ಜಿಲ್ಲೆಗಳು

ಮೈಸೂರು : ದಸರಾ ಕವಿಗೋಷ್ಠಿಯಲ್ಲಿ ʼಬ್ಯಾರಿʼ ಕವಿತೆಗೆ ಅವಕಾಶ

ಮೈಸೂರು: ಬ್ಯಾರಿ ಸಮುದಾಯದ ಪ್ರಮುಖರ ಆಗ್ರಹದ ಹಿನ್ನೆಲೆಯಲ್ಲಿ ಮೈಸೂರು ದಸರಾ ಉತ್ಸವದ ಪ್ರಧಾನ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಯ ಕವಿತೆಯ ವಾಚನಕ್ಕೆ ಅವಕಾಶ ಒದಗಿಸಲಾಗಿದೆ.

ಮಂಗಳೂರಿನ ಬ್ಯಾರಿ ಕವಿ ಬಿ.ಎ.ಮೊಹಮ್ಮದಾಲಿ ಕಮ್ಮರಡಿ ಅವರು ಅಕ್ಟೋಬರ್ 3 ರಂದು ಮೈಸೂರು ವಿಶ್ವವಿದ್ಯಾಲಯದ ಸೆನೆಟ್ ಹಾಲ್ ನಲ್ಲಿ ನಡೆಯಲಿರುವ ಪ್ರಧಾನ ಕವಿಗೋಷ್ಠಿಯಲ್ಲಿ ಬ್ಯಾರಿ ಕವಿತೆಯನ್ನು ವಾಚಿಸಲಿದ್ದಾರೆ. ದಸರಾ ಕವಿಗೋಷ್ಠಿ ಉಪಸಮಿತಿಯಿಂದ ಅವರಿಗೆ ಗುರುವಾರ ಅಧಿಕೃತ ಆಹ್ವಾನವನ್ನು ನೀಡಲಾಗಿದೆ.

ದಸರಾ ಪ್ರಧಾನ ಕವಿಗೋಷ್ಠಿಯಲ್ಲಿ ರಾಜ್ಯದ ಇತರೆಲ್ಲ ಭಾಷೆಗಳಿಗೆ ಅವಕಾಶ ನೀಡಿದ್ದರೂ ಬ್ಯಾರಿ ಭಾಷೆಗೆ ಅವಕಾಶ ನೀಡಿರಲಿಲ್ಲ. ಹಿರಿಯ ಪತ್ರಕರ್ತ ಬಿ.ಎಂ.ಹನೀಫ್, ಬೆಂಗಳೂರು ಬ್ಯಾರೀಸ್ ವೆಲ್ ಫೇರ್ ಅಸೋಸಿಯೇಷನ್ ನ ಪ್ರಧಾನ ಕಾರ್ಯದರ್ಶಿ ಟಿ.ಕೆ‌.ಷರೀಫ್ ಸಹಿತ ಹಲವು ಗಣ್ಯರು ಸರಕಾರದ ತಾರತಮ್ಯ ನೀತಿಯನ್ನು ಕಟುವಾಗಿ ಟೀಕಿಸಿ ಹೇಳಿಕೆ ನೀಡಿದ್ದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೂ ಬ್ಯಾರಿ ಭಾಷೆಗೆ ಕವಿಗೋಷ್ಠಿಯಲ್ಲಿ ಪ್ರಾತಿನಿಧ್ಯ ಒದಗಿಸದೇ ಇರುವುದಕ್ಕೇ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಮೈಸೂರಿನ ಬ್ಯಾರೀಸ್ ವೆಲ್ ಫೇರ್ ಅಸೋಸಿಯೇಶನ್ ನ ಅಧ್ಯಕ್ಷ ಹಮೀದ್ ಹಾಜಿಯವರ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಬುಧವಾರ ದಸರಾ ಉಪ ಸಮಿತಿಯ ಅಧ್ಯಕ್ಷರನ್ನು ಭೇಟಿಯಾಗಿ ಬ್ಯಾರಿ ಕವಿತೆಗೆ ಪ್ರಾತಿನಿಧ್ಯ ನೀಡಬೇಕೆಂದು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ದಸರಾ ಪರಧಾನ ಕವಿಗೋಷ್ಠಿಯಲ್ಲಿ ಬ್ಯಾರಿ ಕವಿಯೊಬ್ಬರಿಗೆ ಪ್ರಾತಿನಿಧ್ಯ ನೀಡಲು ಉಪಸಮಿತಿ ನಿರ್ಧರಿಸಿದೆ.

andolanait

Recent Posts

ಹೋಂ ಸ್ಟೇಗಳ ದಾಖಲೆ ಪರಿಶೀಲನೆ ಚುರುಕು

ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…

1 hour ago

ಅವಳಿ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ

ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…

1 hour ago

ಮೈಸೂರು ‘ಯೋಗ ಜಿಲ್ಲೆ’ ಘೋಷಣೆಗೆ ತಯಾರಿ

ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ  ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…

1 hour ago

ಮಳೆ ಅನಾಹುತ ಎದುರಿಸಲು ಮೈಸೂರು ನಗರಪಾಲಿಕೆ ಸಿದ್ಧತೆ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಎರಡು ದಿನಗಳ ಹಿಂದೆ ಸುರಿದ ಮಳೆಗೆ ಮೈಸೂರು ನಗರದ ಹಲವೆಡೆ ಮರಉರುಳಿರುವುದೂ ಸೇರಿದಂತೆ ಅನೇಕ ಅನಾಹುತಗಳು ನಡೆದಿದೆ.…

1 hour ago

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

10 hours ago