ಜಿಲ್ಲೆಗಳು

ದಸರೆ ಜಂಬೂ ಸವಾರಿಗೆ ಕ್ಷಣಗಣನೆ ಮಧ್ಯಾಹ್ನ 2.36ಕ್ಕೆ ನಂದಿಧ್ವಜಕ್ಕೆ ಸಿಎಂ ಪೂಜೆ, ಮೆರವಣಿಗೆಗೆ ಚಾಲನೆ

ಮೈಸೂರು: ಹಲವು ವರ್ಷಗಳ ಇತಿಹಾಸ ಹೊಂದಿರುವ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಆಕರ್ಷಣೆಯಾಗಿರುವ ಜಂಬೂ ಸವಾರಿಯು ವಿಜಯದಶಮಿಯ ದಿನವಾದ ಇಂದು ನಡೆಯಲಿದ್ದು, ಸಿದ್ಧತೆಗಳು ಭರದಿಂದ ಸಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಸರಾ ಮೆರವಣಿಗೆಗೆ ಚಾಲನೆ ನೀಡಲಿದ್ದು, ದಸರಾ ಜಂಬೂಸವಾರಿ ವೈಭವವನ್ನು ಕಣ್ತುಂಬಿಕೊಳ್ಳಲು ಜನರು ಕಾತದಿಂದ ಕಾಯುತ್ತಿದ್ದಾರೆ.
ಇಂದು ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಪೂಜೆ ಸಲ್ಲಿಸಿ ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ. 750ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವರು. ಮೈಸೂರು ಅರಮನೆಯಿಂದ ಆರಂಭಗೊಳ್ಳುವಂತ ದಸರಾ ಜಂಬೂಸವಾರಿಯ ಮೆರವಣಿಗೆ 5.07ರಿಂದ 5.18ರವರೆಗೆ ಸಾಗಲಿದೆ. ಮೈಸೂರು ಅರಮನೆಯಿಂದ ಆರಂಭಗೊಂಡು, ಕೆ ಆರ್ ಸರ್ಕಲ್, ಸಯ್ಯಾಜಿ ರಾವ್ ರಸ್ತೆ, ಆಯುರ್ವೇದಿಕ್ ವೃತ್ತ, ಆರ್ ಎಂ ಸಿ, ತಿಲಕ್ ನಗರ ಮಾರ್ಗವಾಗಿ ಸಾಗಿ, ಬನ್ನಿ ಮಂಟಪ ತಲುಪಿ, ಅಲ್ಲಿಂದ ಮೈಸೂರು ಅರಮನೆಗೆ ಮರಳಲಿದೆ.
ನಂದಿಧ್ವಜ, ವೀರಗಾಸೆ, ನಾದಸ್ವರ, ನೌಪತ್, ನಿಸಾನೆ ಆನೆಗಳು, ಎನ್’ಸಿಸಿ, ಸ್ಕೌಟ್ಸ್, ಗೈಡ್ಸ್, ವಿವಿಧ ಪೊಲೀಸ್ ತುಕಡಿಗಳು, ನಾಡಿನ ಕಲೆ, ಸಂಸ್ಕೃತಿಯನ್ನು ಪ್ರತಿಂಬಿಸುವ 47 ಸ್ತಬ್ಧ ಚಿತ್ರಗಳು, 50 ಜನಪದ ಕಲಾತಂಡಗಳು ಸೇರಿದಂತೆ 100 ಕ್ಕೂ ಹೆಚ್ಚು ಕಲಾ ತಂಡಗಳು ಮೆರವಣಿಗೆಯಲ್ಲಿ ಸಾಗಲಿವೆ.

andolanait

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

9 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

10 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

10 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

10 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

12 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

12 hours ago