ಮೈಸೂರು: ಬ್ಯಾರಿ ಸಮುದಾಯದ ಪ್ರಮುಖರ ಆಗ್ರಹದ ಹಿನ್ನೆಲೆಯಲ್ಲಿ ಮೈಸೂರು ದಸರಾ ಉತ್ಸವದ ಪ್ರಧಾನ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಯ ಕವಿತೆಯ ವಾಚನಕ್ಕೆ ಅವಕಾಶ ಒದಗಿಸಲಾಗಿದೆ.
ಮಂಗಳೂರಿನ ಬ್ಯಾರಿ ಕವಿ ಬಿ.ಎ.ಮೊಹಮ್ಮದಾಲಿ ಕಮ್ಮರಡಿ ಅವರು ಅಕ್ಟೋಬರ್ 3 ರಂದು ಮೈಸೂರು ವಿಶ್ವವಿದ್ಯಾಲಯದ ಸೆನೆಟ್ ಹಾಲ್ ನಲ್ಲಿ ನಡೆಯಲಿರುವ ಪ್ರಧಾನ ಕವಿಗೋಷ್ಠಿಯಲ್ಲಿ ಬ್ಯಾರಿ ಕವಿತೆಯನ್ನು ವಾಚಿಸಲಿದ್ದಾರೆ. ದಸರಾ ಕವಿಗೋಷ್ಠಿ ಉಪಸಮಿತಿಯಿಂದ ಅವರಿಗೆ ಗುರುವಾರ ಅಧಿಕೃತ ಆಹ್ವಾನವನ್ನು ನೀಡಲಾಗಿದೆ.
ದಸರಾ ಪ್ರಧಾನ ಕವಿಗೋಷ್ಠಿಯಲ್ಲಿ ರಾಜ್ಯದ ಇತರೆಲ್ಲ ಭಾಷೆಗಳಿಗೆ ಅವಕಾಶ ನೀಡಿದ್ದರೂ ಬ್ಯಾರಿ ಭಾಷೆಗೆ ಅವಕಾಶ ನೀಡಿರಲಿಲ್ಲ. ಹಿರಿಯ ಪತ್ರಕರ್ತ ಬಿ.ಎಂ.ಹನೀಫ್, ಬೆಂಗಳೂರು ಬ್ಯಾರೀಸ್ ವೆಲ್ ಫೇರ್ ಅಸೋಸಿಯೇಷನ್ ನ ಪ್ರಧಾನ ಕಾರ್ಯದರ್ಶಿ ಟಿ.ಕೆ.ಷರೀಫ್ ಸಹಿತ ಹಲವು ಗಣ್ಯರು ಸರಕಾರದ ತಾರತಮ್ಯ ನೀತಿಯನ್ನು ಕಟುವಾಗಿ ಟೀಕಿಸಿ ಹೇಳಿಕೆ ನೀಡಿದ್ದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೂ ಬ್ಯಾರಿ ಭಾಷೆಗೆ ಕವಿಗೋಷ್ಠಿಯಲ್ಲಿ ಪ್ರಾತಿನಿಧ್ಯ ಒದಗಿಸದೇ ಇರುವುದಕ್ಕೇ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಮೈಸೂರಿನ ಬ್ಯಾರೀಸ್ ವೆಲ್ ಫೇರ್ ಅಸೋಸಿಯೇಶನ್ ನ ಅಧ್ಯಕ್ಷ ಹಮೀದ್ ಹಾಜಿಯವರ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಬುಧವಾರ ದಸರಾ ಉಪ ಸಮಿತಿಯ ಅಧ್ಯಕ್ಷರನ್ನು ಭೇಟಿಯಾಗಿ ಬ್ಯಾರಿ ಕವಿತೆಗೆ ಪ್ರಾತಿನಿಧ್ಯ ನೀಡಬೇಕೆಂದು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ದಸರಾ ಪರಧಾನ ಕವಿಗೋಷ್ಠಿಯಲ್ಲಿ ಬ್ಯಾರಿ ಕವಿಯೊಬ್ಬರಿಗೆ ಪ್ರಾತಿನಿಧ್ಯ ನೀಡಲು ಉಪಸಮಿತಿ ನಿರ್ಧರಿಸಿದೆ.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…