ಜಿಲ್ಲೆಗಳು

ಮೈಸೂರು : ದಸರಾ ಕವಿಗೋಷ್ಠಿಯಲ್ಲಿ ʼಬ್ಯಾರಿʼ ಕವಿತೆಗೆ ಅವಕಾಶ

ಮೈಸೂರು: ಬ್ಯಾರಿ ಸಮುದಾಯದ ಪ್ರಮುಖರ ಆಗ್ರಹದ ಹಿನ್ನೆಲೆಯಲ್ಲಿ ಮೈಸೂರು ದಸರಾ ಉತ್ಸವದ ಪ್ರಧಾನ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಯ ಕವಿತೆಯ ವಾಚನಕ್ಕೆ ಅವಕಾಶ ಒದಗಿಸಲಾಗಿದೆ.

ಮಂಗಳೂರಿನ ಬ್ಯಾರಿ ಕವಿ ಬಿ.ಎ.ಮೊಹಮ್ಮದಾಲಿ ಕಮ್ಮರಡಿ ಅವರು ಅಕ್ಟೋಬರ್ 3 ರಂದು ಮೈಸೂರು ವಿಶ್ವವಿದ್ಯಾಲಯದ ಸೆನೆಟ್ ಹಾಲ್ ನಲ್ಲಿ ನಡೆಯಲಿರುವ ಪ್ರಧಾನ ಕವಿಗೋಷ್ಠಿಯಲ್ಲಿ ಬ್ಯಾರಿ ಕವಿತೆಯನ್ನು ವಾಚಿಸಲಿದ್ದಾರೆ. ದಸರಾ ಕವಿಗೋಷ್ಠಿ ಉಪಸಮಿತಿಯಿಂದ ಅವರಿಗೆ ಗುರುವಾರ ಅಧಿಕೃತ ಆಹ್ವಾನವನ್ನು ನೀಡಲಾಗಿದೆ.

ದಸರಾ ಪ್ರಧಾನ ಕವಿಗೋಷ್ಠಿಯಲ್ಲಿ ರಾಜ್ಯದ ಇತರೆಲ್ಲ ಭಾಷೆಗಳಿಗೆ ಅವಕಾಶ ನೀಡಿದ್ದರೂ ಬ್ಯಾರಿ ಭಾಷೆಗೆ ಅವಕಾಶ ನೀಡಿರಲಿಲ್ಲ. ಹಿರಿಯ ಪತ್ರಕರ್ತ ಬಿ.ಎಂ.ಹನೀಫ್, ಬೆಂಗಳೂರು ಬ್ಯಾರೀಸ್ ವೆಲ್ ಫೇರ್ ಅಸೋಸಿಯೇಷನ್ ನ ಪ್ರಧಾನ ಕಾರ್ಯದರ್ಶಿ ಟಿ.ಕೆ‌.ಷರೀಫ್ ಸಹಿತ ಹಲವು ಗಣ್ಯರು ಸರಕಾರದ ತಾರತಮ್ಯ ನೀತಿಯನ್ನು ಕಟುವಾಗಿ ಟೀಕಿಸಿ ಹೇಳಿಕೆ ನೀಡಿದ್ದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೂ ಬ್ಯಾರಿ ಭಾಷೆಗೆ ಕವಿಗೋಷ್ಠಿಯಲ್ಲಿ ಪ್ರಾತಿನಿಧ್ಯ ಒದಗಿಸದೇ ಇರುವುದಕ್ಕೇ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಮೈಸೂರಿನ ಬ್ಯಾರೀಸ್ ವೆಲ್ ಫೇರ್ ಅಸೋಸಿಯೇಶನ್ ನ ಅಧ್ಯಕ್ಷ ಹಮೀದ್ ಹಾಜಿಯವರ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಬುಧವಾರ ದಸರಾ ಉಪ ಸಮಿತಿಯ ಅಧ್ಯಕ್ಷರನ್ನು ಭೇಟಿಯಾಗಿ ಬ್ಯಾರಿ ಕವಿತೆಗೆ ಪ್ರಾತಿನಿಧ್ಯ ನೀಡಬೇಕೆಂದು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ದಸರಾ ಪರಧಾನ ಕವಿಗೋಷ್ಠಿಯಲ್ಲಿ ಬ್ಯಾರಿ ಕವಿಯೊಬ್ಬರಿಗೆ ಪ್ರಾತಿನಿಧ್ಯ ನೀಡಲು ಉಪಸಮಿತಿ ನಿರ್ಧರಿಸಿದೆ.

andolanait

Recent Posts

ಶಿವಮೊಗ್ಗ| ಮಂಗನ ಕಾಯಿಲೆಗೆ ಯುವಕ ಬಲಿ

ಶಿವಮೊಗ್ಗ: ಮಂಗನ ಕಾಯಿಲೆ ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲ್ಲೂಕಿನ 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಸಸಿ ತೋಟದ…

20 mins ago

ಪಂಚಭೂತಗಳಲ್ಲಿ ಲೀನರಾದ ಅಜಿತ್‌ ಪವಾರ್‌

ಬಾರಾಮತಿ: ನಿನ್ನೆ ವಿಮಾನ ದುರಂತದಲ್ಲಿ ಸಾವಿಗೀಡಾದ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ…

1 hour ago

ನಾನು ರಾಜೀನಾಮೆ ನೀಡಲು ಮುಂದಾಗಿಲ್ಲ: ಸಚಿವ ಕೆ.ಜೆ.ಜಾರ್ಜ್‌ ಸ್ಪಷ್ಟನೆ

ಬೆಂಗಳೂರು: ಇಂದಿನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬೇಸರಗೊಂಡು ಸಚಿವ ಕೆ.ಜೆ.ಜಾರ್ಜ್‌ ಸಿಎಂ ಸಿದ್ದರಾಮಯ್ಯ…

1 hour ago

ನಟ ಮಯೂರ್‌ ಪಟೇಲ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಕುಡಿದು ವಾಹನ ಚಾಲನೆ ಮಾಡಿ ಕಾರ್‌ಗಳಿಗೆ ಸರಣಿ ಅಪಘಾತ ಉಂಟು ಮಾಡಿದ ನಟ ಮಯೂರ್‌ ಪಟೇಲ್‌ ವಿರುದ್ಧ ಎಫ್‌ಐಆರ್‌…

2 hours ago

ಮೈಸೂರಿನಲ್ಲಿ ಮುಂದುವರೆದ ಕಾಡು ಪ್ರಾಣಿಗಳ ಹಾವಳಿ

ಮೈಸೂರು: ಜಿಲ್ಲೆಯಲ್ಲಿ ಕಾದು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಕಣಿಯನಹುಂಡಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಗ್ರಾಮದ ಕೃಷ್ಣ ಎಂಬುವವರ ಜಮೀನಿನಲ್ಲಿ ಚಿರತೆ…

2 hours ago

ನಂಜನಗೂಡು: ಗುಜರಿಗೆ ಆಕಸ್ಮಿಕ ಬೆಂಕಿ: ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ಕರಕಲು

ನಂಜನಗೂಡು: ಗುಜರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ಕರಕಲಾಗಿರುವ ಘಟನೆ ನಂಜನಗೂಡಿನ ಶಂಕರಪುರ ಬಡಾವಣೆಯಲ್ಲಿ…

2 hours ago