ಜಿಲ್ಲೆಗಳು

ಗಜಪಯಣಕ್ಕೆ ಸಿದ್ಧತೆ ; ಬರುವ ಆನೆಗಳು ಯಾವುವು ?

ಮೈಸೂರು : ಈ ಸಾಲಿನ 2022 ರ ದಸರಾ ಮಹೋತ್ಸವದಲ್ಲಿ ಭಾಗವಹಿಸಲು 5 ಶಿಬಿರದಿಂದ ಆನೆಗಳು ಕರೆತರಲಾಗುತ್ತಿದೆ.

ಈ ಬಾರಿ ಅಭೂತಪೂರ್ವ ಸ್ವಾಗತದೊಂದಿಗೆ ಬರಮಾಡಿಕೊಳ್ಳಲು ಅರಣ್ಯ ಇಲಾಖೆ ನಿರ್ಧರಿಸಿದೆ. ಪ್ರವಾಸಿಗರು ಹಾಗೂ ವಿವಿಧ ಜಾನಪದ ಕಲಾ ತಂಡಗಳನ್ನು ಬಳಸಿಕೊಂಡು ಆಗಸ್ಟ್ 7ರಂದು ಆರಂಭವಾಗಲಿರುವ ಗಜ ಪಯಣಕ್ಕೆ ಅರಣ್ಯ ಇಲಾಖೆ ಪೂರ್ವ ತಯಾರಿ ಜೋರಾಗಿಯೇ ನಡೆಯುತ್ತಿದೆ. ಪ್ರತಿ ವರ್ಷದಂತೆ ಗಜಪಯಣ ಕಾರ್ಯಕ್ರಮ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ವೀರನಹೊಸಳ್ಳಿಯ ಮುಖ್ಯ ದ್ವಾರದ ಮುಂಭಾಗ ಆಗಸ್ಟ್ ೭ ರಂದು ಬೆಳಿಗ್ಗೆ ೧೧ ಗಂಟೆಗೆ ಆರಂಭವಾಗಲಿದೆ. ಕಳೆದೆರಡು ವರ್ಷಗಳಿಂದ ಕೊರೊನಾ ಸೋಂಕಿನಿಂದಾಗಿ ಪ್ರಚಾರವಿಲ್ಲದೆ, ಸದ್ದಿಲ್ಲದೆ ಆಗಮಿಸುತ್ತಿದ್ದ ಗಜಪಡೆಗೆ ಈ ಸಲ ಅಭೂತಪೂರ್ವ ಸ್ವಾಗತದೊಂದಿಗೆ ಬರಮಾಡಿಕೊಳ್ಳಲು ಮೖೆಸೂರು ತಾಯಾರಾಗಿದೆ.

ಕೊರೋನ ಸಮಯದಲ್ಲಿ ಗಜ ಪಯಣವನ್ನು ಕೇವಲ ಅಧಿಕಾರಿಗಳೇ ಸೇರಿ ಮಾಡುತ್ತಿದ್ದರು. ಎಲ್ಲಾ ಉಸ್ತುವಾರಿ ಸಚಿವರಿಂದ ಪೂಜೆ ನೆರವೇರಿಸಿ ಮೈಸೂರಿಗೆ ಆನೆಗಳನ್ನು ಕರೆತರಲಾಗುತ್ತಿತ್ತು. ಆದರೆ, ಈ ಸಾಲಿನಿಂದ ಹೊಸ ರೂಪ ನೀಡಲಾಗುತ್ತಿದೆ. ಸುಮಾರು ೫ ಸಾವಿರ ಜನರನ್ನು ಸೇರಿಸಿ ಆನೆಗಳಿಗೆ ಸ್ವಾಗತಮಾಡಿ ಬರಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಪ್ರವಾಸೋದ್ಯಮ ಇಲಾಖೆ, ಶಾಲಾ – ಕಾಲೇಜುಗಳು, ಮಹಿಳಾ ಸಂಘಗಳಿಗೂ ಮಾಹಿತಿ ನೀಡಿ, ಗಜ ಪಯಣ ಕಾರ್ಯಕ್ರಮಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದೆ.

ಮೈಸೂರಿನ ವಿವಿಧೆಡೆ ಹಾಗೂ ಹುಣಸೂರು ಮುಖ್ಯರಸ್ತೆಯಲ್ಲಿ ಸುಮಾರು ೨೦ ಸ್ಥಳಗಳಲ್ಲಿ ದೊಡ್ಡ -ದೊಡ್ಡ ಫಲಕಗಳನ್ನು ಪ್ರದರ್ಶಿಸಿ, ಆಗಸ್ಟ್ ೦೭ರಂದು ನಡೆಯುವ ಗಜಪಯಣಕ್ಕೆ ಸರ್ವರಿಗೂ ಸ್ವಾಗತ ಕೋರಲು ಅರಣ್ಯ ಇಲಾಖೆ ಕಾರ್ಯಕ್ರಮ ರೂಪಿಸಿದೆ.

ಈ ಬಾರಿ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳ ವಿವರ 

ಮತ್ತಿಗೋಡು ಆನೆ ಶಿಬಿರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಿಂದ

 

ಅಭಿಮನ್ಯು 57 ವರ್ಷದ ಗಂಡು ಆನೆ

ಬಳ್ಳೆ ಆನೆ ಶಿಬಿರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಿಂದ

 

ಅರ್ಜುನ 63 ವರ್ಷದ ಗಂಡು ಆನೆ

ಮತ್ತಿಗೋಡು ಆನೆ ಶಿಬಿರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಿಂದ

ಗೋಪಾಲಸ್ವಾಮಿ 39ವರ್ಷದ ಗಂಡು ಆನೆ

ದುಬಾರೆ ಆನೆ ಶಿಬಿರ ಮಡಿಕೇರಿ ವಿಭಾಗದಿಂದ 

ವಿಕ್ರಮ 59 ವರ್ಷದ ಗಂಡು ಆನೆ

ಮತ್ತಿಗೋಡು ಆನೆ ಶಿಬಿರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಿಂದ 

ಭೀಮ 22 ವರ್ಷದ ಗಂಡು ಆನೆ

ಮತ್ತಿಗೋಡು ಆನೆ ಶಿಬಿರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ದಿಂದ ಮಹೇಂದ್ರ(  39 ವರ್ಷ),

ದುಬಾರೆ ಆನೆ ಶಿಬಿರ ಮಡಿಕೇರಿ ವಿಭಾಗದಿಂದ  – ಧನಂಜಯ ಆನೆ (44 ವರ್ಷ ಗಂಡು),

ದುಬಾರೆ ಆನೆ ಶಿಬಿರ ಮಡಿಕೇರಿ ವಿಭಾಗದಿಂತ – ಕಾವೇರಿ (45 ವರ್ಷ ಹೆಣ್ಣು)

ದುಬಾರೆ ಆನೆ ಶಿಬಿರ ಮಡಿಕೇರಿ ವಿಭಾಗದಿಂದ – ಗೋಪಿ ( 40 ವರ್ಷ ಗಂಡು )

ದುಬಾರೆ ಆನೆ ಶಿಬಿರ ಮಡಿಕೇರಿ ವಿಭಾಗದಿಂದ-  ಶ್ರೀರಾಮ (41  ವರ್ಷ ಗಂಡು )

ದುಬಾರೆ ಆನೆ ಶಿಬಿರ ಮಡಿಕೇರಿ ವಿಭಾಗದಿಂದ-  ವಿಜಯ ( 63 ವರ್ಷ ಹೆಣ್ಣು)

ರಾಮಪುರ ಆನೆ ಶಿಬಿರ ಮತ್ತು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಿಂತ

ಚೈತ್ರ 49 ವರ್ಷ (ಹೆಣ್ಣು ಆನೆ )

ಲಕ್ಷ್ಮೀ  21 ವರ್ಷ (ಹೆಣ್ಣು ಆನೆ )

ಪಾರ್ಥ ಸಾರಥಿ( 18 ವರ್ಷ ಗಂಡು ಆನೆ) 

andolanait

Recent Posts

ರೈತರ ನೆರವಿಗೆ ಕ್ರೆಡಲ್‌ನಿಂದ `ಪಿಎಂ ಕುಸುಮ್‌ ಬಿ’ ಸಹಾಯವಾಣಿ ಕೇಂದ್ರ ಸ್ಥಾಪನೆ

ಬೆಂಗಳೂರು : ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ…

9 mins ago

ಮೈಸೂರು | ಮನುಸ್ಮೃತಿ ಸುಟ್ಟು ಸಮಾನತೆ ಜ್ಯೋತಿ ಬೆಳಗಿಸಿದ ದಸಂಸ

ಮೈಸೂರು : ಡಾ.ಬಿ.ಆರ್.ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ದಹಿಸಿದ ದಿನದ ಅಂಗವಾಗಿ ದಲಿತ ಸಂಘರ್ಷ ಸಮಿತಿ ವತಿಯಿಂದ ಮನುಸ್ಮೃತಿಯನ್ನು ಸುಡುವ ಮೂಲಕ…

16 mins ago

ಮರ್ಯಾದೆ ಹತ್ಯೆಗೆ ಮನುಸ್ಮೃತಿ ನಿಯಮಗಳೇ ಕಾರಣ : ಚಿಂತಕ ಶಿವಸುಂದರ್‌ ಪ್ರತಿಪಾದನೆ

ಮೈಸೂರು : ಮೇಲ್ವರ್ಗದ ಯುವತಿಯೊಬ್ಬಳು ದಲಿತ ಯುವಕನನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ಸ್ವಂತ ಮಗಳನ್ನೆ ಹೆತ್ತ ಅಪ್ಪ-ಅಮ್ಮ-ಅಣ್ಣಂದಿರು ಕೊಲೆ ಮಾಡುವ…

35 mins ago

ಚಾ.ನಗರ | ಮನುಸ್ಮೃತಿ ಪ್ರತಿ ಹರಿದು ಪ್ರತಿಭಟನೆ

ಚಾಮರಾಜನಗರ : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟ ಹಾಕಿದ ದಿನದ ಅಂಗವಾಗಿ ವಿವಿಧ ಸಂಘಟನೆಗಳ ಮುಖಂಡರು…

45 mins ago

ಕರ್ನಾಟಕದಲ್ಲಿ ಉದ್ಯೋಗ ಸೃಷ್ಠಿ | ರಾಹುಲ್‌ ಗಾಂಧಿ ಹಾಗೂ ಅಶ್ವಿನ್‌ ವೈಷ್ಣವ್‌ ನಡುವೆ ಟ್ವಿಟ್‌ ವಾರ್…

ಹೊಸದಿಲ್ಲಿ : ಕೇಂದ್ರ ಸಚಿವರಾದ ಅಶ್ವಿನ್ ವೈಷ್ಣವ್ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ನಡುವೆ ಕರ್ನಾಟಕದಲ್ಲಿ ಉದ್ಯೋಗ…

2 hours ago

ಚಿತ್ರದುರ್ಗ ಬಸ್‌ ದುರಂತ | ಶಾಲಾ ಮಕ್ಕಳಿದ್ದ ಮತ್ತೊಂದು ಬಸ್ಸಿಗೂ ಬೆಂಕಿ : ಕೂದಲೆಳೆ ಅಂತರದಲ್ಲಿ ಪವಾಡಸದೃಶ ಪಾರು!

ಬೆಂಗಳೂರು : ಚಿತ್ರದುರ್ಗದ ಹಿರಿಯೂರು ಬಳಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದ ಮಾರ್ಗದಲ್ಲಿ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ…

2 hours ago