ಜಿಲ್ಲೆಗಳು

ಮೈಸೂರು : ದಸರಾ ಕವಿಗೋಷ್ಠಿಯಲ್ಲಿ ʼಬ್ಯಾರಿʼ ಕವಿತೆಗೆ ಅವಕಾಶ

ಮೈಸೂರು: ಬ್ಯಾರಿ ಸಮುದಾಯದ ಪ್ರಮುಖರ ಆಗ್ರಹದ ಹಿನ್ನೆಲೆಯಲ್ಲಿ ಮೈಸೂರು ದಸರಾ ಉತ್ಸವದ ಪ್ರಧಾನ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಯ ಕವಿತೆಯ ವಾಚನಕ್ಕೆ ಅವಕಾಶ ಒದಗಿಸಲಾಗಿದೆ.

ಮಂಗಳೂರಿನ ಬ್ಯಾರಿ ಕವಿ ಬಿ.ಎ.ಮೊಹಮ್ಮದಾಲಿ ಕಮ್ಮರಡಿ ಅವರು ಅಕ್ಟೋಬರ್ 3 ರಂದು ಮೈಸೂರು ವಿಶ್ವವಿದ್ಯಾಲಯದ ಸೆನೆಟ್ ಹಾಲ್ ನಲ್ಲಿ ನಡೆಯಲಿರುವ ಪ್ರಧಾನ ಕವಿಗೋಷ್ಠಿಯಲ್ಲಿ ಬ್ಯಾರಿ ಕವಿತೆಯನ್ನು ವಾಚಿಸಲಿದ್ದಾರೆ. ದಸರಾ ಕವಿಗೋಷ್ಠಿ ಉಪಸಮಿತಿಯಿಂದ ಅವರಿಗೆ ಗುರುವಾರ ಅಧಿಕೃತ ಆಹ್ವಾನವನ್ನು ನೀಡಲಾಗಿದೆ.

ದಸರಾ ಪ್ರಧಾನ ಕವಿಗೋಷ್ಠಿಯಲ್ಲಿ ರಾಜ್ಯದ ಇತರೆಲ್ಲ ಭಾಷೆಗಳಿಗೆ ಅವಕಾಶ ನೀಡಿದ್ದರೂ ಬ್ಯಾರಿ ಭಾಷೆಗೆ ಅವಕಾಶ ನೀಡಿರಲಿಲ್ಲ. ಹಿರಿಯ ಪತ್ರಕರ್ತ ಬಿ.ಎಂ.ಹನೀಫ್, ಬೆಂಗಳೂರು ಬ್ಯಾರೀಸ್ ವೆಲ್ ಫೇರ್ ಅಸೋಸಿಯೇಷನ್ ನ ಪ್ರಧಾನ ಕಾರ್ಯದರ್ಶಿ ಟಿ.ಕೆ‌.ಷರೀಫ್ ಸಹಿತ ಹಲವು ಗಣ್ಯರು ಸರಕಾರದ ತಾರತಮ್ಯ ನೀತಿಯನ್ನು ಕಟುವಾಗಿ ಟೀಕಿಸಿ ಹೇಳಿಕೆ ನೀಡಿದ್ದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೂ ಬ್ಯಾರಿ ಭಾಷೆಗೆ ಕವಿಗೋಷ್ಠಿಯಲ್ಲಿ ಪ್ರಾತಿನಿಧ್ಯ ಒದಗಿಸದೇ ಇರುವುದಕ್ಕೇ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಮೈಸೂರಿನ ಬ್ಯಾರೀಸ್ ವೆಲ್ ಫೇರ್ ಅಸೋಸಿಯೇಶನ್ ನ ಅಧ್ಯಕ್ಷ ಹಮೀದ್ ಹಾಜಿಯವರ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಬುಧವಾರ ದಸರಾ ಉಪ ಸಮಿತಿಯ ಅಧ್ಯಕ್ಷರನ್ನು ಭೇಟಿಯಾಗಿ ಬ್ಯಾರಿ ಕವಿತೆಗೆ ಪ್ರಾತಿನಿಧ್ಯ ನೀಡಬೇಕೆಂದು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ದಸರಾ ಪರಧಾನ ಕವಿಗೋಷ್ಠಿಯಲ್ಲಿ ಬ್ಯಾರಿ ಕವಿಯೊಬ್ಬರಿಗೆ ಪ್ರಾತಿನಿಧ್ಯ ನೀಡಲು ಉಪಸಮಿತಿ ನಿರ್ಧರಿಸಿದೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

9 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

9 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

9 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

9 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

9 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

9 hours ago