ಜಿಲ್ಲೆಗಳು

ದಸರೆ ಜಂಬೂ ಸವಾರಿಗೆ ಕ್ಷಣಗಣನೆ ಮಧ್ಯಾಹ್ನ 2.36ಕ್ಕೆ ನಂದಿಧ್ವಜಕ್ಕೆ ಸಿಎಂ ಪೂಜೆ, ಮೆರವಣಿಗೆಗೆ ಚಾಲನೆ

ಮೈಸೂರು: ಹಲವು ವರ್ಷಗಳ ಇತಿಹಾಸ ಹೊಂದಿರುವ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಆಕರ್ಷಣೆಯಾಗಿರುವ ಜಂಬೂ ಸವಾರಿಯು ವಿಜಯದಶಮಿಯ ದಿನವಾದ ಇಂದು ನಡೆಯಲಿದ್ದು, ಸಿದ್ಧತೆಗಳು ಭರದಿಂದ ಸಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಸರಾ ಮೆರವಣಿಗೆಗೆ ಚಾಲನೆ ನೀಡಲಿದ್ದು, ದಸರಾ ಜಂಬೂಸವಾರಿ ವೈಭವವನ್ನು ಕಣ್ತುಂಬಿಕೊಳ್ಳಲು ಜನರು ಕಾತದಿಂದ ಕಾಯುತ್ತಿದ್ದಾರೆ.
ಇಂದು ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಪೂಜೆ ಸಲ್ಲಿಸಿ ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ. 750ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವರು. ಮೈಸೂರು ಅರಮನೆಯಿಂದ ಆರಂಭಗೊಳ್ಳುವಂತ ದಸರಾ ಜಂಬೂಸವಾರಿಯ ಮೆರವಣಿಗೆ 5.07ರಿಂದ 5.18ರವರೆಗೆ ಸಾಗಲಿದೆ. ಮೈಸೂರು ಅರಮನೆಯಿಂದ ಆರಂಭಗೊಂಡು, ಕೆ ಆರ್ ಸರ್ಕಲ್, ಸಯ್ಯಾಜಿ ರಾವ್ ರಸ್ತೆ, ಆಯುರ್ವೇದಿಕ್ ವೃತ್ತ, ಆರ್ ಎಂ ಸಿ, ತಿಲಕ್ ನಗರ ಮಾರ್ಗವಾಗಿ ಸಾಗಿ, ಬನ್ನಿ ಮಂಟಪ ತಲುಪಿ, ಅಲ್ಲಿಂದ ಮೈಸೂರು ಅರಮನೆಗೆ ಮರಳಲಿದೆ.
ನಂದಿಧ್ವಜ, ವೀರಗಾಸೆ, ನಾದಸ್ವರ, ನೌಪತ್, ನಿಸಾನೆ ಆನೆಗಳು, ಎನ್’ಸಿಸಿ, ಸ್ಕೌಟ್ಸ್, ಗೈಡ್ಸ್, ವಿವಿಧ ಪೊಲೀಸ್ ತುಕಡಿಗಳು, ನಾಡಿನ ಕಲೆ, ಸಂಸ್ಕೃತಿಯನ್ನು ಪ್ರತಿಂಬಿಸುವ 47 ಸ್ತಬ್ಧ ಚಿತ್ರಗಳು, 50 ಜನಪದ ಕಲಾತಂಡಗಳು ಸೇರಿದಂತೆ 100 ಕ್ಕೂ ಹೆಚ್ಚು ಕಲಾ ತಂಡಗಳು ಮೆರವಣಿಗೆಯಲ್ಲಿ ಸಾಗಲಿವೆ.

andolanait

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

2 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

2 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

2 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

2 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

3 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago