ಜಿಲ್ಲೆಗಳು

ಗಜಪಯಣಕ್ಕೆ ಸಿದ್ಧತೆ ; ಬರುವ ಆನೆಗಳು ಯಾವುವು ?

ಮೈಸೂರು : ಈ ಸಾಲಿನ 2022 ರ ದಸರಾ ಮಹೋತ್ಸವದಲ್ಲಿ ಭಾಗವಹಿಸಲು 5 ಶಿಬಿರದಿಂದ ಆನೆಗಳು ಕರೆತರಲಾಗುತ್ತಿದೆ.

ಈ ಬಾರಿ ಅಭೂತಪೂರ್ವ ಸ್ವಾಗತದೊಂದಿಗೆ ಬರಮಾಡಿಕೊಳ್ಳಲು ಅರಣ್ಯ ಇಲಾಖೆ ನಿರ್ಧರಿಸಿದೆ. ಪ್ರವಾಸಿಗರು ಹಾಗೂ ವಿವಿಧ ಜಾನಪದ ಕಲಾ ತಂಡಗಳನ್ನು ಬಳಸಿಕೊಂಡು ಆಗಸ್ಟ್ 7ರಂದು ಆರಂಭವಾಗಲಿರುವ ಗಜ ಪಯಣಕ್ಕೆ ಅರಣ್ಯ ಇಲಾಖೆ ಪೂರ್ವ ತಯಾರಿ ಜೋರಾಗಿಯೇ ನಡೆಯುತ್ತಿದೆ. ಪ್ರತಿ ವರ್ಷದಂತೆ ಗಜಪಯಣ ಕಾರ್ಯಕ್ರಮ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ವೀರನಹೊಸಳ್ಳಿಯ ಮುಖ್ಯ ದ್ವಾರದ ಮುಂಭಾಗ ಆಗಸ್ಟ್ ೭ ರಂದು ಬೆಳಿಗ್ಗೆ ೧೧ ಗಂಟೆಗೆ ಆರಂಭವಾಗಲಿದೆ. ಕಳೆದೆರಡು ವರ್ಷಗಳಿಂದ ಕೊರೊನಾ ಸೋಂಕಿನಿಂದಾಗಿ ಪ್ರಚಾರವಿಲ್ಲದೆ, ಸದ್ದಿಲ್ಲದೆ ಆಗಮಿಸುತ್ತಿದ್ದ ಗಜಪಡೆಗೆ ಈ ಸಲ ಅಭೂತಪೂರ್ವ ಸ್ವಾಗತದೊಂದಿಗೆ ಬರಮಾಡಿಕೊಳ್ಳಲು ಮೖೆಸೂರು ತಾಯಾರಾಗಿದೆ.

ಕೊರೋನ ಸಮಯದಲ್ಲಿ ಗಜ ಪಯಣವನ್ನು ಕೇವಲ ಅಧಿಕಾರಿಗಳೇ ಸೇರಿ ಮಾಡುತ್ತಿದ್ದರು. ಎಲ್ಲಾ ಉಸ್ತುವಾರಿ ಸಚಿವರಿಂದ ಪೂಜೆ ನೆರವೇರಿಸಿ ಮೈಸೂರಿಗೆ ಆನೆಗಳನ್ನು ಕರೆತರಲಾಗುತ್ತಿತ್ತು. ಆದರೆ, ಈ ಸಾಲಿನಿಂದ ಹೊಸ ರೂಪ ನೀಡಲಾಗುತ್ತಿದೆ. ಸುಮಾರು ೫ ಸಾವಿರ ಜನರನ್ನು ಸೇರಿಸಿ ಆನೆಗಳಿಗೆ ಸ್ವಾಗತಮಾಡಿ ಬರಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಪ್ರವಾಸೋದ್ಯಮ ಇಲಾಖೆ, ಶಾಲಾ – ಕಾಲೇಜುಗಳು, ಮಹಿಳಾ ಸಂಘಗಳಿಗೂ ಮಾಹಿತಿ ನೀಡಿ, ಗಜ ಪಯಣ ಕಾರ್ಯಕ್ರಮಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದೆ.

ಮೈಸೂರಿನ ವಿವಿಧೆಡೆ ಹಾಗೂ ಹುಣಸೂರು ಮುಖ್ಯರಸ್ತೆಯಲ್ಲಿ ಸುಮಾರು ೨೦ ಸ್ಥಳಗಳಲ್ಲಿ ದೊಡ್ಡ -ದೊಡ್ಡ ಫಲಕಗಳನ್ನು ಪ್ರದರ್ಶಿಸಿ, ಆಗಸ್ಟ್ ೦೭ರಂದು ನಡೆಯುವ ಗಜಪಯಣಕ್ಕೆ ಸರ್ವರಿಗೂ ಸ್ವಾಗತ ಕೋರಲು ಅರಣ್ಯ ಇಲಾಖೆ ಕಾರ್ಯಕ್ರಮ ರೂಪಿಸಿದೆ.

ಈ ಬಾರಿ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳ ವಿವರ 

ಮತ್ತಿಗೋಡು ಆನೆ ಶಿಬಿರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಿಂದ

 

ಅಭಿಮನ್ಯು 57 ವರ್ಷದ ಗಂಡು ಆನೆ

ಬಳ್ಳೆ ಆನೆ ಶಿಬಿರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಿಂದ

 

ಅರ್ಜುನ 63 ವರ್ಷದ ಗಂಡು ಆನೆ

ಮತ್ತಿಗೋಡು ಆನೆ ಶಿಬಿರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಿಂದ

ಗೋಪಾಲಸ್ವಾಮಿ 39ವರ್ಷದ ಗಂಡು ಆನೆ

ದುಬಾರೆ ಆನೆ ಶಿಬಿರ ಮಡಿಕೇರಿ ವಿಭಾಗದಿಂದ 

ವಿಕ್ರಮ 59 ವರ್ಷದ ಗಂಡು ಆನೆ

ಮತ್ತಿಗೋಡು ಆನೆ ಶಿಬಿರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಿಂದ 

ಭೀಮ 22 ವರ್ಷದ ಗಂಡು ಆನೆ

ಮತ್ತಿಗೋಡು ಆನೆ ಶಿಬಿರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ದಿಂದ ಮಹೇಂದ್ರ(  39 ವರ್ಷ),

ದುಬಾರೆ ಆನೆ ಶಿಬಿರ ಮಡಿಕೇರಿ ವಿಭಾಗದಿಂದ  – ಧನಂಜಯ ಆನೆ (44 ವರ್ಷ ಗಂಡು),

ದುಬಾರೆ ಆನೆ ಶಿಬಿರ ಮಡಿಕೇರಿ ವಿಭಾಗದಿಂತ – ಕಾವೇರಿ (45 ವರ್ಷ ಹೆಣ್ಣು)

ದುಬಾರೆ ಆನೆ ಶಿಬಿರ ಮಡಿಕೇರಿ ವಿಭಾಗದಿಂದ – ಗೋಪಿ ( 40 ವರ್ಷ ಗಂಡು )

ದುಬಾರೆ ಆನೆ ಶಿಬಿರ ಮಡಿಕೇರಿ ವಿಭಾಗದಿಂದ-  ಶ್ರೀರಾಮ (41  ವರ್ಷ ಗಂಡು )

ದುಬಾರೆ ಆನೆ ಶಿಬಿರ ಮಡಿಕೇರಿ ವಿಭಾಗದಿಂದ-  ವಿಜಯ ( 63 ವರ್ಷ ಹೆಣ್ಣು)

ರಾಮಪುರ ಆನೆ ಶಿಬಿರ ಮತ್ತು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಿಂತ

ಚೈತ್ರ 49 ವರ್ಷ (ಹೆಣ್ಣು ಆನೆ )

ಲಕ್ಷ್ಮೀ  21 ವರ್ಷ (ಹೆಣ್ಣು ಆನೆ )

ಪಾರ್ಥ ಸಾರಥಿ( 18 ವರ್ಷ ಗಂಡು ಆನೆ) 

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago