ಜಿಲ್ಲೆಗಳು

ಗಜಪಯಣಕ್ಕೆ ಸಿದ್ಧತೆ ; ಬರುವ ಆನೆಗಳು ಯಾವುವು ?

ಮೈಸೂರು : ಈ ಸಾಲಿನ 2022 ರ ದಸರಾ ಮಹೋತ್ಸವದಲ್ಲಿ ಭಾಗವಹಿಸಲು 5 ಶಿಬಿರದಿಂದ ಆನೆಗಳು ಕರೆತರಲಾಗುತ್ತಿದೆ.

ಈ ಬಾರಿ ಅಭೂತಪೂರ್ವ ಸ್ವಾಗತದೊಂದಿಗೆ ಬರಮಾಡಿಕೊಳ್ಳಲು ಅರಣ್ಯ ಇಲಾಖೆ ನಿರ್ಧರಿಸಿದೆ. ಪ್ರವಾಸಿಗರು ಹಾಗೂ ವಿವಿಧ ಜಾನಪದ ಕಲಾ ತಂಡಗಳನ್ನು ಬಳಸಿಕೊಂಡು ಆಗಸ್ಟ್ 7ರಂದು ಆರಂಭವಾಗಲಿರುವ ಗಜ ಪಯಣಕ್ಕೆ ಅರಣ್ಯ ಇಲಾಖೆ ಪೂರ್ವ ತಯಾರಿ ಜೋರಾಗಿಯೇ ನಡೆಯುತ್ತಿದೆ. ಪ್ರತಿ ವರ್ಷದಂತೆ ಗಜಪಯಣ ಕಾರ್ಯಕ್ರಮ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ವೀರನಹೊಸಳ್ಳಿಯ ಮುಖ್ಯ ದ್ವಾರದ ಮುಂಭಾಗ ಆಗಸ್ಟ್ ೭ ರಂದು ಬೆಳಿಗ್ಗೆ ೧೧ ಗಂಟೆಗೆ ಆರಂಭವಾಗಲಿದೆ. ಕಳೆದೆರಡು ವರ್ಷಗಳಿಂದ ಕೊರೊನಾ ಸೋಂಕಿನಿಂದಾಗಿ ಪ್ರಚಾರವಿಲ್ಲದೆ, ಸದ್ದಿಲ್ಲದೆ ಆಗಮಿಸುತ್ತಿದ್ದ ಗಜಪಡೆಗೆ ಈ ಸಲ ಅಭೂತಪೂರ್ವ ಸ್ವಾಗತದೊಂದಿಗೆ ಬರಮಾಡಿಕೊಳ್ಳಲು ಮೖೆಸೂರು ತಾಯಾರಾಗಿದೆ.

ಕೊರೋನ ಸಮಯದಲ್ಲಿ ಗಜ ಪಯಣವನ್ನು ಕೇವಲ ಅಧಿಕಾರಿಗಳೇ ಸೇರಿ ಮಾಡುತ್ತಿದ್ದರು. ಎಲ್ಲಾ ಉಸ್ತುವಾರಿ ಸಚಿವರಿಂದ ಪೂಜೆ ನೆರವೇರಿಸಿ ಮೈಸೂರಿಗೆ ಆನೆಗಳನ್ನು ಕರೆತರಲಾಗುತ್ತಿತ್ತು. ಆದರೆ, ಈ ಸಾಲಿನಿಂದ ಹೊಸ ರೂಪ ನೀಡಲಾಗುತ್ತಿದೆ. ಸುಮಾರು ೫ ಸಾವಿರ ಜನರನ್ನು ಸೇರಿಸಿ ಆನೆಗಳಿಗೆ ಸ್ವಾಗತಮಾಡಿ ಬರಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಪ್ರವಾಸೋದ್ಯಮ ಇಲಾಖೆ, ಶಾಲಾ – ಕಾಲೇಜುಗಳು, ಮಹಿಳಾ ಸಂಘಗಳಿಗೂ ಮಾಹಿತಿ ನೀಡಿ, ಗಜ ಪಯಣ ಕಾರ್ಯಕ್ರಮಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದೆ.

ಮೈಸೂರಿನ ವಿವಿಧೆಡೆ ಹಾಗೂ ಹುಣಸೂರು ಮುಖ್ಯರಸ್ತೆಯಲ್ಲಿ ಸುಮಾರು ೨೦ ಸ್ಥಳಗಳಲ್ಲಿ ದೊಡ್ಡ -ದೊಡ್ಡ ಫಲಕಗಳನ್ನು ಪ್ರದರ್ಶಿಸಿ, ಆಗಸ್ಟ್ ೦೭ರಂದು ನಡೆಯುವ ಗಜಪಯಣಕ್ಕೆ ಸರ್ವರಿಗೂ ಸ್ವಾಗತ ಕೋರಲು ಅರಣ್ಯ ಇಲಾಖೆ ಕಾರ್ಯಕ್ರಮ ರೂಪಿಸಿದೆ.

ಈ ಬಾರಿ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳ ವಿವರ 

ಮತ್ತಿಗೋಡು ಆನೆ ಶಿಬಿರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಿಂದ

 

ಅಭಿಮನ್ಯು 57 ವರ್ಷದ ಗಂಡು ಆನೆ

ಬಳ್ಳೆ ಆನೆ ಶಿಬಿರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಿಂದ

 

ಅರ್ಜುನ 63 ವರ್ಷದ ಗಂಡು ಆನೆ

ಮತ್ತಿಗೋಡು ಆನೆ ಶಿಬಿರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಿಂದ

ಗೋಪಾಲಸ್ವಾಮಿ 39ವರ್ಷದ ಗಂಡು ಆನೆ

ದುಬಾರೆ ಆನೆ ಶಿಬಿರ ಮಡಿಕೇರಿ ವಿಭಾಗದಿಂದ 

ವಿಕ್ರಮ 59 ವರ್ಷದ ಗಂಡು ಆನೆ

ಮತ್ತಿಗೋಡು ಆನೆ ಶಿಬಿರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಿಂದ 

ಭೀಮ 22 ವರ್ಷದ ಗಂಡು ಆನೆ

ಮತ್ತಿಗೋಡು ಆನೆ ಶಿಬಿರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ದಿಂದ ಮಹೇಂದ್ರ(  39 ವರ್ಷ),

ದುಬಾರೆ ಆನೆ ಶಿಬಿರ ಮಡಿಕೇರಿ ವಿಭಾಗದಿಂದ  – ಧನಂಜಯ ಆನೆ (44 ವರ್ಷ ಗಂಡು),

ದುಬಾರೆ ಆನೆ ಶಿಬಿರ ಮಡಿಕೇರಿ ವಿಭಾಗದಿಂತ – ಕಾವೇರಿ (45 ವರ್ಷ ಹೆಣ್ಣು)

ದುಬಾರೆ ಆನೆ ಶಿಬಿರ ಮಡಿಕೇರಿ ವಿಭಾಗದಿಂದ – ಗೋಪಿ ( 40 ವರ್ಷ ಗಂಡು )

ದುಬಾರೆ ಆನೆ ಶಿಬಿರ ಮಡಿಕೇರಿ ವಿಭಾಗದಿಂದ-  ಶ್ರೀರಾಮ (41  ವರ್ಷ ಗಂಡು )

ದುಬಾರೆ ಆನೆ ಶಿಬಿರ ಮಡಿಕೇರಿ ವಿಭಾಗದಿಂದ-  ವಿಜಯ ( 63 ವರ್ಷ ಹೆಣ್ಣು)

ರಾಮಪುರ ಆನೆ ಶಿಬಿರ ಮತ್ತು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಿಂತ

ಚೈತ್ರ 49 ವರ್ಷ (ಹೆಣ್ಣು ಆನೆ )

ಲಕ್ಷ್ಮೀ  21 ವರ್ಷ (ಹೆಣ್ಣು ಆನೆ )

ಪಾರ್ಥ ಸಾರಥಿ( 18 ವರ್ಷ ಗಂಡು ಆನೆ) 

andolanait

Recent Posts

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…

11 hours ago

ಪಹಲ್ಗಾಮ್‌ ದಾಳಿಯಾಗಿ ನಾಳೆಗೆ 1 ವರ್ಷ: ಸೇನೆಯಿಂದ ಪೋಸ್ಟ್‌

ನವದೆಹಲಿ: ಬೈಸರನ್‌ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…

11 hours ago

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…

11 hours ago

ಪಾಲಹಳ್ಳಿ ಬೇಸಿಗೆ ಶಿಬಿರದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವ ಚಲುವರಾಯಸ್ವಾಮಿ

​ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…

11 hours ago

ಕೇರಳ| ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಸ್ಫೋಟ: 13 ಮಂದಿ ಸಾವು

ತಿರುವನಂತಪುರಂ: ಕೇರಳದ ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…

12 hours ago

ಹನೂರು| ಆದಿಶಕ್ತಿ ಮಾರಮ್ಮ ಜಾತ್ರೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡುವಂತೆ ಗ್ರಾಮಸ್ಥರ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…

12 hours ago