು ಹಾಗೂ ಹಳೆ ಸ್ನೇಹಿತರನ್ನು ಭೇಟಿ ಮಾಡಲು ಪ್ರದರ್ಶನ ವೇದಿಕೆಯಾಯಿತು.
ಗಮನ ಸೆಳೆದ ಚಾರ್ಲಿ: ಈ ವಿಶೇಷವಾಗಿ ಚಾರ್ಲಿ 777 ಚಲನಚಿತ್ರದ ಶ್ವಾನ ಭಾಗಿಯಾಗಿ ಎಲ್ಲರ ಗಮನ ಸೆಳೆಯಿತು ಹಾಗೂ ಮೈಸೂರು ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಶ್ವಾನಗಳು ಬಂದಿದೆ ಹಾಗೂ ದೆಹಲಿ, ಮುಂಬೈ,ಕಲ್ಕತ್ತಾ, ಗೋವಾ, ಗುಜರಾತ್ ಭಾಗದಿಂದ ವಿಶೇಷ ಶ್ವಾನಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.
ಪಗ್, ಜರ್ಮನ್ ಶಪರ್ಡ್, ಗ್ರೇಟ್ ಡೇನ್, ಗೋಲ್ಡನ್ ರೆಟ್ರಿವರ್, ಮುಧೋಳ್, ರಾಟ್ ವಿಲ್ಲರ್, ಬಾಕ್ಸರ್, ಬ್ರಿಟಿಷ್ ಬುಲ್ಡಾಗ್, ಪ್ರೆಂಚ್ ಬುಲ್, ಡಾಗ, ಮಲ್ಟಿ ಶ್, ಚೌ ಚೌ, ಪಿಟ್ ಬುಲ್, ಅಮೆರಿಕನ್ ಬುಲ್ಲಿ, ಸೈಬೀರಿಯನ್ ಹಸ್ಕಿ ಹೀಗೆ ವಿವಿಧ ತಳಿಗಳ ಶ್ವಾನಗಳು ಪ್ರದರ್ಶನದಲ್ಲಿ ಪ್ರಮುಖ್ಯ ಆಕರ್ಷಣೆಯಾಗಿದ್ದವು.
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…